8
March, 2026

A News 365Times Venture

8
Sunday
March, 2026

A News 365Times Venture

WTC ಫೈನಲ್‌ ನಲ್ಲಿ ಎಡವಿದ ಆಸಿಸ್:  ದ.ಆಫ್ರಿಕಾಗೆ ಚಾಂಪಿಯನ್ ಪಟ್ಟ

Date:

ಲಂಡನ್,ಜೂನ್,14,2025 (www.justkannada.in): ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್ ನಲ್ಲಿ ಆಸ್ಟ್ರೇಲಿಯಾ ಎಡವಿದ್ದು ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ದಕ್ಷಿಣಾ ಆಫ್ರಿಕಾ 27 ವರ್ಷಗಳ ನಂತರ ಐಸಿಸಿ ಟ್ರೋಫಿ ಗೆದ್ದ ಸಾಧನೆ ಮಾಡಿದೆ.

​ ಒಂದೆಡೆ ಸತತ ಎರಡನೇ ಬಾರಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ ಕಿರೀಟ ತೊಡುವ ಆಸೆಯೊಂದಿಗೆ ಆಸ್ಟ್ರೇಲಿಯಾ ತಂಡ ಲಾರ್ಡ್ಸ್ ಅಂಗಳಕ್ಕಿಳಿದಿದ್ದರೆ, ಮತ್ತೊಂದೆಡೆ ಚೊಚ್ಚಲ ಟೆಸ್ಟ್ ಚಾಂಪಿಯನ್‌ ಪಟ್ಟ ಹಾಗೆಯೇ ಬಹು ವರ್ಷಗಳ ಐಸಿಸಿ ಟ್ರೋಫಿ ಬರ ನೀಗಿಸಿಕೊಳ್ಳುವ ಗುರಿಯೊಂದಿಗೆ ಬಂದಿದ್ದ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದ್ದವು.

ಎರಡನೇ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾ ನೀಡಿದ 282 ರನ್​ಗಳ ಗುರಿ ಬೆನ್ನಟ್ಟಿದ ಆಫ್ರಿಕಾಗೆ ಉತ್ತಮ ಆರಂಭ ಸಿಗಲಿಲ್ಲ. ಆರಂಭಿಕ ರಯಾನ್ ರಿಕಲ್ಟನ್ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲ್ಲು ಸಾಧ್ಯವಾಗದೆ ಕೇವಲ ಮೂರನೇ ಓವರ್‌ನಲ್ಲಿ ಪೆವಿಲಿಯನ್‌ ಸೇರಿಕೊಂಡರು. ಇದಾದ ನಂತರ ಜೊತೆಯಾದ ಮಾರ್ಕ್ರಾಮ್ ಹಾಗೂ ವಿಯಾನ್ ಮುಲ್ಡರ್ ಅರ್ಧಶತಕದ ಜೊತೆಯಾಟವನ್ನಾಡಿ ತಂಡವನ್ನು ಸಂಕಷ್ಟದಿಂದ ಹೊರತಂದರು.

ಮಾಕ್ರಂ 136 ರನ್ ಗಳಿಸಿದರೇ ಕ್ಯಾಪ್ಟನ್ ತೆಂಬ ಬವುಮಾ 66 ರನ್ ಬಾರಿಸಿ ಗೆಲವಿನ ದಡಕ್ಕೆ ದಕ್ಷಿಣ ಆಫ್ರಿಕಾವನ್ನ ಕೊಂಡೊಯ್ದರು.  5 ಕೊನೆಗೆ 5 ವಿಕೆಟ್ ನಷ್ಟಕ್ಕೆ ದಕ್ಷಿಣಾ ಆಫ್ರಿಕಾ 282 ರನ್ ಗಳಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್ ತನ್ನದಾಗಿಸಿಕೊಂಡಿತು.

ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್- 212/10

ದಕ್ಷಿಣ ಆಫ್ರಿಕಾ ಮೊದಲ ಇನ್ನಿಂಗ್ಸ್- 138/10

ಸ್ಟ್ರೇಲಿಯಾ 2ನೇ ಇನ್ನಿಂಗ್ಸ್  -207/10

ದಕ್ಷಿಣ ಆಫ್ರಿಕಾ 2ನೇ ಇನ್ನಿಂಗ್ಸ್- 282/5

vtu

Key words: Aussies, WTC final,  Champion, South Africa

The post WTC ಫೈನಲ್‌ ನಲ್ಲಿ ಎಡವಿದ ಆಸಿಸ್:  ದ.ಆಫ್ರಿಕಾಗೆ ಚಾಂಪಿಯನ್ ಪಟ್ಟ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಾಲ ಮಾಡದೆ ಅಭಿವೃದ್ಧಿ ಆಗಲ್ಲ; ಸಿಎಂ ಸಿದ್ದರಾಮಯ್ಯ

ಮೈಸೂರು,ಮಾರ್ಚ್,7,2026 (www.justkannada.in):  ಸಾಲದ ಬಗ್ಗೆ ಬಿಜೆಪಿಯವರು ಟೀಕೆ ಹಿನ್ನೆಲೆಯಲ್ಲಿ ಈ ಕುರಿತು...

ಕೇಂದ್ರದ ಅನ್ಯಾಯದಿಂದ ಇಷ್ಟೊಂದು ಸಾಲದ ಹೊರೆ : ಬಿಜೆಪಿ ಟೀಕೆ ಶೋಭೆ ತರಲ್ಲ- ಸಚಿವ ಪ್ರಿಯಾಂಕ್ ಖರ್ಗೆ

ಬೀದರ್,ಮಾರ್ಚ್,7,2026 (www.justkannada.in):  ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ. ಹೀಗಾಗಿ ಇಷ್ಟೊಂದು...

ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆ ಮುಚ್ಚಲ್ಲ- MLC ಯತೀಂದ್ರ ಸಿದ್ದರಾಮಯ್ಯ

ಮೈಸೂರು,ಮಾರ್ಚ್,7,2026 (www.justkannada.in): ಟಿ.ನರಸೀಪುರದಲ್ಲಿ ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆ ಮುಚ್ಚುವುದಿಲ್ಲ...

LPG ಸಿಲಿಂಡರ್ ದರ ಏರಿಕೆ: ನೆಲಕ್ಕೆ ಬಿದ್ದವನಿಗೆ ಒದ್ದಂತಾಗಿದೆ-ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು,ಮಾರ್ಚ್,7,2026 (www.justkannada.in): ಭಾರತದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಹಣದುಬ್ಬರ...