30
July, 2025

A News 365Times Venture

30
Wednesday
July, 2025

A News 365Times Venture

ಪಕ್ಷದಲ್ಲಿ ಯಾವುದೇ ಒತ್ತಡ ಇಲ್ಲ: ದೂರು ಕೊಡೊದು ಅವರಿಗೆ ಬಿಟ್ಟ ವಿಚಾರ- ಸಚಿವ ಎಂ.ಬಿ ಪಾಟೀಲ್

Date:

ಜಯಪುರ,ಮಾರ್ಚ್,31,2025 (www.justkannada.in): ಹನಿಟ್ರಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ಕೊಡೊದು ಸಚಿವ ಕೆ.ಎನ್ ರಾಜಣ್ಣ ಅವರಿಗೆ ಬಿಟ್ಟ ವಿಚಾರ. ಪಕ್ಷದಲ್ಲಿ ಯಾವುದೆ ಒತ್ತಡ ಇಲ್ಲ. ಯಾಕೆ ಏನು ಅನ್ನೋದನ್ನ ರಾಜಣ್ಣರಿಗೆ ಕೇಳಬೇಕು ಎಂದ ಕೈಗಾರಿಕಾ ಸಚಿವ ಎಂ. ಬಿ ಪಾಟೀಲ್ ತಿಳಿಸಿದರು.

ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಎಂ.ಬಿ ಪಾಟೀಲ್,  ರಾಜಣ್ಣ ಪುತ್ರನ ಹತ್ಯೆಗೆ ಸುಪಾರಿ ವಿಚಾರ, ಗೃಹ ಸಚಿವರು, ಪೊಲೀಸರು ಇದ್ದಾರೆ. ಪ್ರಕರಣ ಬಯಲಿಗೆ ಎಳೆಯುತ್ತಾರೆ ಎಂದರು.

ಸಂಪುಟ ಪುನರ್ ರಚನೆ, ಸಿಎಂ ನಿರಾಸಕ್ತಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಎಂ.ಬಿ ಪಾಟೀಲ್, ಅದನ್ನ ಡಿಸಿಎಂ, ಸಿಎಂ ಗೆ ಕೇಳಬೇಕು. ಯಾರು ಆಸಕ್ತಿ ಹೊಂದಿದ್ದಾರೋ, ಯಾರು ಹೊಂದಿಲ್ಲವೊ ಅವರನ್ನೆ ಕೇಳಬೇಕು ಎಂದರು

ಕೆಪಿಸಿಸಿ ರಾಜ್ಯಾಧ್ಯಕ್ಷರ ಸ್ಥಾನ ಬದಲಾವಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಎಂಬಿ ಪಾಟೀಲ್, ಹೈಕಮಾಂಡ್ ನಿರ್ಧಾರ ಮಾಡುತ್ತೆ.  ಇದು ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು. ನಾವು ಮಾತನಾಡುವುದರಲ್ಲಿ ಅರ್ಥ ಇಲ್ಲ. ಎಲ್ಲರೂ ದೆಹಲಿ ಹೋಗ್ತಾರೆ, ಪಕ್ಷದ ವರಿಷ್ಠರನ್ನ ಭೇಟಿ ಮಾಡಲು ಹೋಗ್ತಾರೆ. ಹೈಕಮಾಂಡ್ ಭೇಟಿ ಮಾಡಿ ಮಾತನೋಡೋದು ಇರುತ್ತೆ. ಹೇಳೋದು ಕೇಳೋದು ಇರುತ್ತೆ. ಅಭಿಪ್ರಾಯ, ಸಲಹೆ ಪಡೆಯೋದು ಇರುತ್ತೆ ಎಂದು ತಿಳಿಸಿದರು.

