17
April, 2026

A News 365Times Venture

17
Friday
April, 2026

A News 365Times Venture

ಧರ್ಮಸ್ಥಳ ಪ್ರಕರಣ: ಸತ್ಯಾಂಶ ಜನರ ಮುಂದೆ ಇಡುತ್ತೇವೆ- ಸಚಿವ ದಿನೇಶ್ ಗುಂಡೂರಾವ್

Date:

ಮಂಗಳೂರು,ಆಗಸ್ಟ್,15,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯವನ್ನ ಪತ್ತೆ ಹಚ್ಚುವ ಸಲುವಾಗಿ ಎಸ್ ಐಟಿ ತನಿಖೆ ನಡೆಸಲಾಗುತ್ತಿದೆ. ಸತ್ಯಾಂಶವನ್ನು ನಾವು ಜನರ ಮುಂದೆ ಇಡುತ್ತೇವೆ  ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್,  ಪ್ರಕರಣ ಕುರಿತು ಎಸ್ ಐಟಿ ತಂಡ ತನಿಖೆ ನಡೆಸುತ್ತಿದೆ. ಈ ಬಗ್ಗೆ ಸದನದಲ್ಲಿ ಸೋಮವಾರ ಗೃಹ ಸಚಿವ ಪರಮೇಶ್ವರ್ ಉತ್ತರ ನೀಡಲಿದ್ದಾರೆ . ಧರ್ಮಸ್ಥಳ ಪ್ರಕರಣದಲ್ಲಿ ಷಡ್ಯಂತ್ರ ಸೇರಿದಂತೆ ಸತ್ಯವನ್ನು ಪತ್ತೆ ಹಚ್ಚಲು ಎಸ್ ಐಟಿ ಪಾರದರ್ಶಕವಾಗಿ ತನಿಖೆ ನಡೆಸುತ್ತಿದೆ ಎಂದರು.

ಸತ್ಯಾಂಶ ಹೊರಬರಬೇಕು ಎಂಬುದೇ ಎಸ್ ಐಟಿ ರಚನೆ ಉದ್ದೇಶ. ತನಿಖೆ ಸಮರ್ಪಕವಾಗಿ ನಡೆಯುತ್ತಿದ್ದು, ಯಾರಿಗೂ ತನಿಖೆ ಬಗ್ಗೆ ಅನುಮಾನವಿಲ್ಲ. ಸತ್ಯಾಂಶವನ್ನು ನಾವು ಜನರ ಮುಂದೆ ಇಡುತ್ತೇವೆ. ಇದರ ಹಿಂದೆ ಷಡ್ಯಂತ್ರ ಇದ್ದರೆ ಅದನ್ನೂ ಪರಿಗಣಿಸಲಾಗುತ್ತದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

Key words: Dharmasthala case, truth, Minister, Dinesh Gundu Rao

The post ಧರ್ಮಸ್ಥಳ ಪ್ರಕರಣ: ಸತ್ಯಾಂಶ ಜನರ ಮುಂದೆ ಇಡುತ್ತೇವೆ- ಸಚಿವ ದಿನೇಶ್ ಗುಂಡೂರಾವ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

ಬೆಂಗಳೂರು,ಏಪ್ರಿಲ್,17,2026 (www.justkannada.in):  ಬಿಜೆಪಿ ಮುಖಂಡ ಹಾಗೂ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ...

ನನ್ನ ವೈಯಕ್ತಿಕ ವಿಚಾರ ಇಲ್ಲ: ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಏಪ್ರಿಲ್,17,2026 (www.justkannada.in):  ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷ ವಿರೋಧಿ...

ಬರದ ದವಡೆಗೆ ಕರುನಾಡು ಸಿಲುಕುತ್ತಿದ್ದರೆ ಕುರ್ಚಿಗಾಗಿ ಸಿಎಂ , ಡಿಸಿಎಂ ಮಗ್ನರಾಗಿರುವುದು ದುರದೃಷ್ಠಕರ- ಆರ್.ಅಶೋಕ್

ಬೆಂಗಳೂರು,ಏಪ್ರಿಲ್,17,2026 (www.justkannada.in):  ಕರುನಾಡು ಬರದ ದವಡೆಗೆ ಸಿಲುಕುತ್ತಿರುವ ಈ ಸಂಕಷ್ಟದ ಸಮಯದಲ್ಲಿ,...

ಇನ್ಮುಂದೆ ಚಾರಣಕ್ಕೆ ತೆರಳುವವರಿಗೆ ಮಾರ್ಗಸೂಚಿ: ಗೈಡ್ ಲೈನ್ಸ್ ಬಿಡುಗಡೆ ಮಾಡಿದ ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು,ಏಪ್ರಿಲ್,17,2026 (www.justkannada.in) : ಇತ್ತೀಚೆಗೆ ಚಿಕ್ಕಮಗಳೂರಿನ ಮಾಣಿಕ್ಯಧಾರದ ಬಳಿಕ ಕೇರಳ ಮೂಲದ...