1
July, 2025

A News 365Times Venture

1
Tuesday
July, 2025

A News 365Times Venture

SAF ರಚನೆಯಿಂದ ಉಡುಪಿ ಘನತೆಗೆ ಧಕ್ಕೆಯಾಗಲ್ಲ- ಗೃಹ ಸಚಿವ ಡಾ.ಜಿ.ಪರಮೇಶ್ವರ್

Date:

ಉಡುಪಿ,ಜೂನ್,14,2025 (www.justkannada.in): ಕೋಮು ದಳ್ಳುರಿ ನಿಗ್ರಹಕ್ಕಾಗಿ ರಚನೆ ಮಾಡಲಾಗಿರುವ ಎಸ್‌ಎಎಫ್‌ ನಿಂದ ಉಡುಪಿ ಘನತೆಗೆ ಧಕ್ಕೆಯಾಗುವುದಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.

ಎಸ್‌ಎಎಫ್‌ ವ್ಯಾಪ್ತಿಗೆ ಸೇರಿಸಿರುವುದರಿಂದ ಬ್ರ್ಯಾಂಡ್‌ ಉಡುಪಿ ಘನತೆಗೆ ಧಕ್ಕೆಯಾಗಿದೆ ಎಂಬ ಶಾಸಕ ಯಶ್‌ ಪಾಲ್‌ ಸುವರ್ಣ ಅವರ ಹೇಳಿಕೆ ಕುರಿತು ಮಾತನಾಡಿದ ಗೃಹ ಸಚಿವ ಡಾ.ಜ.ಪರಮೇಶ್ವರ್, ಕೋಮು ನಿಗ್ರಹಕ್ಕಾಗಿ ರಚನೆಯಾಗಿರುವ ವಿಶೇಷ ಕಾರ್ಯಪಡೆಯ  ವ್ಯಾಪ್ತಿಗೆ ಸೇರಿಸಿರುವುದರಿಂದ ಉಡುಪಿ ಜಿಲ್ಲೆಯ ಘನತೆಗೆ ಧಕ್ಕೆಯಾಗುವುದಿಲ್ಲ. ಕರಾವಳಿ ಭಾಗದಲ್ಲಿ ನಡೆದಿರುವ ಮತ್ತು ನಡೆಯುತ್ತಿರುವ ಘಟನಾವಳಿಗಳ ಆಧಾರದಲ್ಲಿ ಕಾರ್ಯಪಡೆ ರಚನೆ ಮಾಡಲಾಗಿದೆ. ಯಾವುದೇ ಜಿಲ್ಲೆಯನ್ನು ಕೋಮು ಸೂಕ್ಷ್ಮ ಪ್ರದೇಶ ಎಂದು ಬಿಂಬಿಸುವ ಸಲುವಾಗಿ ಮಾಡಿಲ್ಲ ಎಂದರು.

ಈ ಮಧ್ಯೆ ಕಾರ್ಕಳ ಭಾಗದಲ್ಲಿ ನಕ್ಸಲ್‌ ನಿಗ್ರಹ ಪಡೆಯ  ಮುಖ್ಯ ಕಚೇರಿ ಆರಂಭಿಸಿದ್ದೆವು. ಎಎನ್‌ಎಫ್‌ನಿಂದ ಉಡುಪಿಯ ಘನತೆ ಕಡಿಮೆಯಾಯಿತೇ..? ನಕ್ಸಲರಿಂದ ಬಹಳಷ್ಟು ಜನರ ಹತ್ಯೆ ಆಗಿತ್ತು. ಅಂತಹ ಪರಿಸ್ಥಿತಿಯಲ್ಲಿ ಉಡುಪಿಯಲ್ಲಿ ಎಎನ್‌ಎಫ್ ಕಚೇರಿ ಆರಂಭಿಸಿದ್ದೆವು. ಕೋಮುವಾದಕ್ಕೆ ಸಂಬಂಧಪಟ್ಟ ಪ್ರಕರಣಗಳು ನಡೆಯದಿದ್ದಲ್ಲಿ ಎಸ್‌ಎಎಫ್‌ ಅಗತ್ಯ ಬರುವುದಿಲ್ಲ ಎಂದು ಪರಮೇಶ್ವರ್ ತಿಳಿಸಿದರು.vtu

Key words: Udupi, dignity, SAF, Home Minister, Dr G Parameshwar

The post SAF ರಚನೆಯಿಂದ ಉಡುಪಿ ಘನತೆಗೆ ಧಕ್ಕೆಯಾಗಲ್ಲ- ಗೃಹ ಸಚಿವ ಡಾ.ಜಿ.ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಲಕ್ಕಿ, ಲಾಟರಿ ಮುಖ್ಯಮಂತ್ರಿ- ಶಾಸಕ ಬಿ.ಆರ್ ಪಾಟೀಲ್

ಮಂಡ್ಯ,ಜುಲೈ,1,2025 (www.justkannada.in):  ಸಿದ್ದರಾಮಯ್ಯ ಲಕ್ಕಿ, ಲಾಟರಿ ಮುಖ್ಯಮಂತ್ರಿಯಾಗಿದ್ದಾರೆ ಎಂದು ಕಾಂಗ್ರೆಸ್ ಶಾಸಕ...

ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗೇ ಹೋಗ್ತಾರೆ ಕಾದು ನೋಡಿ- ಸ್ನೇಹಮಯಿ ಕೃಷ್ಣ

ಮೈಸೂರು,ಜುಲೈ,1,2025 (www.justkannada.in): ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗೇ...

IPS ಅಧಿಕಾರಿ ಅಮಾನತು ರದ್ದು ಸಿಎಟಿ ಆದೇಶ: ಮೇಲ್ಮನವಿ ಸಲ್ಲಿಸಲು ಸೂ‍ಕ್ತ ತೀರ್ಮಾನ- ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜುಲೈ,1,2025 (www.justkannada.in):  ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣಕ್ಕೆ ಸಂಬಂಧಿಸಿದಂತೆ,ಕೇಂದ್ರ...

ಡಿಸೆಂಬರ್ ವೇಳೆಗೆ ಕಾಂಗ್ರೆಸ್ ಸರ್ಕಾರ ಪತನ- ಸಂಸದ ಗೋವಿಂದ ಕಾರಜೋಳ

ಬಾಗಲಕೋಟೆ,ಜುಲೈ,1,2025 (www.justkannada.in): ಕಾಂಗ್ರೆಸ್ ಸರ್ಕಾರ ಡಿಸೆಂಬರ್ 31 ದಾಟುವುದಿಲ್ಲ, ಸರ್ಕಾರ ಪತನವಾಗುತ್ತದೆ...