16
September, 2025

A News 365Times Venture

16
Tuesday
September, 2025

A News 365Times Venture

UPSC: ಅರ್ಜಿ ಸಲ್ಲಿಕೆಗೆ ದಾಖಲೆ ಕಡ್ಡಾಯ

Date:

ನವದೆಹಲಿ,ಜನವರಿ,25,2025 (www.justkannada.in): ಅಭ್ಯರ್ಥಿಗಳು ನಾಗರಿಕ ಸೇವಾ ಪೂರ್ವಭಾವಿ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸುವಾಗ ವಯಸ್ಸು ದೃಢಪಡಿಸುವ ಮತ್ತು ಮೀಸಲಾತಿ ಸಂಬಂಧಿತ ದಾಖಲೆಗಳನ್ನು ಸಲ್ಲಿಸುವುದನ್ನು ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಇದಕ್ಕೂ ಮೊದಲು  ಅಭ್ಯರ್ಥಿಗಳು ಪೂರ್ವಭಾವಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಬಳಿಕ ಅಗತ್ಯ ದಾಖಲೆಗಳನ್ನು ಅಪ್‌ ಲೋಡ್ ಮಾಡಲು ಅವಕಾಶ ನೀಡಲಾಗುತ್ತಿತ್ತು. ಈ ಮಧ್ಯೆ ಮಾಜಿ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರು ನಕಲಿ ದಾಖಲೆಗಳನ್ನು ನೀಡಿದ್ದ ಆರೋಪ ಈಚೆಗೆ ಕೇಳಿಬಂದಿದ್ದು,  ಇದರ ಬೆನ್ನಲ್ಲೇ ಇದೀಗ  ಕೇಂದ್ರ ಸರ್ಕಾರ ನಿಯಮಗಳಲ್ಲಿ ಬದಲಾವಣೆ ತಂದಿದೆ.

ಅಭ್ಯರ್ಥಿಗಳು ನಾಗರಿಕ ಸೇವಾ ಪೂರ್ವಭಾವಿ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸುವ ವೇಳೆ ವಯಸ್ಸು ದೃಢಪಡಿಸುವ ಮತ್ತು ಮೀಸಲಾತಿ ಸಂಬಂಧಿತ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯ ಎಂದು ತಿಳಿಸಿದೆ.  ಆನ್‌ ಲೈನ್ ಅರ್ಜಿ ನಮೂನೆಯೊಂದಿಗೆ ಅಗತ್ಯ ಮಾಹಿತಿ ಮತ್ತು ದಾಖಲೆಗಳನ್ನು ಒದಗಿಸಲು ವಿಫಲ ‘ವಾದರೆ ಅಭ್ಯರ್ಥಿಗೆ ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ ಎಂದು ಜನವರಿ 22ರಂದು ಹೊರಡಿಸಿರುವ ‘ನಾಗರಿಕ ಸೇವಾ ಪರೀಕ್ಷೆಗಳ ನಿಯಮ- 2025’ರಲ್ಲಿ ತಿಳಿಸಲಾಗಿದೆ.

ಕೇಂದ್ರ ಲೋಕಸೇವಾ ಆಯೋಗವು ಈ ಸಾಲಿನ ನಾಗರಿಕ ಸೇವಾ ಪರೀಕ್ಷೆಯ ಅಧಿಸೂಚನೆ ಹೊರಡಿಸಿದ್ದು, ಪೂರ್ವಭಾವಿ ಪರೀಕ್ಷೆಯು ಮೇ 25ರಂದು ನಡೆಯಲಿದೆ. ಐಎಎಸ್, ಐಎಫ್‌ಎಸ್ ಮತ್ತು ಐಪಿಎಸ್ ಸೇರಿದಂತೆ ಒಟ್ಟು 979 ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧರಿಸಲಾಗಿದೆ. ಅಭ್ಯರ್ಥಿಗಳು http:// upsconline.gov.in ವೆಬ್‌ಸೈಟ್ ಮೂಲಕ ಫೆಬ್ರುವರಿ 11, 2025ರ ಸಂಜೆ  6 ಗಂಟೆ ಒಳಗಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

Key words: Documents, mandatory,  filing, application, UPSC, Exam

The post UPSC: ಅರ್ಜಿ ಸಲ್ಲಿಕೆಗೆ ದಾಖಲೆ ಕಡ್ಡಾಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಕುರಿತು...

ಧರ್ಮಸ್ಥಳ ಕೇಸ್: ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ- MLC ಸಿ.ಟಿ ರವಿ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಯಾಗುತ್ತಿದ್ದು...

ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಆಗಸ್ಟ್,18,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ...

ಮೈಸೂರು: ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಉದ್ಘಾಟಿಸಿದ ಸೆಸ್ಕ್ ಎಂಡಿ

ಮೈಸೂರು, ಆಗಸ್ಟ್‌, 18, 2025 (www.justkannada.in): ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ...