8
March, 2026

A News 365Times Venture

8
Sunday
March, 2026

A News 365Times Venture

ನೇಪಾಳದಲ್ಲಿ ಏ.22 ರಂದು ಮಾಳವಿ ಮಂಜುನಾಥ್ ಅವರಿಂದ ಪಿಟೀಲು ವಾದನ

Date:

ಮೈಸೂರು,ಏಪ್ರಿಲ್,19,2025 (www.justkannada.in): ಅಂತಾರಾಷ್ಟ್ರೀಯ ಖ್ಯಾತಿಯ ಪಿಟೀಲು ವಾದಕ ಡಾ. ಮೈಸೂರು ಮಂಜುನಾಥ್ ಅವರ ಪುತ್ರಿ,  ಉದಯೋನ್ಮುಖ ಪಿಟೀಲು ವಾದಕಿ ಮಾಳವಿ ಮಂಜುನಾಥ್ ಅವರ ಪಿಟೀಲು ವಾದನ ಕಾರ್ಯಕ್ರಮವು  ನೇಪಾಳದ ಕಠ್ಮಂಡುವಿನಲ್ಲಿರುವ ತ್ರಿಭುವನ ವಿಶ್ವವಿದ್ಯಾನಿಲಯದ ಕ್ಯಾಂಪಸ್ ನಲ್ಲಿ ಏಪ್ರಿಲ್ 22 ರಂದು ನಡೆಯಲಿದೆ.

ತ್ರಿಭುವನ ವಿಶ್ವವಿದ್ಯಾನಿಲಯದ ಆಹ್ವಾನದ ಮೇರೆಗೆ ಮಾಳವಿ ಮಂಜುನಾಥ್ ಅವರು ಈ ಕಾರ್ಯಕ್ರಮ ನಡೆಸಿಕೊಡುವರು. ನೇಪಾಳದಲ್ಲಿ ಅವರು ಅತುಲ್ ಸ್ಮೃತಿ ಗುರುಕುಲ ಅಕಾಡೆಮಿ ಆಹ್ವಾನದ ಮೇರೆಗೆ ಪೋಖಾರದಲ್ಲಿಯೂ ಪಿಟೀಲು ವಾದನ ಕಛೇರಿಯನ್ನು ನಡೆಸಿಕೊಡುವರು.

ಮಾಳವಿ ಮಂಜುನಾಥ್ ಅವರು ಕಳೆದ ಜನವರಿಯಲ್ಲಿ ಶ್ರೀಲಂಕಾದ ಭಾರತೀಯ ರಾಯಭಾರಿ ಕಚೇರಿಯ ಆಹ್ವಾನದ ಮೇರೆಗೆ ಪ್ರತಿಷ್ಠಿತ ಜಾಫ್ನಾ ಸಾಂಸ್ಕೃತಿಕ ಕೇಂದ್ರ, ಬಟ್ಟಿಕಲೋವಾದ ಈಸ್ಟ್ರನ್ ವಿಶ್ವವಿದ್ಯಾನಿಲಯದಲ್ಲಿ ಪಿಟೀಲು ವಾದನ ಕಛೇರಿಯನ್ನು ನಡೆಸಿಕೊಟ್ಟಿದ್ದಾರೆ.

ಮಾಳವಿ ಮಂಜುನಾಥ್  ಅವರು ಬಾಲ್ಯದಿಂದಲೇ  ಕರ್ನಾಟಕ ಸಂಗೀತವನ್ನು ಕಲಿತವರು. ಮಾಳವಿ ಅವರು ತಮ್ಮ ತಾತ ವಿದ್ವಾನ್ ಎಸ್.ಮಹದೇವಪ್ಪ ಮತ್ತು ತಂದೆ ಡಾ.ಮೈಸೂರು ಮಂಜುನಾಥ್ ಅವರಿಂದ ತರಬೇತಿ ಪಡೆದವರು. ಮಾಳವಿ ಅವರು ಕರ್ನಾಟಕ ಹಾಗೂ ದೇಶದ ಇತರ ಭಾಗಗಳಲ್ಲಿ ಈಗಾಗಲೇ ಪಿಟೀಲು ವಾದನದ ಕಛೇರಿಯನ್ನು ನಡೆಸಿಕೊಟ್ಟಿದ್ದಾರೆ.

ಮಾಳವಿ ಮಂಜುನಾಥ್ ಅವರು ಮೈಸೂರಿನ ವಿಜಯವಿಠ್ಠಲ ಶಾಲೆಯಲ್ಲಿ ಓದಿದವರು. ಅವರು ಅನೇಕ ಪ್ರಶಸ್ತಿಗಳ ಪುರಸ್ಕೃತರು.

Key words: Violin, performance, Malavi Manjunath, 22nd April, Nepal

The post ನೇಪಾಳದಲ್ಲಿ ಏ.22 ರಂದು ಮಾಳವಿ ಮಂಜುನಾಥ್ ಅವರಿಂದ ಪಿಟೀಲು ವಾದನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

MDA ವಿಶೇಷ ತಹಶೀಲ್ದಾರ್ ವಿರುದ್ಧ ಶಿಸ್ತು ಕ್ರಮ: ಸರ್ಕಾರದಿಂದ ಮತ್ತೆ ಸೂಚನೆ

  ಮೈಸೂರು, ಮಾ.೦೮,೨೦೨೬ : ಅಧಿಕಾರ ದುರುಪಯೋಗದ ಆರೋಪ ಎದುರಿಸುತ್ತಿರುವ ಮೈಸೂರು ಅಭಿವೃದ್ಧಿ...

ಸಾಲ ಮಾಡದೆ ಅಭಿವೃದ್ಧಿ ಆಗಲ್ಲ; ಸಿಎಂ ಸಿದ್ದರಾಮಯ್ಯ

ಮೈಸೂರು,ಮಾರ್ಚ್,7,2026 (www.justkannada.in):  ಸಾಲದ ಬಗ್ಗೆ ಬಿಜೆಪಿಯವರು ಟೀಕೆ ಹಿನ್ನೆಲೆಯಲ್ಲಿ ಈ ಕುರಿತು...

ಕೇಂದ್ರದ ಅನ್ಯಾಯದಿಂದ ಇಷ್ಟೊಂದು ಸಾಲದ ಹೊರೆ : ಬಿಜೆಪಿ ಟೀಕೆ ಶೋಭೆ ತರಲ್ಲ- ಸಚಿವ ಪ್ರಿಯಾಂಕ್ ಖರ್ಗೆ

ಬೀದರ್,ಮಾರ್ಚ್,7,2026 (www.justkannada.in):  ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ. ಹೀಗಾಗಿ ಇಷ್ಟೊಂದು...

ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆ ಮುಚ್ಚಲ್ಲ- MLC ಯತೀಂದ್ರ ಸಿದ್ದರಾಮಯ್ಯ

ಮೈಸೂರು,ಮಾರ್ಚ್,7,2026 (www.justkannada.in): ಟಿ.ನರಸೀಪುರದಲ್ಲಿ ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆ ಮುಚ್ಚುವುದಿಲ್ಲ...