27
August, 2026

A News 365Times Venture

27
Thursday
August, 2026

A News 365Times Venture

ಕೆರೆಯಲ್ಲಿ ಒಂದೇ ಕುಟುಂಬದ 6 ಜನರ ಶವ ಪತ್ತೆ..

Date:

ವಿಜಯಪುರ, ಆಗಸ್ಟ್,26,2026 (www.justkannada.in): ವಿಜಯಪುರದ ಐತಿಹಾಸಿಕ ಭೂತನಾಳ ಕೆರೆಯಲ್ಲಿ ಒಂದೇ ಕುಟುಂಬದ 6 ಜನರ ಶವ ಪತ್ತೆಯಾಗಿದೆ.

ಕೌಟುಂಬಿಕ ಕಲಹದಿಂದ ಮನನೊಂದ ತಾಯಿ ತನ್ನ ಐವರು ಮಕ್ಕಳೊಂದಿಗೆ ಭೂತನಾಳ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.  ತಾಯಿ ಶೋಭಾ ಜಾಲಗೇರಿ (45) ಹಾಗೂ ಅವರ ಮಕ್ಕಳಾದ ವಿದ್ಯಾ (16), ಸುವರ್ಣ (14), ಗೌಡೇಶ್‌ (10), ಸಾನಿಕಾ (7) ಮತ್ತು ವಿಕಾಸ್‌ (5) ಮೃತಪಟ್ಟವರು  ಎಂದು ಗುರುತಿಸಲಾಗಿದೆ.

ಮೃತರು ವಿಜಯಪುರ ಜಿಲ್ಲೆಯ ತೊರವಿ ಗ್ರಾಮದವರು ಎನ್ನಲಾಗಿದೆ. ಶೋಭಾ ಹಾಗೂ ಅವರ ಪತಿ ಭೀಮರಾಯ ಜಾಲಗೇರಿ ನಡುವೆ ಕೌಟುಂಬಿಕ ವಿಚಾರವಾಗಿ ಜಗಳ ನಡೆದಿತ್ತು ಎನ್ನಲಾಗಿದೆ. ಇದರಿಂದ ಮನನೊಂದಿದ್ದ ಶೋಭಾ, ಆ.24ರಂದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಐವರು ಮಕ್ಕಳೊಂದಿಗೆ ಮನೆಯಿಂದ ಬಂದಿದ್ದರು.

ಈ ಮಧ್ಯೆ ಇದೀಗ ತಾಯಿ ಮತ್ತು ಐವರು ಮಕ್ಕಳ ಶವ ಭೂತನಾಳ ಕೆರೆಯಲ್ಲಿ ಪತ್ತೆಯಾಗಿದ್ದು ಈ ಕುರಿತು ಪ್ರಕರಣ ದಾಖಲಾಗಿದೆ.

Key words: Vijayapur,  Bodies of 6 members, same family, found , lake

The post ಕೆರೆಯಲ್ಲಿ ಒಂದೇ ಕುಟುಂಬದ 6 ಜನರ ಶವ ಪತ್ತೆ.. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

175 ತಾಲ್ಲೂಕುಗಳನ್ನ ಬರಪೀಡಿತ ಎಂದು ಘೋಷಿಸಬೇಕಿತ್ತು- ಆರ್.ಅಶೋಕ್

ಬೆಂಗಳೂರು,ಆಗಸ್ಟ್,27,2026 (www.justkannada.in): ರಾಜ್ಯ ಸರ್ಕಾರ 101 ತಾಲ್ಲೂಕುಗಳನ್ನ ಬರಪೀಡಿತ ಎಂದು ಘೋಷಿಸಿರುವ...

ಆಸ್ತಿ ಉಯಿಲಿನ ಸಾಕ್ಷಿ ಬಂಧನ ಹಿನ್ನೆಲೆ: ತನಿಖಾಧಿಕಾರಿಗೆ 3 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್

ಬೆಂಗಳೂರು,ಆಗಸ್ಟ್,27,2026 (www.justkannada.in): ಆಸ್ತಿ ಉಯಿಲಿನ ಸಾಕ್ಷಿಯೊಬ್ಬರನ್ನು ಪೊಲೀಸರು ಬಂಧಿಸಿದ ಹಿನ್ನೆಲೆ,  ಬಂಧನವನ್ನು...

ಲಿಂಗಾಂಬುಧಿ ಕೆರೆ ಪ್ರವೇಶ ಶುಲ್ಕ ವಿರೋಧಿಸಿ ವಾಯುವಿಹಾರಿಗಳ ಪ್ರತಿಭಟನೆ

ಮೈಸೂರು,ಆಗಸ್ಟ್,27,2026 (www.justkannada.in):  ಲಿಂಗಾಂಬುಧಿ ಕೆರೆ ನಿರ್ವಹಣೆಯ ಹೆಸರಿನಲ್ಲಿ ಅರಣ್ಯ ಇಲಾಖೆ ವಿಧಿಸಲು...

ಬಿ.ನಾಗೇಂದ್ರ ಪಕ್ಷದ ಹಿತಕ್ಕಾಗಿ ಎಲ್ಲಾ ತ್ಯಾಗಕ್ಕೂ ಸಿದ್ದರಿದ್ದಾರೆ- ಸಿಎಂ ಡಿಕೆಶಿ

ನವದೆಹಲಿ,ಆಗಸ್ಟ್,27,2026 (www.justkannada.in):  ಸಚಿವ ಬಿ. ನಾಗೇಂದ್ರ ಪಕ್ಷದ ಹಿತಕ್ಕಾಗಿ ಎಲ್ಲಾ ತ್ಯಾಗಕ್ಕೂ...