5
March, 2026

A News 365Times Venture

5
Thursday
March, 2026

A News 365Times Venture

ಕಲ್ಯಾಣ ಕರ್ನಾಟಕ ಭಾಗಕ್ಕೆ 371 ಜೆ ಅಡಿ ಹುದ್ದೆಗಳ ಆಯ್ಕೆ ನಿಯಮಾನುಸಾರ ನಡೆಸಿ: ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

Date:

ಬೆಂಗಳೂರು,ಮೇ,27,2025 (www.justkannada.in): ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಸಂಬಂಧಿಸಿದಂತೆ 371 ಜೆ ಅಡಿ ಸರ್ಕಾರದ ವಿವಿಧ ಸಂಸ್ಥೆಗಳಲ್ಲಿ ಹುದ್ದೆಗಳ ನೇಮಕಾತಿಗಳು ಸರ್ಕಾರ ನಿಗದಿ ಪಡಿಸಿರುವ ಮಾನದಂಡಗಳಂತೆ ನಡೆಯುತ್ತಿಲ್ಲ, 2023ರ ಸರ್ಕಾರದ ಆದೇಶದಂತೆ ಕಟ್ಟುನಿಟ್ಟಾಗಿ ಎಲ್ಲ ಆಯ್ಕೆಗಳನ್ನು ಮಾಡಬೇಕು  ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವರೂ ಆದ  371-ಜೆ ಅನುಷ್ಟಾನ ಕುರಿತಾದ ಸಚಿವ ಸಂಪುಟದ ಉಪ ಸಮಿತಿಯ ಅಧ್ಯಕ್ಷ ಪ್ರಿಯಾಂಕ್‌ ಖರ್ಗೆ ಅಧಿಕಾರಿಗಳಿಗೆ ಸೂಚಿಸಿದರು.

ವಿಕಾಸಸೌಧದ ಸಚಿವರ ಕಚೇರಿಯಲ್ಲಿ ಇಂದು ನಡೆದ ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ,ಶರಣಪ್ರಕಾಶ್‌ ಪಾಟೀಲ್‌ ಅವರೂ ಪಾಲ್ಗೊಂಡು ಸರ್ಕಾರದ ವಿವಿಧ ಸಂಸ್ಥೆಗಳು ಸರ್ಕಾರದ ಸೂಚನೆಯನ್ನು ಪಾಲಿಸುವಲ್ಲಿ ಲೋಪ ಮಾಡುತ್ತಿರುವ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರಲ್ಲದೆ ನಿಯಮಬಾಹಿರವಾಗಿ ಮಾಡಿರುವ ಆಯ್ಕೆಗಳನ್ನು ಹಿಂಪಡೆಯಬೇಕೆಂದು ಸೂಚಿಸಿದರು.

ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆ ಸ್ಪಷ್ಟ ನಿರ್ದೇಶನಗಳನ್ನು ನೀಡಿದಾಗ್ಯೂ ವಿವಿಧ ಇಲಾಖೆಗಳಲ್ಲಿ ಗೊಂದಲ ಇರುವುದರಿಂದ ಮತ್ತೊಮ್ಮೆ ಸೂಕ್ತ ಮಾರ್ಗದರ್ಶನಗಳನ್ನು ನೀಡುವಂತೆ ಸಚಿವ ಪ್ರಿಯಾಂಕ್‌ ಖರ್ಗೆ ಸಭೆಯಲ್ಲಿದ್ದ ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ಜಿ.ಸತ್ಯವತಿ ಅವರಿಗೆ ಸೂಚಿಸಿದರು.vtu

ಮುಂದಿನ ತಿಂಗಳು 371-ಜೆ ಅನುಷ್ಟಾನ ಕುರಿತಾದ ಸಚಿವ ಸಂಪುಟದ ಉಪ ಸಮಿತಿಯ ಸಭೆ ಕರೆದು ಈ ಸಂಬಂಧದ ಗೊಂದಲಗಳನ್ನು ನಿವಾರಿಸಲಾಗುವದೆಂದು ಸಂಪುಟ ಉಪ ಸಮಿತಿಯ ಅಧ್ಯಕ್ಷರೂ ಆದ ಸಚಿವ ಪ್ರಿಯಾಂಕ್‌ ಖರ್ಗೆ ಸಭೆಯಲ್ಲಿ ಪ್ರಕಟಿಸಿದರು.

ಸಭೆಯಲ್ಲಿ ಕಿಯೊನಿಕ್ಸ್‌ ವ್ಯವಸ್ಥಾಪಕ ನಿರ್ದೇಶಕ ಪವನ್‌ ಕುಮಾರ್‌ ಮಾಲಪಾಟಿ, ಎಂ.ಎಸ್.ಐ.ಎಲ್‌ನ ಮನೋಜ್‌ ಕುಮಾರ್‌, ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಇಲಾಖೆ ಕಾರ್ಯದರ್ಶಿ ಭಾರತಿ, ಕರ್ನಾಟಕ ನಗರ ಜಲಮಂಡಳಿಯ ಡಾ.ಸೆಲ್ವಮಣಿ, ಆಹಾರ ಹಾಗೂ ನಾಗರಿಕ ಪೂರೈಕೆ ನಿಗಮದ ಎಂ.ವಿ.ಚಂದ್ರಕಾಂತ್‌ ಮುಂತಾದವರು ಭಾಗವಹಿಸಿದ್ದರು.

Key words: recruitment, Kalyana Karnataka, Minister,  Priyank Kharge

The post ಕಲ್ಯಾಣ ಕರ್ನಾಟಕ ಭಾಗಕ್ಕೆ 371 ಜೆ ಅಡಿ ಹುದ್ದೆಗಳ ಆಯ್ಕೆ ನಿಯಮಾನುಸಾರ ನಡೆಸಿ: ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸರ್ಕಾರಿ ವೈದ್ಯರು ಮುಷ್ಕರ ಮಾಡಲ್ಲ ಎಂಬ ವಿಶ್ವಾಸವಿದೆ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು,ಮಾರ್ಚ್,5,2026 (www.justkannada.in): ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ವೈದ್ಯರಯ ಮಾರ್ಚ್...

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಬೆಂಗಳೂರು, ಮಾರ್ಚ್​, 5,2026 (www.justkannada.in):  ಬೆಳ್ಳಂಬೆಳಿಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್...

ಫೋನ್ ಕದ್ದಾಲಿಕೆ ಅವಶ್ಯಕತೆ ಏನಿದೆ? ಸಚಿವ ರಾಮಲಿಂಗರೆಡ್ಡಿ

ರಾಮನಗರ,ಮಾರ್ಚ್,4,2026 (www.justkannada.in): ಕಾಂಗ್ರೆಸ್ ಸರ್ಕಾರದಲ್ಲಿ ಫೋನ್ ಕದ್ದಾಲಿಕೆ ಇದೆ ಎಂದು ಕೇಂದ್ರ...

ಕೆಪಿಸಿಸಿಗೆ ಹೊಸ ನಾಯಕತ್ವ: ಡಿಕೆಶಿ ಹೇಳಿರೋದು ಸರಿಯಾಗಿದೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು, ಮಾರ್ಚ್,4,2026 (www.justkannada.in): ಕೆಪಿಸಿಸಿಗೆ ಹೊಸ ನಾಯಕತ್ವ ಬೇಕು ಎಂಬ ಡಿಸಿಎಂ...