12
March, 2026

A News 365Times Venture

12
Thursday
March, 2026

A News 365Times Venture

ಕರೆಂಟ್ ಶಾಕ್  ಹೊಡೆದು ಮಹಿಳೆ ಬಲಿ: 5 ಲಕ್ಷ ರೂ. ಪರಿಹಾರ ವಿತರಿಸಿದ ಸಚಿವ ಜಮೀರ್

Date:

ಬೆಂಗಳೂರು,ಮಾರ್ಚ್,13,2025 (www.justkannada.in): ನೀರು ಹಿಡಿಯುವ ವೇಳೆ  ಕರೆಂಟ್ ಶಾಕ್ ಹೊಡೆದು ಮಹಿಳೆ ದಾರುಣ  ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆ.ಆರ್. ಮಾರ್ಕೆಟ್ ರಸ್ತೆಯ ಆನಂದಪುರದಲ್ಲಿ ನಡೆದಿದೆ.

ಸೆಲ್ವಿ ಮೃತಪಟ್ಟ ಮಹಿಳೆ. ಇಲ್ಲಿರುವ ಯಾವ ಮನೆಗೂ ನೀರಿನ ಸಂಪರ್ಕ ಇಲ್ಲ. ದೊಡ್ಡ ಪೈಪ್‌ ನಲ್ಲಿ ಅಲ್ಲಲ್ಲಿ ಮೋಟರ್ ಕನೆಕ್ಷನ್ ನೀಡಲಾಗಿದೆ. ಮೋಟರ್ ಸ್ಟಾರ್ಟ್ ಮಾಡುವಾಗ ಕರೆಂಟ್ ತಗುಲಿ ಮಹಿಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಘಟನೆ ಬೆನ್ನಲ್ಲೆ ಮೈಸೂರು ರಸ್ತೆ ಎರಡೂ ಕಡೆ ಸಂಪೂರ್ಣ ಬಂದ್ ಆಗಿದ್ದು, ನ್ಯಾಯ ಬೇಕು ಎಂದು ಘೋಷಣೆ ಕೂಗಿ  ಸ್ಥಳೀಯರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಹಾಗೆಯೇ ಸಚಿವ ಜಮೀರ್ ಅಹ್ಮದ್ ಖಾನ್ ಸ್ಥಳಕ್ಕೆ ಆಗಮಿಸುವಂತೆ ಆಗ್ರಹಿಸಿದರು.

ಸ್ಥಳಕ್ಕೆ ಸಚಿವ ಜಮೀರ್ ಅಹ್ಮದ್ ಖಾನ್ ಭೇಟಿ ನೀಡಿದ್ದು ಈ ಮಧ್ಯೆ ಮೃತ ಮಹಿಳೆ ಸೆಲ್ವಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ವಿತರಿಸಿದ್ದಾರೆ ಎನ್ನಲಾಗಿದೆ.

Key words: Woman, dies, electric shock, Bangalore

The post ಕರೆಂಟ್ ಶಾಕ್  ಹೊಡೆದು ಮಹಿಳೆ ಬಲಿ: 5 ಲಕ್ಷ ರೂ. ಪರಿಹಾರ ವಿತರಿಸಿದ ಸಚಿವ ಜಮೀರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗ್ಯಾಸ್ ಸಿಲಿಂಡರ್ ಸಮಸ್ಯೆ: ಕೇಂದ್ರದ ವಿರುದ್ದ ಗುಡುಗಿದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ,ಮಾರ್ಚ್,12,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಾಗದೆ ದೇಶದಲ್ಲಿ...

ರಾಜ್ಯದಲ್ಲಿ2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: ಭರ್ತಿಗೆ ಕ್ರಮ-ಎನ್ ಎಸ್ ಬೋಸರಾಜು

ಬೆಂಗಳೂರು,ಮಾರ್ಚ್,12,2026 (www.justkannada.in):  ರಾಜ್ಯದಲ್ಲಿ 2.84 ಲಕ್ಷ ಹುದ್ದೆಗಳು ಖಾಲಿ ಇದ್ದು ಒಳ...

ಕೇಂದ್ರದ ವಿಫಲ: ರಾಜ್ಯದ ಎಲ್ಲಾ ಕಡೆಯೂ ಗ್ಯಾಸ್ ಸಿಲಿಂಡರ್ ಸಿಗುತ್ತಿಲ್ಲ- ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು,ಮಾರ್ಚ್,12,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಭಾರತದ ಮೇಲೆ ಪರಿಣಾಮ ಬೀರಿದ್ದು ದೇಶದ...

ಗೃಹಬಳಕೆ ಸಿಲಿಂಡರ್ ಪೂರೈಕೆ: ಆತಂಕ ಬೇಡ ಎಂದ ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮಾರ್ಚ್,11,2026 (www.justkannada.in): ಯುದ್ದದಿಂದಾಗಿ ಹಡಗು ಸಂಚಾರ ನಿಲ್ಲಿಸಿದ್ದಾರೆ. ಹೀಗಾಗಿ ಸಿಲಿಂಡರ್ ಪೂರೈಕೆಯಲ್ಲಿ...