28
August, 2026

A News 365Times Venture

28
Friday
August, 2026

A News 365Times Venture

ಕಾನೂನು ಸುವ್ಯವಸ್ಥೆ ಕಾಪಾಡಲು ಕಟ್ಟು ನಿಟ್ಟಿನ ಕ್ರಮ: ಪ್ರಮುಖ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಿ- ಸಿಎಂ ಸಿದ್ದರಾಮಯ್ಯ ಸೂಚನೆ

Date:

ಬೆಂಗಳೂರು,ಮೇ,10,2025 (www.justkannada.in): ಭಾರತ- ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು. ರಾಜ್ಯದ ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಬೇಕು ಎಂದು ಅಧಿಕಾರಿಗಳಿಗೆ  ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

ವಿಧಾನಸೌಧ ಸಮಿತಿ ಕೊಠಡಿಯಲ್ಲಿ ರಾಜ್ಯದ ಎಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳು, ಡಿಸಿ, ಎಸ್ಪಿ, ಆಯುಕ್ತರ ಜೊತೆ ಸಿಎಂ ಸಿದ್ಧರಾಮಯ್ಯ ವಿಡಿಯೋ ಕಾನ್ಫರೆನ್ಸ್ ಮೂಲಕ ಮಹತ್ವದ ಸಭೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಗತ್ಯ ವಸ್ತುಗಳ ದರ ಹೆಚ್ಚಳ ಆಗದಂತೆ ಅಧಿಕಾರಿಗಳು ನಿಗಾ ವಹಿಸಬೇಕು. ಅಕ್ರಮ ದಾಸ್ತಾನು ಕಾಳಸಂತೆ  ಮೇಲೆ ನಿರಂತರವಾಗಿ ನಿಗಾ ಇಡಬೇಕು.  ಯುದ್ದದ ಪರಿಸ್ಥಿತಿ ತಿಳಿಯಾಗವವರೆಗೆ ಜನರಲ್ಲಿ ಜಾಗೃತಿ ಮೂಡಿಸಿ  ಯುದ್ದದ ಸಂದರ್ಭದಲ್ಲಿ ಜನ ಹೇಗೆ ರಕ್ಷಿಸಿಕೊಳ್ಳಬೇಕು ಎಂಬ ಬಗ್ಗೆ ಜಾಗೃತಿ ಮೂಡಿಸಿ ಎಂದು ಸೂಚಿಸಿದರು.

ಕಾನೂನು ಸುವ್ಯವಸ್ಥೆ ಕಾಪಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಯಾವುದೇ ಪರಿಸ್ಥಿತಿ ಎದುರಿಸಲು ನಾವು ಸರ್ವಸನ್ನದರಾಗಬೇಕು.  ರಾಜ್ಯದ ಪ್ರಮುಖ ಸ್ಥಳಗಳಲ್ಲಿ ಹೆಚ್ಚು ಭದ್ರತೆ ಒದಗಿಸಬೇಕು. ಸುಳ್ಳು ಸುದ್ದಿ ಹರಡುವುದನ್ನ ತಪ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ಸೂಚಿಸಿದ್ದಾರೆ.

Key words: maintain law and order, Increase, security, CM, Siddaramaiah, Meeting

The post ಕಾನೂನು ಸುವ್ಯವಸ್ಥೆ ಕಾಪಾಡಲು ಕಟ್ಟು ನಿಟ್ಟಿನ ಕ್ರಮ: ಪ್ರಮುಖ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಿ- ಸಿಎಂ ಸಿದ್ದರಾಮಯ್ಯ ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವಿದ್ಯಾರ್ಥಿಗಳ ಸಮಸ್ಯೆ, ಶಿಕ್ಷಣ ಸುಧಾರಣೆಗೆ ಸಂಪುಟ ಉಪಸಮಿತಿ ರಚನೆ

ಬೆಂಗಳೂರು, ಆಗಸ್ಟ್,27,2026 (www.justkannada.in):   ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿ, ಶಿಕ್ಷಣ ವ್ಯವಸ್ಥೆಯಲ್ಲಿ ಅಗತ್ಯ...

ಅಲ್ಪಸಂಖ್ಯಾತರ ರಕ್ಷಣೆ, ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ-ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, ಆಗಸ್ಟ್, 27,2026 (www.justkannada.in): “ಅಲ್ಪಸಂಖ್ಯಾತರ ರಕ್ಷಣೆ, ಅಭಿವೃದ್ಧಿ ಹಾಗೂ ಸೇವೆಗೆ...

ರಾಜ್ಯದ 101 ತಾಲ್ಲೂಕುಗಳು ಬರಪೀಡಿತ – ಡಿಸಿಎಂ ಪರಮೇಶ್ವರ್ ಘೋಷಣೆ

ಬೆಂಗಳೂರು,ಆಗಸ್ಟ್,27,2026 (www.justkannada.in): ರಾಜ್ಯದ 101 ತಾಲ್ಲೂಕುಗಳು ಬರಪೀಡಿತ ಎಂದು ಕಂದಾಯ ಸಚಿವರೂ...

ಕಾಮಗಾರಿ ಅಪೂರ್ಣ, ಬಳಕೆಗೆ ಬಾರದ ಸ್ಥಿತಿ:  “ಸೈನಿಕ” ಉದ್ಯಾನವನಕ್ಕೆ ಗ್ರಹಣವೇ?

ಮೈಸೂರು,ಆಗಸ್ಟ್,27,2026 (www.justkannada.in): ನಗರದ ದಟ್ಟಗಳ್ಳಿ 3ನೇ ಹಂತದಲ್ಲಿ, ಮಹಾಲಕ್ಷ್ಮಿ ದೇವಸ್ಥಾನದ ಸಮೀಪದಲ್ಲಿರುವ...