30
July, 2025

A News 365Times Venture

30
Wednesday
July, 2025

A News 365Times Venture

RCB ಗೆದ್ದರೆ ಸಂಭ್ರಮಾಚರಣೆ ನೆಪದಲ್ಲಿ ಅತಿರೇಕದ ವರ್ತನೆ ಬೇಡ- ಬೆಂಗಳೂರು ಪೊಲೀಸ್ ಕಮಿಷನರ್

Date:

ಬೆಂಗಳೂರು, ಜೂನ್,3,2025 (www.justkannada.in):  ಇಂಡಿಯನ್ ಪ್ರೀಮಿಯರ್ ಲೀಗ್ (IPL) ಟಿ20 ಕ್ರಿಕೆಟ್ ಟೂರ್ನಿಯು ಅಂತಿಮ ಹಂತಕ್ಕೆ ತಲುಪಿದ್ದು ಇಂದು  ಫೈನಲ್ ಪಂದ್ಯ ಗುಜರಾತ್​ನ ಅಹಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಪಂಜಾಬ್ ಕಿಂಗ್ಸ್ ನಡುವೆ ನಡೆಯಲಿದೆ. ಆರ್​ಸಿಬಿ ಗೆಲುವಿಗಾಗಿ ಕರ್ನಾಟಕದಾದ್ಯಂತ ಅಭಿಮಾನಿಗಳ ಹಾರೈಕೆ, ಪ್ರಾರ್ಥನೆ ಸಲ್ಲಿಕೆಯಾಗುತ್ತಿವೆ. ಈ ಮಧ್ಯೆ ಇಂದು ಆರ್ ಸಿಬಿ ಫೈನಲ್ ಪಂದ್ಯ ಗೆದ್ದು  ಟ್ರೋಫಿ ತನ್ನದಾಗಿಸಿಕೊಂಡರೇ ಬೆಂಗಳೂರಿನಲ್ಲಿ ಸಂಭ್ರಮಾಚರಣೆ ಜೋರಾಗಿರುತ್ತದೆ. ಹೀಗಾಗಿಯೇ RCB ಗೆದ್ದರೆ ಸಂಭ್ರಮಾಚರಣೆ ನೆಪದಲ್ಲಿ ಅತಿರೇಕದ ವರ್ತನೆ ಮಾಡಬಾರದು ಎಂದು  ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್ ಎಚ್ಚರಿಕೆ ನೀಡಿದ್ದಾರೆ.

ಆರ್ ಸಿಬಿ ಗೆದ್ದರೆ ಸಂಭ್ರಮಾಚರಣೆ ನೆಪದಲ್ಲಿ ಯಾರೂ ಅತಿರೇಕದ ವರ್ತನೆ ತೋರದಂತೆ, ಒಂದು ವೇಳೆ ತೋರಿದರೆ ಕ್ರಮ ಕೈಗೊಳ್ಳುವಂತೆ ಮುನ್ನೆಚ್ಚರಿಕೆ ವಹಿಸಲು  ಎಲ್ಲ ಡಿಸಿಪಿಗಳು ಹಾಗೂ ಎಸಿಪಿಗಳಿಗೆ ಪೊಲೀಸ್ ಕಮಿಷನರ್ ಬಿ.ದಯಾನಂದ್ ನಿರ್ದೇಶನ  ನೀಡಿದ್ದಾರೆ.

ಆರ್​ಸಿಬಿ ಗೆದ್ದರೆ ಸಂಭ್ರಮಾಚರಣೆ ವೇಳೆ ಯಾವುದೇ ಅವಘಡಗಳು ಸಂಭವಿಸದಂತೆ ಅಗತ್ಯ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚಿಸಲಾಗಿದೆ. ಅಭಿಮಾನದ ಹೆಸರಿನಲ್ಲಿ ಅತಿರೇಕದ ವರ್ತನೆ ತೋರುವಂತಿಲ್ಲ. ರಸ್ತೆ ತಡೆಯುವುದು, ಟೈರ್​ಗೆ ಬೆಂಕಿ ಹಚ್ಚುವುದು, ವಾಹನ ತಡೆಯುವುದು. ಸಾರ್ವಜನಿಕರಿಗೆ ತೊಂದರೆ, ಶಾಂತಿಭಂಗ ಉಂಟು ಮಾಡುವಂತಿಲ್ಲ. ಈ ಬಗ್ಗೆ ನಿಗಾ ವಹಿಸುವಂತೆ  ಡಿಸಿಪಿ, ಎಸಿಪಿಗಳಿಗೆ ಕಮಿಷನರ್ ಸೂಚನೆ ನೀಡಿದ್ದಾರೆ.