ವಿಜಯಪುರ ನಗರ ಶಾಸಕ ಬಸನಗೌಡಾ ಪಾಟೀಲ್ ಯತ್ನಾಳ್ ಹೊಸ ಪಕ್ಷ ಕಟ್ಟುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಎಂ.ಬಿ ಪಾಟೀಲ್, ಅದು ಅವರ ವಿಚಾರ, ಅದಕ್ಕೆ ನಾನು ಏನು ಹೇಳಲ್ಲ. ಅವರು ನಮ್ಮ ಪಕ್ಷಕ್ಕೆ ಯಾವುದೇ ಅರ್ಜಿ ಹಾಕಿಲ್ಲ.ಹಾಕಿದರೂ ಕೂಡ ನಮ್ಮಲ್ಲಿ ಅವರನ್ನು ಸೇರಿಸಿಕೊಳ್ಳಲು ಕಷ್ಟ ಇದೆ. ಅವರು ಒಂದು ಸಮಾಜದ (ಮುಸ್ಲಿಂ) ವಿರುದ್ದ ಬಹಳಷ್ಟು ಮಾತನಾಡಿದ್ದಾರೆ. ಕಾರಣ ನಮ್ಮಲ್ಲಿ  ಅವರು ಬರುವುದು ಕಷ್ಟ ಇದೆ. ಇದಾಗ್ಯೂ ನಮ್ಮಲ್ಲಿ ಅವರನ್ನು ತೆಗೆದುಕೊಳ್ಳುವದು ಹೈ ಕಮಾಂಡ್ ನಿರ್ಧಾರ ಮಾಡಬೇಕಾಗುತ್ತದೆ. ಈ ಸಂದರ್ಭದಲ್ಲಿ ಅದು ಅ ಪ್ರಸ್ತುತ, ಅವರು ಬರತಾರೆ ಹೋಗತಾರೆ ಎಂಬುದು ಸರಿಯಲ್ಲ ಎಂದು ಸಚಿವ ಎಂ ಬಿ ಪಾಟೀಲ್ ತಿಳಿಸಿದರು.

Key words: no pressure, party, file a complaint , Minister, M.B. Patil

The post ಪಕ್ಷದಲ್ಲಿ ಯಾವುದೇ ಒತ್ತಡ ಇಲ್ಲ: ದೂರು ಕೊಡೊದು ಅವರಿಗೆ ಬಿಟ್ಟ ವಿಚಾರ- ಸಚಿವ ಎಂ.ಬಿ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿಎಂ ಸಿದ್ದರಾಮಯ್ಯಗೆ ಶಕ್ತಿ ಪ್ರದರ್ಶನ ಮಾಡುವ ಅವಶ್ಯಕತೆ ಇಲ್ಲ- ಸಚಿವ ದಿನೇಶ್ ಗುಂಡೂರಾವ್‍

ಕಾರವಾರ,ಜುಲೈ,30,2025 (www.justkannada.in): ಸಿಎಂ ಸಿದ್ದರಾಮಯ್ಯಗೆ ಶಕ್ತಿ ಪ್ರದರ್ಶನ ಮಾಡುವ ಅವಶ್ಯಕತೆ ಇಲ್ಲ...

ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಆರೋಪ: ಯಾವುದೇ ಸಾಕ್ಷಿ ನೀಡಿಲ್ಲ- ಸಚಿವ ಚಲುವರಾಯಸ್ವಾಮಿ

ಬೆಂಗಳೂರು,ಜುಲೈ,30,2025 (www.justkannada.in):  ರಸಗೊಬ್ಬರವನ್ನ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ವಿಪಕ್ಷದವರು ಆರೋಪ...

ಡ್ರಗ್ಸ್ ಮಾಫಿಯಾ ವಿರುದ್ದ ಕಾರ್ಯಾಚರಣೆ: ಖುದ್ದು ಫೀ‍ಲ್ಡ್ ಗಿಳಿದು ತಪಾಸಣೆ ನಡೆಸಿದ ಪೊಲೀಸ್ ಕಮಿಷನರ್

ಮೈಸೂರು,ಜುಲೈ,30,2025 (www.justkannada.in):  ಮೈಸೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ದ ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು...

ರಾಜ್ಯದಲ್ಲಿ ರಸಗೊಬ್ಬರ ಕೊರತೆ: ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ ಡಾ.ಕೆ. ಸುಧಾಕರ್

ನವದೆಹಲಿ,ಜುಲೈ,30,2025 (www.justkannada.in): ರಾಜ್ಯದಲ್ಲಿ ರಸಗೊಬ್ಬರದ ಕೊರತೆಯುಂಟಾಗಿದ್ದು ರೈತರು ಪರದಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ...