8
July, 2025

A News 365Times Venture

8
Tuesday
July, 2025

A News 365Times Venture

POK ವಾಪಸ್ ಪಡೆಯಲು ಒಳ್ಳೆಯ ಸಮಯವಿತ್ತು: ಆದ್ರೆ ಕದನ ವಿರಾಮ ಘೋಷಿಸಿದ್ದು ಯಾಕೆ? ವಿ.ಎಸ್ ಉಗ್ರಪ್ಪ

Date:

ಬಳ್ಳಾರಿ,ಮೇ,15,2025 (www.justkannada.in):  ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಪಿಒಕೆ ವಾಪಸ್ ಪಡೆಯಲು ಒಳ್ಳೆಯ ಸಮಯವಿತ್ತು. ಆದರೆ ಈ ವೇಳೆ ಕದನ ವಿರಾಮ ಘೋಷಿಸಿದ್ದು ಯಾಕೆ?  ಎಂದು ಕೇಂದ್ರ ಸರ್ಕಾರದ ವಿರುದ್ದ ಮಾಜಿ ಸಂಸದ ವಿಎಸ್ ಉಗ್ರಪ್ಪ ಕಿಡಿಕಾರಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ವಿಎಸ್ ಉಗ್ರಪ್ಪ,  ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲಿನ ಉಗ್ರರ ದಾಳಿಯಲ್ಲಿ 28 ಜನರು ಸಾವನ್ನಪ್ಪಿದರು. ಈ ಹಿನ್ನೆಲೆಯಲ್ಲಿ ಉಗ್ರರ ಮೇಲೆ ಭಾರತೀಯ ಸೇನೆ ನಡೆಸಿದ್ದ ಅಪರೇಷನ್ ಸಿಂಧೂರ ದಾಳಿಯಿಂದ ಪಾಕ್ ಆಕ್ರಮಿತ ಪಿಓಕೆ ವಾಪಸ್ ಪಡೆಯಲು ಮತ್ತು ಉಗ್ರರ ನೆಲೆಗಳೊಂದಿಗೆ ಅವರ ಬಳಿಯಿರುವ ಶಸ್ತ್ರಾಸ್ತ್ರಗಳನ್ನು ನಾಶ ಪಡಿಸಲು ಒಳ್ಳೆಯ ಅವಕಾಶ ಇತ್ತು. ಆದರೆ, ಪ್ರಧಾನಿ ಮೋದಿಯವರು ಏಕೆ ಕದನ ವಿರಾಮ ಘೋಷಿಸಿದರೋ ಗೊತ್ತಿಲ್ಲ. ಕದನ ವಿರಾಮ ಘೋಷಣೆ ಮಾಡಿದ್ದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್. ಇದಕ್ಕೆ ಅಮೆರಿಕ ಮಧ್ಯಸ್ಥಿಕೆ ವಹಿಸಿದ್ದು ಯಾಕೆ..? ಎಂದು ಪ್ರಶ್ನಿಸಿದರು.

ಕದನ ವಿರಾಮ ಘೋಷಿಸಲು ಯಾರೊಂದಿಗೆ ಚರ್ಚಿಸಿದ್ದರು. ಸೇನಾ ಮುಖ್ಯಸ್ಥರೊಂದಿಗೆ ಚರ್ಚಿಸಿದ್ಧಾರಾ? ಸರ್ವಪಕ್ಷಗಳ ಸಭೆ ಕರೆದಾಗ ಪ್ರಧಾನಿ ನರೇಂದ್ರ ಮೋದಿಯವರೇ ಗೈರು ಹಾಜರಾಗುತ್ತಾರೆ. ಯಾರೊಂದಿಗೆ ಚರ್ಚಿಸಿ ನಿರ್ಣಯ ಕೈಗೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರೀಯ ನಾಯಕತ್ವವನ್ನು ಪ್ರದರ್ಶಿಸಬೇಕು ಎಂದು ವಿ.ಎಸ್ ಉಗ್ರಪ್ಪ ಕುಟುಕಿದರು.

Key words: POK,  declare, ceasefire,  VS Ugrappa

The post POK ವಾಪಸ್ ಪಡೆಯಲು ಒಳ್ಳೆಯ ಸಮಯವಿತ್ತು: ಆದ್ರೆ ಕದನ ವಿರಾಮ ಘೋಷಿಸಿದ್ದು ಯಾಕೆ? ವಿ.ಎಸ್ ಉಗ್ರಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶಾಸಕರ ಜೊತೆ ಸುರ್ಜೇವಾಲ ಸಭೆ: ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಧಾರವಾಡ,ಜುಲೈ,8,2025 (www.justkannada.in):  ಕಾಂಗ್ರೆಸ್ ಶಾಸಕರ ಜೊತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್...

ರಾಜ್ಯದಲ್ಲಿ ಕಾಂಗ್ರೆಸ್ ದಿವಾಳಿ: ಸಿದ್ದರಾಮಯ್ಯ ಜೈಲಿಗೆ ಹೋಗಲಿದ್ದಾರೆ- ಪ್ರತಾಪ್ ಸಿಂಹ

ದಾವಣಗೆರೆ,ಜುಲೈ,8,2025 (www.justkannada.in): ಮುಡಾ ಕೇಸ್ ನಲ್ಲಿ ಜೈಲಿಗೆ ಹೋಗುವುದನ್ನ ಸಿಎಂ ಸಿದ್ದರಾಮಯ್ಯ...

ಆಡಳಿತ ಸುಧಾರಣೆ ಬಗ್ಗೆ ಚರ್ಚೆ: ಶಾಸಕರು ಸಾಕಷ್ಟು ಸಮಸ್ಯೆ ಹೇಳುತ್ತಿದ್ದಾರೆ- ರಣದೀಪ್ ಸಿಂಗ್ ಸುರ್ಜೇವಾಲ

ಬೆಂಗಳೂರು,ಜುಲೈ,7,2025 (www.justkannada.in): ಪದೇ ಪದೇ ರಾಜ್ಯಕ್ಕೆ ಆಗಮಿಸುತ್ತಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ...

ಪಡಿತರ ಸಾಗಾಟ ಲಾರಿ ಮಾಲೀಕರ ಮುಷ್ಕರಕ್ಕೆ ಮಣಿದ ಸರ್ಕಾರ:  ಬಾಕಿ ಹಣ ಬಿಡುಗಡೆಗೆ ಆದೇಶ

ಬೆಂಗಳೂರು,ಜುಲೈ,7,2025 (www.justkannada.in): 4 ತಿಂಗಳ ಪಡಿತರ ಸಾಗಾಣೆ ವೆಚ್ಚವನ್ನು ಬಾಕಿ ಉಳಿಸಿಕೊಂಡಿದ್ದ...