5
March, 2026

A News 365Times Venture

5
Thursday
March, 2026

A News 365Times Venture

ನಾಲ್ವಡಿಗೆ ಸಿದ್ದು ಹೊಲಿಕೆ: ಹರೀಶ್ ಗೌಡ ಸಮರ್ಥನೆ, ಎಚ್ವಿ ಟೀಕೆ..!

Date:

ಮೈಸೂರು,ಜುಲೈ,26,2025 (www.justkannada.in): ನಾಲ್ವಡಿ ಕೃಷ್ಣರಾಜ ಒಡೆಯರ್ ಗಿಂತ ಅಭಿವೃದ್ಧಿ ಮಾಡಿದ್ದು ಸಿದ್ದರಾಮಯ್ಯ ಎಂಬ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಕುರಿತು ಕಾಂಗ್ರೆಸ್ ಶಾಸಕ ಹರೀಶ್ ಗೌಡ ಸಮರ್ಥಿಸಿಕೊಂಡರೇ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಟೀಕೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಎಂಎಲ್ ಸಿ ಹೆಚ್. ವಿಶ್ವನಾಥ್, ಇದು ದುರಹಂಕಾರದ ಪರಮಾವಧಿ. ಸಿದ್ದರಾಮಯ್ಯ ಯಾವಾಗಲೂ ನಾನೇ ನಾನೇ ಅಂತಾರೆ. ದೇವರಾಜ ಅರಸುಗಿಂತ ನಾನೇ ಒಳ್ಳೇ ಆಡಳಿತ ಕೊಟ್ಟಿದ್ದು ಅಂತಾರೆ. ನಾನೇ ನಾನೇ ಎನ್ನುವ ಅಹಂ, ದುರಹಂಕಾರ ಸಿದ್ದರಾಮಯ್ಯ ಕುಟುಂಬದಲ್ಲಿ ವಂಶವಾಹಿ ರೀತಿ ಹರಿದು ಕೊಂಡು ಬಂದಿದೆ. ಸಿದ್ದರಾಮಯ್ಯ ಹಾಗೂ ಅವರ ಮಗ ಮನುಷ್ಯ ದ್ವೇಷಿಗಳು ಥರ ಮಾತಾಡುತ್ತಿದ್ದಾರೆ. ನಮ್ಮ ಕಡೆ ಈ ರೀತಿ ಮಾತಾಡುವವರಿಗೆ ಎಚ್ಎಂ ಎನ್ನುತ್ತಾರೆ.  ಎಚ್ಎಂ ಅಂದರೆ ಹುಚ್ಚು ಮುಂಡೇದು ಅಂತಾ ಎಂದು ತಿರುಗೇಟು ಕೊಟ್ಟರು.

ದೇವರಾಜ್ ಅರಸು, ಎಸ್.ಎಂ ಕೃಷ್ಣ ಆಡಳಿತಕ್ಕೂ ಸಿದ್ದರಾಮಯ್ಯ ಆಡಳಿತ  ಸಮವಿಲ್ಲ

ಯತೀಂದ್ರ ಸಿದ್ದರಾಮಯ್ಯ ಇನ್ನೂ ಬೆಳೆಯುವ ಹುಡುಗ ಈಗಲೇ ಈ ಥರದ ದುರಹಂಕಾರದ ಮಾತು ಸರಿಯಲ್ಲ. ನಾಲ್ವಡಿ ಆಡಳಿತ ಇರಲಿ. ದೇವರಾಜ್ ಅರಸು, ಎಸ್.ಎಂ ಕೃಷ್ಣ ಆಡಳಿತಕ್ಕೂ ಸಿದ್ದರಾಮಯ್ಯ ಆಡಳಿತ  ಸಮವಿಲ್ಲ. ಸಿದ್ದರಾಮಯ್ಯ ಈ ರಾಜ್ಯಕ್ಕೆ ಕೊಟ್ಟ ಕೊಡುಗೆ ಏನೂ ಅದನ್ನು ಮೊದಲು ಹೇಳಲಿ. ಮಹಾರಾಜರು ಅವರ ಅಪ್ಪನ  ಮನೆಯಿಂದ ಹಣ ತಂದು ಅಭಿವೃದ್ಧಿ ಮಾಡಿದ್ದಾರಾ ಎಂದು ಹಿಂದೇ ಸಿದ್ದರಾಮಯ್ಯ ಕೇಳಿದ್ದರು. ಸಿದ್ದರಾಮಯ್ಯ ಏನೂ ಈಗ ಅವರ ಅಪ್ಪನ‌‌ ಮನೆಯಿಂದ ಹಣ ತಂದು ಅಭಿವೃದ್ಧಿ ಮಾಡುತ್ತಿದ್ದಾರಾ? ಸಿದ್ದರಾಮಯ್ಯರ ಮಗ ಈ ದೌಲತ್ ಗಿರಿ ಮೊದಲು ಬಿಡಲಿ. ನಾಲ್ವಡಿ ಕೃಷ್ಣರಾಜ ಒಡೆಯರ್ ಗೆ ಹೋಲಿಕೆ  ಮಾಡುವ ಯಾವ ರಾಜಕಾರಣಿ ಈ ದೇಶದಲ್ಲೇ ಇಲ್ಲ ಎಂದು ಗುಡುಗಿದರು.

