12
March, 2026

A News 365Times Venture

12
Thursday
March, 2026

A News 365Times Venture

LPG ಉತ್ಪಾದನೆ ಶೇ. 28ರಷ್ಟು ಹೆಚ್ಚಳ: ಪೂರೈಕೆಯಲ್ಲಿ ವ್ಯತ್ಯಯವಿಲ್ಲ- ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ

Date:

ನವದೆಹಲಿ ,ಮಾರ್ಚ್,12,2026 (www.justkannada.in):  ಕಳೆದ 5 ದಿನಗಳಲ್ಲಿ ಎಲ್ ಪಿಜಿ ಉತ್ಪಾದನೆ ಶೇ. 28ರಷ್ಟು ಹೆಚ್ಚಾಗಿದೆ, ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟಪಡಿಸಿದರು.

ಇಂದು ಲೋಕಸಭೆಯಲ್ಲಿ ಮಾತನಾಡಿದ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, ಭಾರತದ ಕಚ್ಚಾ ತೈಲ ಪೂರೈಕೆ ಸ್ಥಿತಿ ಸುಭದ್ರವಾಗಿದೆ. ಭಾರತಕ್ಕೆ ಕಚ್ಚಾತೈಲ ಪೂರೈಕೆಯಲ್ಲಿ ವ್ಯತ್ಯಯವಾಗಿಲ್ಲ. ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಕೊರತೆ ಆಗಿಲ್ಲ.  ಇಂದಿನಿಂದಲೇ ಕಮರ್ಷಿಯಲ್ ಗ್ಯಾಸ್ ಪೂರೈಕೆಯಾಗುತ್ತೆ. ಸಿಲಿಂಡರ್ ಪೂರೈಕೆ ಮೊದಲ ಆದ್ಯತೆಯಾಗಿದೆ ಎಂದರು.

ವಿದೇಶದಿಂದ ಕಚ್ಚಾತೈಲ ಆಮದಾಗುತ್ತಿದೆ.  ಹಾರ್ಮೇಜ್ ಜಲಸಂಧಿ ಹೊರತುಪಡಿಸಿ ಬೇರೆ ಕಡೆಯಿಂದ ಅಮದು ಮಾಡಿಕೊಳ್ಳಲಾಗುತ್ತಿದೆ. ಇಂದಿನಿಂದಲೇ ವಾಣಿಜ್ಯ ಬಳಕೆ ಸಿಲಿಂಡರ್ ಪೂರೈಕೆ ಮಾಡುತ್ತೇವೆ. “ಬಿಕ್ಕಟ್ಟಿನ ಮೊದಲು, ಭಾರತದ ಕಚ್ಚಾ ತೈಲ ಆಮದುಗಳಲ್ಲಿ ಸರಿಸುಮಾರು 45% ಹಾರ್ಮುಜ್ ಜಲಸಂಧಿ ಮಾರ್ಗದ ಮೂಲಕ ಸಾಗುತ್ತಿತ್ತು. ಪ್ರಧಾನಿಯವರ ಅತ್ಯುತ್ತಮ ರಾಜತಾಂತ್ರಿಕ ಸಂಪರ್ಕ ಮತ್ತು ಸದ್ಭಾವನೆಗೆ ಧನ್ಯವಾದಗಳು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದರು.

Key words: LPG, Production, increase, supply, Union Minister, Hardeep Singh Puri

The post LPG ಉತ್ಪಾದನೆ ಶೇ. 28ರಷ್ಟು ಹೆಚ್ಚಳ: ಪೂರೈಕೆಯಲ್ಲಿ ವ್ಯತ್ಯಯವಿಲ್ಲ- ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕಾರವಾರದ ಬದಲು ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಆಗ್ರಹ: ಸಚಿವರ ಉತ್ತರವಿದು.

ಬೆಂಗಳೂರು,ಮಾರ್ಚ್,12,2026 (www.justkannada.in): ಕಾರವಾರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಉತ್ತರ...

ಜಲ ಜೀವನ್‌ ಮಿಷನ್‌ಗೆ ಕಾಯಕಲ್ಪ, 2028 ರವರೆಗೆ ವಿಸ್ತರಿಸಿದ್ದು ಸ್ವಾಗತಾರ್ಹ-ಸಂಸದ ಯದುವೀರ್

ಮೈಸೂರು, ಮಾರ್ಚ್, 12,2026 (www.justkannada.in): ಜಲ ಜೀವನ್ ಮಿಷನ್ (JJM) 2.0...

ಅಡಿಕೆ ಕಳ್ಳತನ ಮಾಡಿದ್ದ ಮೂವರು ಕಳ್ಳರು ಅಂದರ್

ಮೈಸೂರು,ಮಾರ್ಚ್,12,2026 (www.justkannada.in): ಸುಮಾರು 15 ಕ್ವಿಂಟಾಲ್ ನಷ್ಟು ಅಡಿಕೆಯನ್ನು ಕಳ್ಳತನ ಮಾಡಿದ್ದ...

ಶಾಸಕ ಭೈರತಿ ಬಸವರಾಜುಗೆ ಷರತ್ತುಬದ್ಧ ಜಾಮೀನು ಮಂಜೂರು

ಬೆಂಗಳೂರು,ಮಾರ್ಚ್,12,2026 (www.justkannada.in): ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಭೈರತಿ...