30
July, 2025

A News 365Times Venture

30
Wednesday
July, 2025

A News 365Times Venture

ವಾಯುಪಡೆ ಸ್ವಾಧೀನದ ಪೀಣ್ಯ, ಜಾರಕಬಂಡೆ ಅರಣ್ಯಭೂಮಿ ಮರುವಶಕ್ಕೆ ಸಚಿವ ಈಶ್ವರ್ ಖಂಡ್ರೆ ಸೂಚನೆ

Date:

ಬೆಂಗಳೂರು, ಮಾರ್ಚ್,5,2025 (www.justkannada.in):  ಬೆಂಗಳೂರಿನ ಪೀಣ್ಯ ಪ್ಲಾಂಟೇಷನ್ ಮತ್ತು ಜಾರಕಬಂಡೆ ಕಾವಲು ಪ್ರದೇಶದಲ್ಲಿ ಪ್ರಸ್ತುತ ಭಾರತೀಯ ವಾಯುಪಡೆ ವಶದಲ್ಲಿರುವ 444.12 ಎಕರೆ ಅರಣ್ಯ ಭೂಮಿಯನ್ನು ನಿಯಮಾನುಸಾರ ಮರು ವಶಕ್ಕೆ ಪಡೆಯುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಾಯುಪಡೆಗೆ 1987ರಲ್ಲಿ ಮಂಜೂರು ಮಾಡಲಾಗಿದ್ದ 570 ಎಕರೆ ಭೂಮಿಯ ಪೈಕಿ ಅರಣ್ಯ ಎಂದು ಅಧಿಸೂಚನೆ ಆಗಿರುವ 452 ಎಕರೆ ಮಂಜೂರಾತಿ ರದ್ದುಪಡಿಸಿ, 2017ರಲ್ಲಿ ಸರ್ಕಾರ ಆದೇಶ ಹೊರಡಿಸಿದೆ. ಆದರೂ ಭಾರತೀಯ ವಾಯುಪಡೆ ಮಾ.1ರಂದು ಎಫ್.ಸಿ. (ಅರಣ್ಯ ತೀರುವಳಿ) ಅನುಮತಿ ಪಡೆಯದೆ ಅಕ್ರಮವಾಗಿ ನಿರ್ಮಾಣ ಕಾಮಗಾರಿ ಆರಂಭಿಸಿತ್ತು. ಇದನ್ನು ತಡೆಯಲಾಗಿದೆ ಎಂದು ಅರಣ್ಯಾಧಿಕಾರಿಗಳು ಇಂದು ತಿಳಿಸಿದ ಹಿನ್ನೆಲೆಯಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಈ ಸೂಚನೆ ನೀಡಿದ್ದಾರೆ.

