ಬೆಂಗಳೂರು,ಮೇ,30,2026 (www.justkannada.in): ತಮಗೆ ಡಿಸಿಎಂ ಹುದ್ದೆ ನೀಡುವಂತೆ ತಮ್ಮ ಕಾರ್ಯಕರ್ತರು ಆಗ್ರಹಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಶಾಸಕ ಕೆ.ಎಚ್ ಮುನಿಯಪ್ಪ ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಶಾಸಕ ಕೆ.ಚ್ ಮುನಿಯಪ್ಪ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೆ.ಎಚ್ ಮುನಿಯಪ್ಪ, ಸಂಜೆ 4 ಗಂಟೆಗೆ ನಡೆಯುವ ಸಿಎಲ್ ಪಿ ಸಭೆಯಲ್ಲಿ ನಾಯಕರ ಆಯ್ಕೆ ಆಗಲಿದೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿಎಂ ಹೆಸರು ಘೋಷಿಸಲಾಗುತ್ತದೆ. ಇದಾದ ಬಳಿಕ ಕೆಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲರನ್ನು ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಭೇಟಿಯಾಗಿ ಚರ್ಚಿಸುತ್ತಾರೆ. ಮುಂದಿನ ಸಂಪುಟ ಹೇಗಿರಬೇಕೆಂದು ಹೈಕಮಾಂಡ್ ಜೊತೆ ಚರ್ಚೆ ಮಾಡುತ್ತಾರೆ. 2028 ಚುನಾವಣೆ ದೃಷ್ಠಿಯಿಟ್ಟುಕೊಂಡು ಸಂಪುಟ ರಚನೆಗೆ ನಿರ್ಧಾರ ಮಾಡಲಾಗಿದ್ದು, ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ಬದ್ದ ಎಂದರು.
ತಮಗೆ ಡಿಸಿಎಂ ಸ್ಥಾ ನೀಡಲು ಆಗ್ರಹ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಪಕ್ಷದಲ್ಲಿ ಹಿರಿಯನಿದ್ದೇನೆ. ಹಲವು ಬಾರಿ ಎಂಪಿಯಾಗಿ ಕೆಲಸ ಮಾಡಿದ್ದೇನೆ. ಕೇಂದ್ರ ಮಂತ್ರಿಯಾಗಿದ್ದಾಗ ಒಳ್ಳೆಯ ಕೆಲಸಗಳನ್ನ ಮಾಡಿದ್ದೇನೆ. ಕಾಂಗ್ರೆಸ್ ವರ್ಕಿಂಗ್ ಕಮಿಟಿಯ ಸದಸ್ಯನಾಗಿಯೂ ಕೆಲಸ ಮಾಡಿದ್ದೇನೆ ಇದೆಲ್ಲವೂ ಹೈಕಮಾಂಡ್ ಗೆ ಗೊತ್ತಿದೆ. ಅಂತಿಮವಾಗಿ ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಬದ್ದ ಡಿಕೆ ಶಿವಕುಮಾರ್ ಅವರ ಕೈಬಲಪಡಿಸುವ ಕೆಲಸ ನಾವೆಲ್ಲ ಮಾಡಬೇಕಿದೆ. ಹೀಗಾಗಿ ನಾವೆಲ್ಲರೂ ಒಟ್ಟಾಗಿ 2028ರ ಚುನಾವಣೆ ಗೆಲ್ಲಬೇಕಿದೆ ಎಂದರು.
Key words: DCM, post, High Command, decision, MLA KH Muniappa
The post ಡಿಸಿಎಂ ಹುದ್ದೆ: ಹೈಕಮಾಂಡ್ ನಿರ್ಧಾರಕ್ಕೆ ಬದ್ದ- ಶಾಸಕ ಕೆ.ಎಚ್ ಮುನಿಯಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




