4
May, 2026

A News 365Times Venture

4
Monday
May, 2026

A News 365Times Venture

ಕಾಂತರಾಜು ವರದಿಗೂ, ಎಸ್.ಸಿ ಒಳಮೀಸಲಾತಿ ಸಮೀಕ್ಷೆಗೂ ಸಂಬಂಧ ಇಲ್ಲ- ಸಚಿವ ಹೆಚ್.​​ಸಿ ಮಹದೇವಪ್ಪ

Date:

ಬೆಂಗಳೂರು, ಮೇ, 5,2025 (www.justkannada.in): ಕರ್ನಾಟಕ ಒಳಮೀಸಲಾತಿ ಜಾತಿ ಗಣತಿ ಸಮೀಕ್ಷೆಗೆ ರಾಜ್ಯ ಸರ್ಕಾರ ಮುಂದಾಗಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ, ಇದು ಪರಿಶಿಷ್ಟಜಾತಿ ಸಮುದಾಯಕ್ಕೆ ಮಾಡುತ್ತಿರುವ ಸಮೀಕ್ಷೆಯಾಗಿದ್ದು ಕಾಂತರಾಜು ವರದಿಗೂ ಈ ಸಮೀಕ್ಷೆಗೂ ಸಂಬಂಧ ಇಲ್ಲ ಎಂದು ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಹೆಚ್.​ಸಿ ಮಹದೇವಪ್ಪ, ಎಸ್​ಸಿ ಒಳ ಮೀಸಲಾತಿ ಸಮೀಕ್ಷೆ ಇದೊಂದು ಚಾರಿತ್ರಿಕವಾದದ್ದು. ಪರಿಶಿಷ್ಟ ಜಾತಿ ಅನ್ನೋದು ಜಾತಿ ಅಲ್ಲ, ಅದೊಂದು ಗುಂಪು. ಪರಿಶಿಷ್ಟ ಜಾತಿ ಸಮುದಾಯದ ದತ್ತಾಂಶಗಳ ಸಂಗ್ರಹಕ್ಕಾಗಿ ಸುಪ್ರೀಂಕೋರ್ಟ್​ ನಿರ್ದೇಶನದಂತೆ ಸಮೀಕ್ಷೆ ಮಾಡಲಾಗುತ್ತಿದೆ. ಪರಿಶಿಷ್ಟ ಜಾತಿಗಳಲ್ಲಿನ 101 ಜಾತಿಗಳ ಜನಸಂಖ್ಯೆ ತಿಳಿಯಲು ಒಳಮೀಸಲಾತಿ ಜಾರಿಗೆ ಗಣತಿ ಮಾಡುತ್ತಿದ್ದೇವೆ. ಗಣತಿ ಕಾರ್ಯಕ್ಕೆ ಅಂದಾಜು 100 ಕೋಟಿ ರೂ ಹಣ ಖರ್ಚು ಆಗಲಿದೆ ಎಂದು ತಿಳಿಸಿದರು.

ಇದು ಎಸ್.​​ಸಿ ಅವರಿಗೆ ಮಾತ್ರ ಈ ಸಮೀಕ್ಷೆ. ಇದು ಎಂಪರಿಕಲ್ ಡಾಟಾ ಕಲೆಕ್ಟ್ ಮಾಡುವುದು ಅಷ್ಟೇ. ಈ ಸಮೀಕ್ಷೆಗೆ ಎಡಗೈ ಮತ್ತು ಬಲಗೈನವರ ಒಮ್ಮತ ಇದೆ. ಯಾರು ಕೂಡ ಸುಳ್ಳು ಹೇಳೋಕೆ‌ ಆಗಲ್ಲ. ಕಾಂತರಾಜು ವರದಿಯಲ್ಲಿ, ನ್ಯಾಷನಲ್ ಸಮೀಕ್ಷೆಯಲ್ಲಿ ಅಂಕಿ-ಅಂಶ ಇಲ್ಲ. ಹೀಗಾಗಿ ಯಾರು ಕೂಡ ಅನುಮಾನ ಪಡುವ ಹಾಗಿಲ್ಲ. ಯಾರು, ಎಷ್ಟು ಜನ ಇದ್ದಾರೆ ಅಂತಾ ಯಾರಿಗೂ ಸಹ ಗೊತ್ತಿಲ್ಲ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

Key words: SC, internal reservation, survey, Minister, H.C. Mahadevappa

The post ಕಾಂತರಾಜು ವರದಿಗೂ, ಎಸ್.ಸಿ ಒಳಮೀಸಲಾತಿ ಸಮೀಕ್ಷೆಗೂ ಸಂಬಂಧ ಇಲ್ಲ- ಸಚಿವ ಹೆಚ್.​​ಸಿ ಮಹದೇವಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗೆಲ್ಲುವ ಕಡೆ ಜಮೀರ್, ಸೋಲುವ ಕಡೆ ಡಿಕೆಶಿ ಕಳಿಸ್ತಾರೆ- ಆರ್.ಅಶೋಕ್ ಲೇವಡಿ

ಬೆಂಗಳೂರು,ಮೇ,4,2026 (www.justkannada.in):  ಗೆಲ್ಲುವ ಕಡೆ ಜಮೀರ್ ರನ್ನು ಸೋಲುವ ಕಡೆ ಡಿಕೆ...

ಕೆ.ಸಿ ರೆಡ್ಡಿ ಅವರು ಒಬ್ಬ ಸಮರ್ಥ, ಪ್ರಾಮಾಣಿಕ  ಆಡಳಿತಗಾರರಾಗಿದ್ದರು:ಸಿಎಂ  ಸಿದ್ದರಾಮಯ್ಯ

ಬೆಂಗಳೂರು, ಮೇ,04,2026 (www.justkannada.in):  ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ ರೆಡ್ಡಿಯವರು ಒಬ್ಬ...

ಬಾಗಲಕೋಟೆ ಬೈ ಎಲೆಕ್ಷನ್: ‘ಕೈ’ ಅಭ್ಯರ್ಥಿ ಉಮೇಶ ಮೇಟಿಗೆ ಭರ್ಜರಿ ಜಯ

ಬಾಗಲಕೋಟೆ,ಮೇ,4,2026 (www.justkannada.in):  ಬಾಗಲಕೋಟೆ ವಿಧಾನಸಭಾ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ...

ಸಿದ್ದರಾಮಯ್ಯ ಜನಪ್ರಿಯತೆ, ಗ್ಯಾರಂಟಿ ನಮ್ಮ ಕೈಹಿಡಿದಿದೆ – ಸಚಿವ ಆರ್.ಬಿ ತಿಮ್ಮಾಪುರ

ಬಾಗಲಕೋಟೆ,ಮೇ,4,2026 (www.justkannada.in):  ಬಾಗಲಕೋಟೆ ಉಪಚುನಾವಣೆ ಫಲಿತಾಂಶ ಪ್ರಕಟ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ...