23
January, 2026

A News 365Times Venture

23
Friday
January, 2026

A News 365Times Venture

POK ವಾಪಸ್ ಪಡೆಯಲು ಒಳ್ಳೆಯ ಸಮಯವಿತ್ತು: ಆದ್ರೆ ಕದನ ವಿರಾಮ ಘೋಷಿಸಿದ್ದು ಯಾಕೆ? ವಿ.ಎಸ್ ಉಗ್ರಪ್ಪ

Date:

ಬಳ್ಳಾರಿ,ಮೇ,15,2025 (www.justkannada.in):  ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಪಿಒಕೆ ವಾಪಸ್ ಪಡೆಯಲು ಒಳ್ಳೆಯ ಸಮಯವಿತ್ತು. ಆದರೆ ಈ ವೇಳೆ ಕದನ ವಿರಾಮ ಘೋಷಿಸಿದ್ದು ಯಾಕೆ?  ಎಂದು ಕೇಂದ್ರ ಸರ್ಕಾರದ ವಿರುದ್ದ ಮಾಜಿ ಸಂಸದ ವಿಎಸ್ ಉಗ್ರಪ್ಪ ಕಿಡಿಕಾರಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ವಿಎಸ್ ಉಗ್ರಪ್ಪ,  ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲಿನ ಉಗ್ರರ ದಾಳಿಯಲ್ಲಿ 28 ಜನರು ಸಾವನ್ನಪ್ಪಿದರು. ಈ ಹಿನ್ನೆಲೆಯಲ್ಲಿ ಉಗ್ರರ ಮೇಲೆ ಭಾರತೀಯ ಸೇನೆ ನಡೆಸಿದ್ದ ಅಪರೇಷನ್ ಸಿಂಧೂರ ದಾಳಿಯಿಂದ ಪಾಕ್ ಆಕ್ರಮಿತ ಪಿಓಕೆ ವಾಪಸ್ ಪಡೆಯಲು ಮತ್ತು ಉಗ್ರರ ನೆಲೆಗಳೊಂದಿಗೆ ಅವರ ಬಳಿಯಿರುವ ಶಸ್ತ್ರಾಸ್ತ್ರಗಳನ್ನು ನಾಶ ಪಡಿಸಲು ಒಳ್ಳೆಯ ಅವಕಾಶ ಇತ್ತು. ಆದರೆ, ಪ್ರಧಾನಿ ಮೋದಿಯವರು ಏಕೆ ಕದನ ವಿರಾಮ ಘೋಷಿಸಿದರೋ ಗೊತ್ತಿಲ್ಲ. ಕದನ ವಿರಾಮ ಘೋಷಣೆ ಮಾಡಿದ್ದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್. ಇದಕ್ಕೆ ಅಮೆರಿಕ ಮಧ್ಯಸ್ಥಿಕೆ ವಹಿಸಿದ್ದು ಯಾಕೆ..? ಎಂದು ಪ್ರಶ್ನಿಸಿದರು.

ಕದನ ವಿರಾಮ ಘೋಷಿಸಲು ಯಾರೊಂದಿಗೆ ಚರ್ಚಿಸಿದ್ದರು. ಸೇನಾ ಮುಖ್ಯಸ್ಥರೊಂದಿಗೆ ಚರ್ಚಿಸಿದ್ಧಾರಾ? ಸರ್ವಪಕ್ಷಗಳ ಸಭೆ ಕರೆದಾಗ ಪ್ರಧಾನಿ ನರೇಂದ್ರ ಮೋದಿಯವರೇ ಗೈರು ಹಾಜರಾಗುತ್ತಾರೆ. ಯಾರೊಂದಿಗೆ ಚರ್ಚಿಸಿ ನಿರ್ಣಯ ಕೈಗೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರೀಯ ನಾಯಕತ್ವವನ್ನು ಪ್ರದರ್ಶಿಸಬೇಕು ಎಂದು ವಿ.ಎಸ್ ಉಗ್ರಪ್ಪ ಕುಟುಕಿದರು.

Key words: POK,  declare, ceasefire,  VS Ugrappa

The post POK ವಾಪಸ್ ಪಡೆಯಲು ಒಳ್ಳೆಯ ಸಮಯವಿತ್ತು: ಆದ್ರೆ ಕದನ ವಿರಾಮ ಘೋಷಿಸಿದ್ದು ಯಾಕೆ? ವಿ.ಎಸ್ ಉಗ್ರಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಕುರಿತು...

ಧರ್ಮಸ್ಥಳ ಕೇಸ್: ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ- MLC ಸಿ.ಟಿ ರವಿ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಯಾಗುತ್ತಿದ್ದು...

ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಆಗಸ್ಟ್,18,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ...

ಮೈಸೂರು: ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಉದ್ಘಾಟಿಸಿದ ಸೆಸ್ಕ್ ಎಂಡಿ

ಮೈಸೂರು, ಆಗಸ್ಟ್‌, 18, 2025 (www.justkannada.in): ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ...