ಬೆಂಗಳೂರು,ಮೇ,28,2026 (www.justkannada.in): ರಾಜ್ಯದಲ್ಲಿ ಹಲವು ದಿನಗಳಿಂದ ಬಾರಿ ಚರ್ಚೆಯಾಗುತ್ತಿದ್ದ ಸಿಎಂ ಬದಲಾವಣೆ ವಿಚಾರ ಅಂತಿಮ ಹಂತಕ್ಕೆ ತಲುಪಿದ್ದು ಇದೀಗ ಸಿಎಂ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
ಲೋಕಭವನಕ್ಕೆ ತೆರಳಿ ರಾಜೀನಾಮೆ ನೀಡಿರುವ ಸಿಎಂ ಸಿದ್ದರಾಮಯ್ಯ ಪತ್ರಿಕಾಗೋಷ್ಠಿ ನಡೆಸಿ ಮಾತನಾಡುತ್ತಿದ್ದಾರೆ. ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ರಾಜ್ಯಪಾಲರು ಇರಲಿಲ್ಲ ರಾತ್ರಿ ಬರುತ್ತಾರೆ ಅಂದರು. ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಕೊಟ್ಟಿದ್ದೇನೆ ಎಂದಿದ್ದಾರೆ.
ನಿನ್ನೆ ಹೈಕಮಾಂಡ್ ನವರು ರಾಜೀನಾಮೆ ನೀಡುವಂತೆ ಹೇಳಿದ್ದರು ಹೈಕಮಾಂಡ್ ಸೂಚನೆಯಂತೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
Key words: resigned , post of CM, Siddaramaiah, announcement
The post ಹೈಕಮಾಂಡ್ ಸೂಚನೆಯಂತೆ ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ- ಸಿದ್ದರಾಮಯ್ಯ ಘೋಷಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