ಆಯಾ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಮುನ್ನೆಚ್ಚರಿಕೆ ವಹಿಸಬೇಕೆಂದು ಹೇಳಲಾಗಿದೆ. ಎಂ.ಜಿ.ರಸ್ತೆ, ಕೋರಮಂಗಲ, ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ನಿಗಾ ಹೆಚ್ಚಿಸಲಾಗುತ್ತದೆ. ಬೆಂಗಳೂರಿನಲ್ಲಿ ಸ್ಕ್ರೀನ್ ಅಳವಡಿಸಿರುವ ಕಡೆ ಪೊಲೀಸರ ಕಣ್ಗಾವಲು ಇರಲಿದೆ. ಪೊಲೀಸರ ಅನುಮತಿ ಪಡೆಯದೆ ಸ್ಕ್ರೀನ್​​ ಅಳವಡಿಕೆ ಮಾಡುವಂತಿಲ್ಲ ಎಂದು  ಕಮಿಷನರ್ ಬಿ.ದಯಾನಂದ್ ತಿಳಿಸಿದ್ದಾರೆ.vtu

ಹಾಗೆಯೇ ಪಬ್, ಕ್ಲಬ್, ರೆಸ್ಟೋರೆಂಟ್​​​ ಗಳು ಅವಧಿ ಮೀರಿ ಕಾರ್ಯಾಚರಣೆ ಮಾಡುವಂತಿಲ್ಲ. ರೆಸ್ಟೋರೆಂಟ್ ​​​ಗಳನ್ನು ನಿಗದಿತ ಸಮಯಕ್ಕೆ ಬಂದ್ ಮಾಡಬೇಕು ಎಂದು ಸೂಚನೆ ನೀಡಲಾಗಿದೆ. ಎಲ್ಲೆಡೆ ಹೊಯ್ಸಳ ಮತ್ತು ಬೀಟ್ ಪೊಲೀಸರು ಗಸ್ತು ಕಾರ್ಯಾಚರಣೆ ಹೆಚ್ಚಿಸಿ ನಿಗಾ ವಹಿಸಲಿದ್ದಾರೆ ಎಂದು ಬಿ.ದಯಾನಂದ್ ತಿಳಿಸಿದ್ದಾರೆ.

Key words:  RCB, wins, no,  excessive behavior, Bengaluru Police Commissioner

The post RCB ಗೆದ್ದರೆ ಸಂಭ್ರಮಾಚರಣೆ ನೆಪದಲ್ಲಿ ಅತಿರೇಕದ ವರ್ತನೆ ಬೇಡ- ಬೆಂಗಳೂರು ಪೊಲೀಸ್ ಕಮಿಷನರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿಎಂ ಸಿದ್ದರಾಮಯ್ಯಗೆ ಶಕ್ತಿ ಪ್ರದರ್ಶನ ಮಾಡುವ ಅವಶ್ಯಕತೆ ಇಲ್ಲ- ಸಚಿವ ದಿನೇಶ್ ಗುಂಡೂರಾವ್‍

ಕಾರವಾರ,ಜುಲೈ,30,2025 (www.justkannada.in): ಸಿಎಂ ಸಿದ್ದರಾಮಯ್ಯಗೆ ಶಕ್ತಿ ಪ್ರದರ್ಶನ ಮಾಡುವ ಅವಶ್ಯಕತೆ ಇಲ್ಲ...

ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಆರೋಪ: ಯಾವುದೇ ಸಾಕ್ಷಿ ನೀಡಿಲ್ಲ- ಸಚಿವ ಚಲುವರಾಯಸ್ವಾಮಿ

ಬೆಂಗಳೂರು,ಜುಲೈ,30,2025 (www.justkannada.in):  ರಸಗೊಬ್ಬರವನ್ನ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ವಿಪಕ್ಷದವರು ಆರೋಪ...

ಡ್ರಗ್ಸ್ ಮಾಫಿಯಾ ವಿರುದ್ದ ಕಾರ್ಯಾಚರಣೆ: ಖುದ್ದು ಫೀ‍ಲ್ಡ್ ಗಿಳಿದು ತಪಾಸಣೆ ನಡೆಸಿದ ಪೊಲೀಸ್ ಕಮಿಷನರ್

ಮೈಸೂರು,ಜುಲೈ,30,2025 (www.justkannada.in):  ಮೈಸೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ದ ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು...

ರಾಜ್ಯದಲ್ಲಿ ರಸಗೊಬ್ಬರ ಕೊರತೆ: ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ ಡಾ.ಕೆ. ಸುಧಾಕರ್

ನವದೆಹಲಿ,ಜುಲೈ,30,2025 (www.justkannada.in): ರಾಜ್ಯದಲ್ಲಿ ರಸಗೊಬ್ಬರದ ಕೊರತೆಯುಂಟಾಗಿದ್ದು ರೈತರು ಪರದಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ...