12
February, 2026

A News 365Times Venture

12
Thursday
February, 2026

A News 365Times Venture

ಅನಧಿಕೃತ ರಾಪಿಡೋ, ಓಲಾ, ಉಬರ್, ಗೂಡ್ಸ್ ಪೋರ್ಟಲ್ ಗಳ ವಿರುದ್ಧ ಚಾಲಕ ಸಂಘಟನೆಗಳ ವಿನೂತನ ಪ್ರತಿಭಟನೆ

Date:

ಬೆಂಗಳೂರು, ಜನವರಿ,25,2025 (www.justkannada.in):  ಅನಧಿಕೃತವಾಗಿ ನಡೆಯುತ್ತಿರುವ ರಾಪಿಡೋ, ಓಲಾ, ಉಬರ್, ಹಾಗೂ ಗೂಡ್ಸ್  ಪೋರ್ಟರ್ ನಂತಹ  ಆನ್ಲೈನ್ ಸಂಸ್ಥೆಗಳು ವಿರುದ್ಧ ಹಾಗೂ ಇಂತಹ ಕಾನೂನುಬಾಹಿರ ಸಂಸ್ಥೆಗಳನ್ನು ಪೋಷಿಸುತ್ತಿರುವ ಸಾರಿಗೆ ಅಧಿಕಾರಿಗಳ ಧೋರಣೆ ಖಂಡಿಸಿ ಇಂಡಿಯನ್ ವೆಹಿಕಲ್ ಡ್ರೈವರ್ಸ್ ಟ್ರೇಡ್ ಯೂನಿಯನ್ ಹಾಗೂ ಸ್ನೇಹಜೀವಿ ಚಾಲಕರ ಟ್ರೇಡ್ ಯೂನಿಯನ್ ನ ಪ್ರತಿನಿಧಿಗಳು ಫ್ರೀಡಂ ಪಾರ್ಕ್ ನ ಭಗತ್ ಸಿಂಗ್ ಪ್ರತಿಮೆ ಎದುರು ಖಾಲಿ ತಪ್ಪಲೆ, ತಟ್ಟೆಗಳನ್ನು ಹಿಡಿದು ವಿನೂತನ ಪ್ರತಿಭಟನೆ ನಡೆಸಿದರು.

ಚಾಲಕರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಚಾಲಕರು ಖಾಲಿ ಪಾತ್ರೆ ಸಾಮಾನುಗಳನ್ನು ಬಡಿದು, ಕಪ್ಪು ಪಟ್ಟಿ ಧರಿಸಿ ಘೋಷಣೆ ಕೂಗಿದರು. ಕಾನೂನು ಬಾಹಿರ ಸಾಗಾಣೆ ವಾಹನ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, ಇವು ಸರ್ಕಾರದಿಂದ ನಿಯಮಾನುಸಾರ ಅನುಮತಿ ಪಡೆದಿಲ್ಲ. ಇದರಿಂದ ಖಾಸಗಿ ವಾಹನ ಚಾಲಕರ ದುಡಿಮೆಗೆ ಅನ್ಯಾಯವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಂಡಿಯನ್ ವೆಹಿಕಲ್ ಡ್ರೈವರ್ಸ್ ಟ್ರೇಡ್ ಯೂನಿಯನ್ ಅಧ್ಯಕ್ಷ ಗಂಡಸಿ ಸದಾನಂದಸ್ವಾಮಿ ಮಾತನಾಡಿ, ಸಮಸ್ಯೆ ಬಗೆಹರಿಸುವಂತೆ ಸಾರಿಗೆ ಅಧಿಕಾರಿಗಳಿಗೆ ಪದೇ ಪದೇ ಮಾಡಿದ ಮನವಿಗೆ ಯಾವುದೇ ಸ್ಪಂದನೆ ದೊರೆತಿಲ್ಲ. ಸಾರಿಗೆ ಅಧಿಕಾರಿಗಳೇ ಇಂತಹ ಕಾನೂನು ಬಾಹಿರ ಸಂಸ್ಥೆಗಳ ಪೋಷಕರಾಗಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸುವಂತೆ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮನವಿ ಮಾಡಿದ್ದೇವೆ. ಸರ್ಕಾರದ ಧೋರಣೆಯಿಂದ ಚಾಲಕರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ದರ ತಾರತಮ್ಯ ಮಾಡುತ್ತಿರುವ ಓಲಾ, ಉಬರ್ ಗೆ ಕೇಂದ್ರ ಸರ್ಕಾರ ಈಗಾಗಲೇ ನೋಟಿಸ್ ನೀಡಿ ಸ್ಪಷ್ಟನೆ ಕೇಳಿದೆ. ಚಾಲಕರ ಸಮಸ್ಯೆಗಳಿಗೆ ರಾಜ್ಯ ಸರ್ಕಾರವೂ ಕೂಡ ನೇರ ಹೊಣೆ. ನಮ್ಮ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಸ್ನೇಹಜೀವಿ ಚಾಲಕರ ಟ್ರೇಡ್ ಯೂನಿಯನ್ ರಾಜ್ಯಾಧ್ಯಕ್ಷ ಸಂತೋಷ್ ಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜುಕನ್ನಡಿಗ ಮಾತನಾಡಿ, ಸರ್ಕಾರದ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಎಷ್ಟೇ ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗುತ್ತಿಲ್ಲ. ಕ್ಷುಲ್ಲಕ  ಕಾರಣಗಳನ್ನು ನೀಡಿ ಚಾಲಕರಿಗೆ ಅನ್ಯಾಯ ಎಸಗುತ್ತಿದ್ದಾರೆ.  ಇಂತಹ ಕಾನೂನು ಬಾಹಿರ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲು ಉನ್ನತಮಟ್ಟದ ಸಭೆ ಕರೆದು ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದರು.

