14
July, 2025

A News 365Times Venture

14
Monday
July, 2025

A News 365Times Venture

SSLC ಟಾಪರ್ಸ್ ಗಳಿಗೆ ಸನ್ಮಾನಿಸಿ ಶುಭಹಾರೈಸಿದ ಜಿ.ಪಂ ಸಿಇಒ

Date:

ಬೆಂಗಳೂರು ಗ್ರಾಮಾಂತರ, ಮೇ,3,2025 (www.justkannada.in): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ 2024-25 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಜಿಲ್ಲೆಯ ಐದು ವಿದ್ಯಾರ್ಥಿಗಳನ್ನು ಜಿ.ಪಂ ಸಿಇಒ ಡಾ.ಕೆ.ಎನ್ ಅನುರಾಧ ಅವರು ಇಂದು ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸನ್ಮಾನಿಸಿದರು.

ವಿದ್ಯಾರ್ಥಿಗಳನ್ನು ಸನ್ಮಾನಿಸಿ ನಂತರ ಸಿಇಒ ಡಾ.ಕೆ.ಎನ್ ಅನುರಾಧ ಅವರು ಮಾತನಾಡಿ,  ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸರ್ಕಾರಿ ಶಾಲೆಗಳಲ್ಲಿಯೂ ಈ ಬಾರಿ ಉತ್ತಮ ಫಲಿತಾಂಶ ಬಂದಿದೆ. ವಿದ್ಯಾರ್ಥಿಗಳ ಪರಿಶ್ರಮ, ಪೋಷಕರ, ಶಿಕ್ಷಕರ ಸಹಕಾರದಿಂದ ವಿದ್ಯಾರ್ಥಿಗಳು ಹೆಚ್ಚು ಅಂಕಗಳಿಸಲು ಸಾಧ್ಯವಾಗಿದೆ. ನಿಮ್ಮ ಈ ಸಾಧನೆಯು ಕಿರಿಯ ಸಹಪಾಠಿಗಳಿಗೂ ಮಾದರಿಯಾಗಲಿ. ಮುಂದಿನ ನಿಮ್ಮ ಉನ್ನತ ವಿದ್ಯಾಭ್ಯಾಸದಲ್ಲಿ ಕೂಡ ಇದೇ ರೀತಿಯ ಉತ್ತಮ ಅಂಕಗಳನ್ನು ಗಳಿಸಿ ಜಿಲ್ಲೆಗೆ, ಪೋಷಕರಿಗೆ ಒಳ್ಳೆಯ ಹೆಸರು ತರಬೇಕು. ಜೀವನದಲ್ಲಿ ಉತ್ತಮ ಗುರಿ ಅಳವಡಿಸಿಕೊಂಡು ಮುನ್ನಡೆದು ಉನ್ನತ ಹುದ್ದೆಗಳನ್ನು ಅಲಂಕರಿಸಿ ಎಂದು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿ ಅತಿ ಹೆಚ್ಚು ಅಂಕ ಗಳಿಸಿದ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಹೋಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ ಮೋಹನ್ ಜೆ.ಎಂ ಅವರು 625 ಕ್ಕೆ 623 ಅಂಕ,  ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಇಬ್ಬರು ವಿದ್ಯಾರ್ಥಿಗಳಾದ ಐಶ್ವರ್ಯ 625 ಕ್ಕೆ 618 ಅಂಕ ಹಾಗೂ ನಿಶ್ಚಿತ ಆರ್ 625 ಕ್ಕೆ 617 ಅಂಕ ಪಡೆಯುವ ಮೂಲಕ ಕ್ರಮವಾಗಿ ಜಿಲ್ಲೆಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

ರಾಜ್ಯದ 22 ಟಾಪರ್ಸ್ ಗಳ ಪೈಕಿ  ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳಾದ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಹೋಬಳಿಯ ನೀಲಗಿರೇಶ್ವರ ವಿದ್ಯಾನಿಕೇತನ ಪ್ರೌಢಶಾಲೆಯ ವಿದ್ಯಾರ್ಥಿನಿ ಸಿ ಭಾವನಾ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನ ಮೆಳೆಕೋಟೆ ಕ್ರಾಸ್ ನ ಎಸ್.ಜೆ.ಸಿ.ಅರ್ ಪ್ರೌಢಶಾಲೆಯ ರಂಜಿತ ಎ.ಸಿ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಜಿ.ಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರರಾದ ಬೈಲಾಂಜನಪ್ಪ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಟಿ.ಎಲ್.ಎಸ್ ಪ್ರೇಮ, ಜಿ.ಪಂ ಯೋಜನಾ ನಿರ್ದೇಶಕ ವಿಠ್ಠಲ್ ಕಾವ್ಳೆ, ವಿದ್ಯಾರ್ಥಿಗಳ ಪೋಷಕರು, ಸಿಬ್ಬಂದಿ ಉಪಸ್ಥಿತರಿದ್ದರು.

Key words: SSLC,  Toppers, Honor, Bangalore, CEO

The post SSLC ಟಾಪರ್ಸ್ ಗಳಿಗೆ ಸನ್ಮಾನಿಸಿ ಶುಭಹಾರೈಸಿದ ಜಿ.ಪಂ ಸಿಇಒ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಹಭಾಷಾ ಹಿರಿಯ ನಟಿ ಬಿ.ಸರೋಜಾ ದೇವಿ ಇನ್ನಿಲ್ಲ

ಬೆಂಗಳೂರು,ಜುಲೈ,14,2025 (www.justkannada.in): ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿರುವ ಬಹುಭಾಷಾ ಹಿರಿಯ ನಟಿ...

ಜು.19 ರಂದು ಮೈಸೂರಿನಲ್ಲಿ ಬೃಹತ್ ಸಮಾರಂಭ: ಸಕಲ ಸಿದ್ದತೆಗೆ ಸಚಿವ ಹೆಚ್.ಸಿ.ಮಹದೇವಪ್ಪ ಸೂಚನೆ

ಮೈಸೂರು,ಜುಲೈ,12,2025 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜುಲೈ19 ರಂದು ಮಹಾರಾಜ...

ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸೈನ್ಯ ,ಅಂತರಿಕ್ಷದಲ್ಲೂ ಕೆಲಸ ಪ್ರಗತಿಯ ಪ್ರತೀಕ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು ಜುಲೈ,13,2025 (www.justkannada.in):  ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು,...

ಸರ್ಕಾರದಲ್ಲಿ ಮೋಡ ಕವಿದ ವಾತಾವರಣ: ಯಾವಾಗ ಗುಡುಗು ಸಿಡಿಲು ಬರುತ್ತೋ ಗೊತ್ತಿಲ್ಲ-ಬಿವೈ ವಿಜಯೇಂದ್ರ

ಬೆಂಗಳೂರು,ಜುಲೈ,12,2025 (www.justkannada.in): ಸರ್ಕಾರದಲ್ಲಿ ಒಂದು ರೀತಿಯ ಮೋಡ ಕವಿದ ವಾತಾವರಣವಿದೆ ....