21
August, 2026

A News 365Times Venture

21
Friday
August, 2026

A News 365Times Venture

KMF ಪಶು ಆಹಾರ ಕಲಬೆರಕೆ ಅವ್ಯವಹಾರ ಪ್ರಕರಣ: ನಾಲ್ವರು ಹಿರಿಯ ಅಧಿಕಾರಿಗಳು ಸಸ್ಪೆಂಡ್

Date:

ಬೆಂಗಳೂರು,ಆಗಸ್ಟ್,20,2026 (www.justkannada.in): ಕೆಎಂಎಫ್ ಪಶು ಆಹಾರ ಕಲಬೆರಕೆ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಹಿರಿಯ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಜಿಎಸ್ ನಾಗೇಶ್ ಹಿರಿಯ ಉಪನಿರ್ದೇಶಕರು(ಪಶು ಆಹಾರ), ಜೆ.ಜಯಕುಮಾರ್ ನಿರ್ದೇಶಕರು (ಪಶು ಆಹಾರ),  ಸೋಮನಾಥ್ ಉಪನಿರ್ದೇಶಕರು(ಪಶು ಆಹಾರ),  ಸಿ ಮಲ್ಲಿಕಾರ್ಜುನ ವ್ಯವಸ್ಥಾಪಕರು(ಪಶು ಆಹಾರ) ಅಮಾನತಾದವರು. ಅಮಾನತು ಮಾಡಿ ಕೆಎಂಎಫ್ ಎಂಡಿ ಡಾ.ಎಸ್ ಟಿ ಸುರೇಶ್  ಅವರು ಆದೇಶ ಹೊರಡಿಸಿದ್ದಾರೆ.

ರಾಜಾನುಕುಂಟೆ ಪಶು ಆಹಾರ ಘಟಕದಲ್ಲಿ ಕಳಪೆ ಗುಣಮಟ್ಟದ ಕಚ್ಚಾ ವಸ್ತುಗಳನ್ನು ಬಳಸಿ ಪಶು ಆಹಾರ ತಯಾರಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇಂತಹ ಆಹಾರವನ್ನು ರೈತರಿಗೆ ಪೂರೈಕೆ ಮಾಡಲಾಗಿದ್ದು, ಅದನ್ನು ಸೇವಿಸಿದ ಬಳಿಕ ಹಲವು ಪಶುಗಳು ಅನಾರೋಗ್ಯಕ್ಕೆ ಒಳಗಾಗಿವೆ ಎಂದು ರೈತರು ಆರೋಪಿಸಿದ್ದಾರೆ.

ಪಶು ಆಹಾರ ತಯಾರಿಕೆಗೆ ಬಳಸುವ ಕಚ್ಚಾ ವಸ್ತುಗಳ ಖರೀದಿ ಮತ್ತು ಗುಣಮಟ್ಟದ ಪರಿಶೀಲನೆಯಲ್ಲಿ ಅಕ್ರಮ ನಡೆದಿರುವ ಅನುಮಾನವನ್ನು ರೈತರು ವ್ಯಕ್ತಪಡಿಸಿದ್ದಾರೆ. ಸುಮಾರು 86 ಸಾವಿರ ಮೆಟ್ರಿಕ್ ಟನ್ ಪಶು ಆಹಾರ ಕಳಪೆ ಗುಣಮಟ್ಟದ್ದಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಆಹಾರವನ್ನು ರೈತರು ಸ್ವೀಕರಿಸದೆ ಘಟಕಕ್ಕೆ ವಾಪಸ್ ಕಳುಹಿಸುತ್ತಿದ್ದಾರೆ ಎಂಬುದು ತಿಳಿದುಬಂದಿದೆ.

ಪಶು ಆಹಾರ ತಯಾರಿಕೆಗೆ ಬಳಸುವ ಮೊಲಾಸಸ್‌ (ಕಾಕಂಬಿ) ಸೇರಿದಂತೆ ವಿವಿಧ ಕಚ್ಚಾ ವಸ್ತುಗಳ ಖರೀದಿಯಲ್ಲೂ ಅಕ್ರಮ ನಡೆದಿರುವ ಆರೋಪವಿದೆ. ಗುಣಮಟ್ಟ ಕಡಿಮೆ ಇರುವ TRS ಹೊಂದಿದ್ದ ಕಾಕಂಬಿಯನ್ನು ಖರೀದಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದ್ದು ನಿನ್ನೆ ಈ ಕುರಿತು ಮಾಧ್ಯಮವೊಂದರಲ್ಲಿ ವರದಿಯಾಗಿತ್ತು.

Key words: KMF, animal, feed, adulteration case,  Four, senior officials, suspended

The post KMF ಪಶು ಆಹಾರ ಕಲಬೆರಕೆ ಅವ್ಯವಹಾರ ಪ್ರಕರಣ: ನಾಲ್ವರು ಹಿರಿಯ ಅಧಿಕಾರಿಗಳು ಸಸ್ಪೆಂಡ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಂಡ್ಯ ಕೃಷಿ ವಿವಿಯ ಕೃಷಿ ವಿಜ್ಞಾನ ಕೇಂದ್ರದ ಸಹಾಯಕ ಹುದ್ದೆಗೆ ತೃತೀಯ ಲಿಂಗಿ ಆಯ್ಕೆ

ಮಂಡ್ಯ,ಆಗಸ್ಟ್, 21,2026 (www.justkannada.in): ತೃತೀಯ ಲಿಂಗಿ ಮೈನಾ ಹೆಚ್. ಅವರು ಮಂಡ್ಯ...

15 ಸಾವಿರ ಶಿಕ್ಷಕರ ನೇಮಕಾತಿ: ಅಭ್ಯರ್ಥಿಗಳ ಗೊಂದಲ ನಿವಾರಣೆಗೆ FAQ ಪ್ರಕಟ

ಬೆಂಗಳೂರು, ಆಗಸ್ಟ್,20,2026 (www.justkannada.in): ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 15 ಸಾವಿರ...

ಕೆಪಿಎಸ್ ಸಿ ಮಾಜಿ ಅಧ್ಯಕ್ಷರ ಮರುನೇಮಕಕ್ಕೆ ಆದೇಶ ವಿಚಾರ: ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ- ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಆಗಸ್ಟ್,21,2026 (www.justkannada.in): ಕೆಪಿಎಸ್ ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಅವರನ್ನು 7ದಿನದೊಳಗೆ...

ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹ:  ಕಪ್ಪು ಟೀ ಶರ್ಟ್ ಧರಿಸಿ BJP-JDS ಶಾಸಕರ ಪ್ರತಿಭಟನೆ

ಬೆಂಗಳೂರು,ಆಗಸ್ಟ್,21,2026 (www.justkannada.in): ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಶಾಸಕರು ಕಪ್ಪು...