Key words: Driver organizations, protest, against, Rapido, Ola, Uber, Goods portals

The post ಅನಧಿಕೃತ ರಾಪಿಡೋ, ಓಲಾ, ಉಬರ್, ಗೂಡ್ಸ್ ಪೋರ್ಟಲ್ ಗಳ ವಿರುದ್ಧ ಚಾಲಕ ಸಂಘಟನೆಗಳ ವಿನೂತನ ಪ್ರತಿಭಟನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಇನ್ನೊಬ್ಬರ ಹೇಳಿಕೆಗೆ ಪ್ರತಿಕ್ರಿಯಿಸಿದ್ರೆ ನನ್ನತನ ಏನು ಉಳಿಯುತ್ತೆ- ಸಚಿವ ಕೃಷ್ಣಭೈರೇಗೌಡ

ಶಿವಮೊಗ್ಗ,ಫೆಬ್ರವರಿ,12,2026 (www.justkannada.in):  ಸಿಎಂ ಬದಲಾವಣೆ  ಮತ್ತು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿ...

ಸಿಎಂ ಬದಲಾವಣೆ ವಿಚಾರ: ಇದು ಹೆಚ್ಚು ಚರ್ಚೆ ಮಾಡೋ ವಿಷಯ ಅಲ್ಲ ಎಂದ ಸಚಿವ ಮಹದೇವಪ್ಪ

ಬೆಂಗಳೂರು,ಫೆಬ್ರವರಿ,12,2026 (www.justkannada.in):   ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಹೈಕಮಾಂಡ್...

ನನ್ನ ಇಲಾಖೆಯಿಂದ ಶಾಸಕರ ವಿದೇಶ ಪ್ರವಾಸ ಆಯೋಜನೆ ಮಾಡಿಲ್ಲ-ಸಚಿವ ವೆಂಕಟೇಶ್

ಬೆಂಗಳೂರು,ಫೆಬ್ರವರಿ,12,2026 (www.justkannada.in):  ಪಶುಸಂಗೋಪನಾ ಇಲಾಖೆ ವತಿಯಿಂದ ಶಾಸಕರಿಗೆ ವಿದೇಶ ಪ್ರವಾಸ ಆಯೋಜನೆ...

ನಾಯಕತ್ವ ಬದಲಾವಣೆ: ಗೊಂದಲ ಬಗೆಹರಿಯದಿದ್ರೆ ಕಾರ್ಯಕರ್ತರಿಗೆ ಸಮಸ್ಯೆ – ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು,ಫೆಬ್ರವರಿ,11,2026 (www.justkannada.in): ನಾಯಕತ್ವ ಬದಲಾವಣೆ ವಿಚಾರದಲ್ಲಿ ಗೊಂದಲ ಆಗೇ ಆಗುತ್ತೆ.  ಗೊಂದಲ...