ಯತೀಂದ್ರ ಹೇಳಿಕೆ ಸಮರ್ಥಿಸಿಕೊಂಡ ಕಾಂಗ್ರೆಸ್ ಶಾಸಕ ಹರೀಶ್ ಗೌಡ.

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಸಮರ್ಥಿಸಿಕೊಂಡ ಕಾಂಗ್ರೆಸ್ ಶಾಸಕ ಹರೀಶ್ ಗೌಡ, ನಾಲ್ವಡಿ ಕೃಷ್ಣರಾಜ ಒಡೆಯರ್  ಅವರ ಬಿಟ್ಟರೆ ಮೈಸೂರಿಗೆ ಸಾಕಷ್ಟು ಕೊಡುಗೆ ಕೊಟ್ಟಿರುವುದು ಸಿದ್ದರಾಮಯ್ಯನವರೆ ಆದರಲ್ಲಿ ತಪ್ಪೇನಿದೆ. ಮೈಸೂರಿಗೆ ಬಿಜೆಪಿಯವರ ಕೊಡುಗೆ ಏನು.? ಅವರು ನಮ್ಮ ಬಗ್ಗೆ ಮಾತನಾಡಲಿಕ್ಕೆ ಏನು ನೈತಿಕತೆ ಇದೆ ಅವರಿಗೆ. ನಾಲ್ವಡಿ ಕೃಷ್ಣರಾಜರ ನಂತರ ಮೈಸೂರಿಗೆ ಹಲವಾರು ಕೊಡುಗೆಗಳನ್ನು ಸಿದ್ದರಾಮಯ್ಯ ಕೊಟ್ಟಿದ್ದಾರೆ. ಬಿಜೆಪಿಯವರಿಗೆ ಬೇರೆ ಏನು ಕೆಲಸ ಇಲ್ಲ ಅಂತ ಈ ರೀತಿ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದರು.vtu

Key words: Mysore, Nalvadi krishnaraj wodeyar, Siddaramaiah, H.Vishwanath

The post ನಾಲ್ವಡಿಗೆ ಸಿದ್ದು ಹೊಲಿಕೆ: ಹರೀಶ್ ಗೌಡ ಸಮರ್ಥನೆ, ಎಚ್ವಿ ಟೀಕೆ..! appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸರ್ಕಾರಿ ವೈದ್ಯರು ಮುಷ್ಕರ ಮಾಡಲ್ಲ ಎಂಬ ವಿಶ್ವಾಸವಿದೆ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು,ಮಾರ್ಚ್,5,2026 (www.justkannada.in): ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ವೈದ್ಯರಯ ಮಾರ್ಚ್...

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಬೆಂಗಳೂರು, ಮಾರ್ಚ್​, 5,2026 (www.justkannada.in):  ಬೆಳ್ಳಂಬೆಳಿಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್...

ಫೋನ್ ಕದ್ದಾಲಿಕೆ ಅವಶ್ಯಕತೆ ಏನಿದೆ? ಸಚಿವ ರಾಮಲಿಂಗರೆಡ್ಡಿ

ರಾಮನಗರ,ಮಾರ್ಚ್,4,2026 (www.justkannada.in): ಕಾಂಗ್ರೆಸ್ ಸರ್ಕಾರದಲ್ಲಿ ಫೋನ್ ಕದ್ದಾಲಿಕೆ ಇದೆ ಎಂದು ಕೇಂದ್ರ...

ಕೆಪಿಸಿಸಿಗೆ ಹೊಸ ನಾಯಕತ್ವ: ಡಿಕೆಶಿ ಹೇಳಿರೋದು ಸರಿಯಾಗಿದೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು, ಮಾರ್ಚ್,4,2026 (www.justkannada.in): ಕೆಪಿಸಿಸಿಗೆ ಹೊಸ ನಾಯಕತ್ವ ಬೇಕು ಎಂಬ ಡಿಸಿಎಂ...