12
July, 2025

A News 365Times Venture

12
Saturday
July, 2025

A News 365Times Venture

BREAKING NOW: ಮಸೀದಿ ವಿವಾದ , ನಾಳೆ ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ.

Date:

ಮೈಸೂರು, ಮಾ.13,2025: ಹೈಕೋರ್ಟ್ ನಿರ್ದೇಶನದ ಮೇರೆಗೆ ಕ್ಯಾತಮಾರನಹಳ್ಳಿಯ ಮಸೀದಿಗೆ ಬೀಗ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಳೆ ಬೆಳಗ್ಗೆ 11 ಗಂಟೆಗೆ ಸಭೆ ಕರೆಯಲಾಗಿದೆ.

ಒಂಬತ್ತು ವರ್ಷಗಳ ಹಿಂದೆ, ಆರ್. ಎಸ್. ಎಸ್. ಕಾರ್ಯಕರ್ತ ರಾಜು ಹತ್ಯೆ ಘಟನೆ ಬಳಿಕ ಉದಯಗಿರಿ ಪೊಲೀಸ್ ಠಾಣೆ ವ್ಯಾಪ್ತಿಯ  ಗಾಯತ್ರಿಪುರಂ ಎರಡನೇ ಹಂತ ಕ್ಯಾತಮಾರನಹಳ್ಳಿ ಮುಖ್ಯ ರಸ್ತೆಯಲ್ಲಿರುವ ಮಸೀದಿಗೆ ಬೀಗ ಹಾಕಲಾಗಿತ್ತು.

ಬಳಿಕ Aleema Sadlys Education institution & Masjid-E-Siddique-E-Akbar Trust ಬೀಗ ಹಾಕಿರುವುದನ್ನು ಪ್ರಶ್ನಿಸಿ ಕೋರ್ಟ್‌ ಮೆಟ್ಟಿಲೇರಿತ್ತು. ಈ ಹಿನ್ನೆಲೆಯಲ್ಲಿ ಇದೀಗ ನ್ಯಾಯಾಲಯ, ಮಸೀದಿಗೆ ಬೀಗ ಹಾಕಿರುವುದನ್ನು ಮುಂದುವರಿಸುವ  ಅಥವಾ ಸದರಿ ಟ್ರಸ್ಟ್ ಬೀಗ ತೆರೆದು ಕಾರ್ಯ ಪರಾಮರ್ಶಿಸಲು ಆಸಕ್ತ ಸಂಘ ಸಂಸ್ಥೆ ಅಥವಾ ವ್ಯಕ್ತಿಗಳ  ಅಭಿಪ್ರಾಯ ಪಡೆಯಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ.

ಈ ಸಂಬಂಧ ಹೈಕೋರ್ಟ್ ನೀಡಿದ್ದ ನಿರ್ದೇಶನದಂತೆ ಜಿಲ್ಲಾಧಿಕಾರಿಗಳು ಸೋಮವಾರ (ಮಾ. 10 ರಂದು ) ಕರೆದಿದ್ದ ಸಭೆ  ಕಾರಾಣಾಂತರಗಳಿಂದ ನಡೆಯಲಿಲ್ಲ. ಬದಲಿಗೆ ಸಭೆಯನ್ನು ನಾಳೆಗೆ (ಮಾ. 14 ಕ್ಕೆ ) ಮುಂದೂಡಲಾಗಿದೆ. ಅಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಸಭೆ ನಡೆಯಲಿದೆ.

ದಶಕದ ಬಳಿಕ ಮುನ್ನಲೆಗೆ:

ಆರ್‌ಎಸ್‌ಎಸ್ ಕಾರ್ಯಕರ್ತ ರಾಜು ಹತ್ಯೆ ಪ್ರಕರಣ  ನಡೆದು ದಶಕದ ಬಳಿಕ ಮತ್ತೆ ಈಗ ಮಸೀದಿಗೆ ಬೀಗ ಹಾಕಿರುವ ವಿಷಯ ಮುನ್ನಲೆಗೆ ಬಂದಿದೆ.

ಈ ಘಟನೆ ಬಳಿಕ ವಿವಾದಿತ ಮಸೀದಿಗೆ ಬೀಗ ಹಾಕಲಾಗಿತ್ತು. ಇದನ್ನು ಪ್ರಶ್ನಿಸಿ ಟ್ರಸ್ಟ್  ಪರವಾಗಿ ಮುನಾವರ್ ಪಾಶ ಕೋರ್ಟ್ ಮೊರೆ ಹೋಗಿದ್ದರು. (WRIT PETITION NO. 49775 OF 2019 (GM-POLICE). ಇದು ನ್ಯಾಯಮೂರ್ತಿ ನಾಗಪ್ರಸನ್ನ ಅವರ ಮುಂದೆ ವಿಚಾರಣೆಗೆ ಬಂದಿತ್ತು. ಆಗ ಪ್ರಕರಣವನ್ನು ಸ್ಥಳೀಯಮಟ್ಟದಲ್ಲೇ ಮಾತುಕತೆ ನಡೆಸಿ 12 ವಾರಗಳಲ್ಲಿ ಇತ್ಯರ್ಥ ಪಡಿಸುವಂತೆ ಮೈಸೂರು ಜಿಲ್ಲಾಧಿಕಾರಿಗೆ ಕೋರ್ಟ್ ನಿರ್ದೇಶನ ನೀಡಿತು.

key words: Mosque dispute, Meeting,  District Collector, Mysore, High court

Mosque dispute: Meeting to be held tomorrow at 11 am under the chairmanship of the District Collector.

The post BREAKING NOW: ಮಸೀದಿ ವಿವಾದ , ನಾಳೆ ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸೈನ್ಯ ,ಅಂತರಿಕ್ಷದಲ್ಲೂ ಕೆಲಸ ಪ್ರಗತಿಯ ಪ್ರತೀಕ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು ಜುಲೈ,13,2025 (www.justkannada.in):  ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು,...

ಸರ್ಕಾರದಲ್ಲಿ ಮೋಡ ಕವಿದ ವಾತಾವರಣ: ಯಾವಾಗ ಗುಡುಗು ಸಿಡಿಲು ಬರುತ್ತೋ ಗೊತ್ತಿಲ್ಲ-ಬಿವೈ ವಿಜಯೇಂದ್ರ

ಬೆಂಗಳೂರು,ಜುಲೈ,12,2025 (www.justkannada.in): ಸರ್ಕಾರದಲ್ಲಿ ಒಂದು ರೀತಿಯ ಮೋಡ ಕವಿದ ವಾತಾವರಣವಿದೆ ....

ಬೀದಿನಾಯಿಗಳಿಗೆ ಬಿರಿಯಾನಿ: ಲೂಟಿ ಮಾಡುವ ಉದ್ದೇಶ- ಆರ್‌.ಅಶೋಕ್

ಬೆಂಗಳೂರು, ಜುಲೈ 12,2025 (www.justkannada.in): ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ...

ಅಸಂಘಟಿತ ಕಾರ್ಮಿಕರಿಗೂ ಸಾಮಾಜಿಕ ಭದ್ರತೆಗೆ ಚಿಂತನೆ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಬೆಂಗಳೂರು,ಜುಲೈ,12,2025 (www.justkannada.in): ಸಂಘಟಿತ ಕಾರ್ಮಿಕರಂತೆಯೇ ಅಸಂಘಟಿತ ಕಾರ್ಮಿಕರಿಗೂ ಸಾಮಾಜಿಕ ಭದ್ರತೆ ಒದಗಿಸಿಕೊಡುವ...