20
July, 2025

A News 365Times Venture

20
Sunday
July, 2025

A News 365Times Venture

JK EXCLUSIVE: 400 ವರ್ಷಗಳ ಬಳಿಕ ಈ ಬಾರಿ ದಾಖಲೆ ಬರೆಯಲಿದೆ ದಸರಾ..!

Date:

ಮೈಸೂರು,ಜೂನ್,19,2025 (www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಸಾಮಾನ್ಯವಾಗಿ ಪ್ರತಿ ವರ್ಷ 10 ದಿನಗಳ ಕಾಲ ನಡೆಯುತ್ತದೆ. ದಸರಾ ಪ್ರಾರಂಭವಾಗಿದ್ದಾಗಿನಿಂದಲೂ ಅಂದರೆ 400 ವರ್ಷಗಳಿಂದಲೂ 10 ದಿನಗಳ ಕಾಲ ನಡೆಯುತ್ತಲೇ ಬಂದಿದೆ. ದಸರಾ ಎಂದರೆ‌ ದಶ+ಹರ – ಹತ್ತು ದಿನಗಳ ಆಚರಣೆ. ಆದರೆ ಈ ಬಾರಿ ಮಾತ್ರ ದಸರಾ ಮಹೋತ್ಸವ ದಾಖಲೆ ಬರೆಯಲಿದೆ.

ಹೌದು ಏಕೆಂದರೆ  ಈ ಬಾರಿ ದಸರಾ 10 ಅಲ್ಲ, 11 ದಿನ.  ಈ ಬಾರಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2ರವರೆಗೆ ದಸರಾ ಆಚರಣೆ ಮಾಡಲಾಗುತ್ತದೆ. ಸೆಪ್ಟಂಬರ್ 26, ಸೆ.27 ಎರಡೂ ದಿನ ಪಂಚಮಿ ಆಗಮನವಿದ್ದು, ಹೀಗಾಗಿ ಈ ಬಾರಿ 11 ದಿನ ದಸರಾ ಆಚರಣೆ  ಇರಲಿದೆ. ಇದು ಇತಿಹಾಸದಲ್ಲೇ ಕಂಡು- ಕೇಳರಿಯದ ರೀತಿಯ ದಸರಾ ಮಹೋತ್ಸವ ಆಗಿದ್ದು,  ನಾಲ್ಕು‌ ನೂರಕ್ಕೂ‌ ಹೆಚ್ಚು ವರ್ಷಗಳ ಇತಿಹಾಸದಲ್ಲೇ ಈ ರೀತಿ 11 ದಿನಗಳ ಕಾಲ ದಸರಾ ಆಚರಣೆ ಮಾಡುತ್ತಿರುವುದು ಇದೇ ಪ್ರಥಮ ಬಾರಿ..!

ಈ ಹಿನ್ನೆಲೆಯಲ್ಲಿ ಈ ಬಾರಿಯ ದಸರಾ ದಿನಗಳು ವಿದ್ವಾಂಸರಲ್ಲಿಯೇ ಗೊಂದಲ‌ ಹುಟ್ಟುಹಾಕಿದೆ.  1399ರ‌ ವಿಜಯನಗರ ಸಾಮ್ರಾಜ್ಯದ ಆಳ್ವಿಕೆ, 1410 ರ ಮೈಸೂರು ಸಂಸ್ಥಾನದ ಆಳ್ವಿಕೆ ಕಾಲದಿಂದ ದಸರಾ ಮಹೋತ್ಸವ ಆಚರಣೆ ಮಾಡಲಾಗುತ್ತಿದ್ದು, ಈವರೆಗೆ 11 ದಿನಗಳ ಕಾಲ ದಸರಾ ಮಹೋತ್ಸವ ಆಚರಿಸಿದ ಉದಾಹರಣೆಗಳಿಲ್ಲ. ನವರಾತ್ರಿಯ ಮರುದಿನ ವಿಜಯದಶಮಿ‌ ಆಚರಿಸುವುದು ಸಂಪ್ರದಾಯ. ವಿಜಯದಶಮಿಯಂದು ಅರಮನೆಯಲ್ಲಿ ಪೂಜೆ ಪುನಸ್ಕಾರಗಳು ನಡೆದರೇ ಸರ್ಕಾರದ ವತಿಯಿಂದ ಜಂಬೂ ಸವಾರಿ ಮೆರವಣಿಗೆ ನಡೆಯಲಿದೆ.

ಇನ್ನು 11 ದಿನಗಳ ದಸರಾ ಆಚರಣೆ ಅಚ್ಚರಿ, ಕೌತುಕದ ಜೊತೆಗೆ ಚರ್ಚೆ ಹುಟ್ಟು ಹಾಕಿದ್ದು, ರಾಜ್ಯ ಸರ್ಕಾರ, ಯದುವಂಶದ ರಾಜವಂಶಸ್ಥರು ದಸರಾ ಹೇಗೆ ಆಚರಿಸ್ತಾರೆ? ಕಾದು ನೋಡಬೇಕಿದೆ.vtu

Key words: Mysore Dasara-2025,  record-breaking, after, 400 years

The post JK EXCLUSIVE: 400 ವರ್ಷಗಳ ಬಳಿಕ ಈ ಬಾರಿ ದಾಖಲೆ ಬರೆಯಲಿದೆ ದಸರಾ..! appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೋದಿ ಕೇವಲ ಪ್ರಚಾರ ಪ್ರಿಯ: ಯಾವುದೇ ಕಾರಣಕ್ಕೂ ಸಂವಿಧಾನ ಬದಲಾವಣೆ ಮಾಡಲು ಆಗಲ್ಲ-ಮಲ್ಲಿಕಾರ್ಜುನ ಖರ್ಗೆ

ಮೈಸೂರು,ಜುಲೈ,19,2025 (www.justkannada.in): ಪ್ರಧಾನಿ ಮೋದಿ ಕೇವಲ ಪ್ರಚಾರಪ್ರಿಯ. ಬಿಜೆಪಿಯವರು ಎಷ್ಟೇ ತಿಪ್ಪರಲಾಗ...

ನಮ್ಮ ಗ್ಯಾರಂಟಿಗಳ ಕದ್ದ ಬಿಜೆಪಿಗೆ ನಾಚಿಕೆ ಇಲ್ಲ: ಅವರ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ- ಸಿಎಂ ಸಿದ್ದರಾಮಯ್ಯ

ಮೈಸೂರು ಜುಲೈ, 19,2025 (www.justkannada.in): ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ...

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ- ಸಚಿವ ಕೆ.ವೆಂಕಟೇಶ್

ಮೈಸೂರು,ಜುಲೈ,19,2025 (www.justkannada.in): ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸುತ್ತಾರೆಂದು ಬಿಜೆಪಿ ಜೆಡಿಎಸ್ ಅಪಪ್ರಚಾರ ಮಾಡುತ್ತಿವೆ....

ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ 1.06 ಕೋಟಿ ರೂ. ಪರಿಹಾರ ವಿತರಣೆ

ಮೈಸೂರು, ಜುಲೈ 19, 2025 (www.justkannada.in): ನಿಗಮದ ಸಿಬ್ಬಂದಿ ಹಾಗೂ ಅಧಿಕಾರಿಗಳ...