ಸರ್ಕಾರದ 2017ರ ಆದೇಶದನ್ವಯ ಮ್ಯುಟೇಷನ್ ಆಗಿದ್ದು, ಪ್ರಸ್ತುತ ಈ ಜಮೀನಿನ ಪಹಣಿಯಲ್ಲಿ ಮೀಸಲು ಅರಣ್ಯ ಎಂದು ನಮೂದಾಗಿದೆ. ಅರಣ್ಯ ಇಲಾಖೆ ಈ ವಿಷಯವನ್ನು ವಾಯುಪಡೆಯ ಅಧಿಕಾರಿಗಳ ಗಮನಕ್ಕೆ ತಂದು ಸದರಿ ಜಮೀನು, ಮೀಸಲು ಅರಣ್ಯ ಎಂಬ ಫಲಕವನ್ನೂ ಹಾಕಿದೆ. ಈ ಅರಣ್ಯ ಭೂಮಿ ತೆರವು ಮಾಡುವಂತೆ ರಕ್ಷಣಾ ಸಚಿವಾಲಯಕ್ಕೆ ಪತ್ರವನ್ನೂ ಬರೆಯಲಾಗಿದೆ. ಸಂಪೂರ್ಣ ಮಾಹಿತಿ ಇದ್ದರೂ ವಾಯುಪಡೆ ಅನಧಿಕೃತವಾಗಿ, ನಿಯಮ ಮೀರಿ ನಿರ್ಮಾಣ ಕಾಮಗಾರಿ ನಡೆಸುತ್ತಿತ್ತು, ಪ್ರಸ್ತುತ ಕಾಮಗಾರಿ ನಿಲ್ಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ಪ್ರಸ್ತುತ 444 ಎಕರೆ ಜಮೀನಿನ ಪೈಕಿ ಸುಮಾರು 15 ಎಕರೆ ಪ್ರದೇಶದಲ್ಲಿ ವಾಯುಪಡೆ ಶೂಟಿಂಗ್ ರೇಂಜ್ ನಿರ್ಮಿಸಿಕೊಂಡು ತರಬೇತಿ ನೀಡುತ್ತಿದೆ. ಸ್ವಲ್ಪ ಜಮೀನಿನಲ್ಲಿ ವಾಯುಪಡೆಯ ಕಚೇರಿ ಇತ್ಯಾದಿ ನಿರ್ಮಿಸಿದೆ. ಉಳಿದ ಭೂಮಿ ಅರಣ್ಯ ಸ್ವರೂಪದಲ್ಲೇ ಇದ್ದು, ಮರ, ಗಿಡಗಳಿಂದ ಸಮೃದ್ಧವಾಗಿದೆ ಎಂದು ಅಧಿಕಾರಿಗಳು ವಿವರಿಸಿದರು. ಕೂಡಲೇ ಅರಣ್ಯ ಸ್ವರೂಪದ ಜಮೀನನ್ನು ವಶಕ್ಕೆ ಪಡೆಯಲು ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳುವಂತೆ ಮತ್ತು ವಾಯುಪಡೆ ಬಳಕೆ ಮಾಡುತ್ತಿರುವ ಜಮೀನಿಗೆ ಸಂಬಂಧಿಸಿದಂತೆ ಪರ್ವೇಶ್ ಪೋರ್ಟಲ್ ನಲ್ಲಿ ನಿಯಮಾನುಸಾರ ಅರ್ಜಿ ಹಾಕಿ ಎಫ್.ಸಿ. ಪಡೆಯಲು ವಾಯುಪಡೆಗೆ ಪತ್ರ ಬರೆಯಲು ಈಶ್ವರ ಖಂಡ್ರೆ ಸೂಚಿಸಿದರು.

Key words: Air Force, acquisition, forest land, rehabilitation, Minister, Ishwar Khandre

The post ವಾಯುಪಡೆ ಸ್ವಾಧೀನದ ಪೀಣ್ಯ, ಜಾರಕಬಂಡೆ ಅರಣ್ಯಭೂಮಿ ಮರುವಶಕ್ಕೆ ಸಚಿವ ಈಶ್ವರ್ ಖಂಡ್ರೆ ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿಎಂ ಸಿದ್ದರಾಮಯ್ಯಗೆ ಶಕ್ತಿ ಪ್ರದರ್ಶನ ಮಾಡುವ ಅವಶ್ಯಕತೆ ಇಲ್ಲ- ಸಚಿವ ದಿನೇಶ್ ಗುಂಡೂರಾವ್‍

ಕಾರವಾರ,ಜುಲೈ,30,2025 (www.justkannada.in): ಸಿಎಂ ಸಿದ್ದರಾಮಯ್ಯಗೆ ಶಕ್ತಿ ಪ್ರದರ್ಶನ ಮಾಡುವ ಅವಶ್ಯಕತೆ ಇಲ್ಲ...

ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಆರೋಪ: ಯಾವುದೇ ಸಾಕ್ಷಿ ನೀಡಿಲ್ಲ- ಸಚಿವ ಚಲುವರಾಯಸ್ವಾಮಿ

ಬೆಂಗಳೂರು,ಜುಲೈ,30,2025 (www.justkannada.in):  ರಸಗೊಬ್ಬರವನ್ನ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ವಿಪಕ್ಷದವರು ಆರೋಪ...

ಡ್ರಗ್ಸ್ ಮಾಫಿಯಾ ವಿರುದ್ದ ಕಾರ್ಯಾಚರಣೆ: ಖುದ್ದು ಫೀ‍ಲ್ಡ್ ಗಿಳಿದು ತಪಾಸಣೆ ನಡೆಸಿದ ಪೊಲೀಸ್ ಕಮಿಷನರ್

ಮೈಸೂರು,ಜುಲೈ,30,2025 (www.justkannada.in):  ಮೈಸೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ದ ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು...

ರಾಜ್ಯದಲ್ಲಿ ರಸಗೊಬ್ಬರ ಕೊರತೆ: ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ ಡಾ.ಕೆ. ಸುಧಾಕರ್

ನವದೆಹಲಿ,ಜುಲೈ,30,2025 (www.justkannada.in): ರಾಜ್ಯದಲ್ಲಿ ರಸಗೊಬ್ಬರದ ಕೊರತೆಯುಂಟಾಗಿದ್ದು ರೈತರು ಪರದಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ...