25
August, 2026

A News 365Times Venture

25
Tuesday
August, 2026

A News 365Times Venture

ನಾವು ಬಡವರ ಪರ, ಬಿಜೆಪಿ ಶ್ರೀಮಂತರ ಪರ: ನಾವು ಕೊಟ್ಟ ಗ್ಯಾರಂಟಿ ಭರವಸೆ ಯಶಸ್ವಿಯಾಗಿ ಜಾರಿ-ರಾಹುಲ್ ಗಾಂಧಿ

Date:

ಹೊಸಪೇಟೆ,ಮೇ,20,2025 (www.justkannada.in):   ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ 2 ವರ್ಷ ಪೂರೈಸಿದ್ದು, ಚುನಾವಣಾ ಪೂರ್ವದಲ್ಲಿ ನಾವು ಕೊಟ್ಟ ಗ್ಯಾರಂಟಿ ಯೋಜನೆಗೆ ಜಾರಿಗೊಳಿಸುವ ಆಶ್ವಾಸನೆಯನ್ನ ಈಡೇರಿಸಿದ್ದೇವೆ ಎಂದು  ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸಂತಸ ವ್ಯಕ್ತಪಡಿಸಿದರು.

ಇಂದು ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ನಡೆದ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ರಾಹುಲ್ ಗಾಂಧಿ,  ಚುನಾವಣಾ ಪೂರ್ವದಲ್ಲಿ ನೀಡಿದ್ದ ಆಶ್ವಾಸನೆ ಈಡೇರಿಸಿದ್ದೇವೆ. ಗ್ಯಾರಂಟಿ ತರಲು ಆಗಲ್ಲ ಎಂದು ಪ್ರಧಾನಿ ಟೀಕಿಸಿದ್ದರು. ಬಿಜೆಪಿ ಟೀಕಿಸಿತ್ತು. ಆದರೆ ಕೊಟ್ಟ ಎಲ್ಲಾ ಭರವಸೆಯನ್ನ ಈಡೇರಿಸಿದ್ದೇವೆ ಎಂದರು.

1 ಕೋಟಿಗೂ ಹೆಚ್ಚು ಮಹಿಳೆಯರಿಗೆ 2 ಸಾವಿರ ಕೊಡುತ್ತಿದ್ದೇವೆ.  ಎಲ್ಲಾ ಮನೆಗಳಿಗೂ ಉಚಿತ ವಿದ್ಯುತ್ ಕೊಡುತ್ತಿದ್ದೇವೆ. ಬಡ ಕುಟುಂಬಗಳ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗುತ್ತಿದೆ.  ಕರ್ನಾಟಕ ಮಹಿಳೆಯರು ಫ್ರಿಯಾಗಿ ಬಸ್ ನಲ್ಲಿ ಓಡಾಡುತ್ತಿದ್ದಾರೆ. ನಾವು ನೀಡಿದ್ದ 5 ಗ್ಯಾರಂಟಿ ಯೋಜನೆಗಳನ್ನ ಯಶಸ್ವಿಯಾಗಿ ಜಾರಿಗಿಳಿಸಿದ್ದೇವೆ ಎಂದರು.

ಬಿಜೆಪಿಯವರು ಎರಡರಿಂದ ಮೂರು ಕೋಟಾದ್ಯಿಪತಿಗಳ ಪರ ನಿಂತಿದ್ದಾರೆ. ನಿಮ್ಮ ತೆರಿಗೆ ಹಣ ನಿಮ್ಮ ಸೌಕರ್ಯಕ್ಕೆ ಬಳಕೆಯಾಗಬೇಕು ಅನ್ನೋದು ನಮ್ಮ ಉದ್ದೇಶ . ಹಣ ಬಡವರ ಕಷ್ಟಗಳಿಗೆ ಅಗಬೇಕು ಅನ್ನದು ನಮ್ಮ ಉದ್ದೇಶ. ಆದರೆ  ಕೆಲ ಉದ್ಯಮಿಗಳಿಗೆ ಕೊಡುವುದು ಬಿಜೆಪಿಯವರ ಉದ್ದೇಶ. ಕೋಟ್ಯಾಧಿಪತಿಗಳು ಹೊರ ದೇಶಗಳಲ್ಲಿ ಆಸ್ತಿ ಖರೀದಿಸಿದ್ದಾರೆ. ಹೀಗಾಗಿ  ಕಾಂಗ್ರೆಸ್ ಬಡವರ ಪರ,  ಬಿಜೆಪಿ ಯಾವತ್ತೂ ಶ್ರೀಮಂತರ ಪರ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು.

Key words: congress, successfully, fulfilled ,guarantee, promise, Rahul Gandhi

The post ನಾವು ಬಡವರ ಪರ, ಬಿಜೆಪಿ ಶ್ರೀಮಂತರ ಪರ: ನಾವು ಕೊಟ್ಟ ಗ್ಯಾರಂಟಿ ಭರವಸೆ ಯಶಸ್ವಿಯಾಗಿ ಜಾರಿ-ರಾಹುಲ್ ಗಾಂಧಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯ ಮುಖ್ಯ ಶಿಕ್ಷಕಿ ಆಯ್ಕೆ: ಸಚಿವರಿಂದ ಅಭಿನಂದನೆ

ಶಿವಮೊಗ್ಗ,ಆಗಸ್ಟ್,22,2026 (www.justkannada.in): ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ (National Teachers Award-2026) ಯನ್ನು...

ಶಿವಮೊಗ್ಗ: KPS ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಸಚಿವ ಮಧು ಬಂಗಾರಪ್ಪ ಶಂಕುಸ್ಥಾಪನೆ

ಶಿವಮೊಗ್ಗ, ಆಗಸ್ಟ್,22,2026 (www.justkannada.in):  ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ರಾಜ್ಯ...

ಕುಂಟು ನೆಪವಿಟ್ಟುಕೊಂಡು ಸದನ ನಡೆಸಲು ಬಿಡುತ್ತಿಲ್ಲ: ಸ್ಪಷ್ಟ ಆರೋಪಗಳಿದ್ದರೆ ಸಾಕ್ಷಿ ಮೂಲಕ ಹೇಳಲಿ- ದಿನೇಶ್ ಗುಂಡೂರಾವ್

 ಬೆಂಗಳೂರು,ಆಗಸ್ಟ್,22,2026 (www.justkannada.in): ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ...

ವಿದ್ಯುತ್ ತಂತಿಯ ಮೇಲೆ ನೇತಾಡುತ್ತಿರುವ ಅಪಾಯಕಾರಿ ಕೊಂಬೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಮೈಸೂರು, ಆಗಸ್ಟ್,24,2026 (www.justkannada.in):  ಮೈಸೂರಿನ ಚಾಮರಾಜಪುರಂ ಬಜ್ಜಣ್ಣ ಲೇನ್‌ನ ಕೊಪ್ಪಲು ಮಾರಮ್ಮ...