21
February, 2026

A News 365Times Venture

21
Saturday
February, 2026

A News 365Times Venture

ಪ್ರತಿಯೊಬ್ಬರ ಜೀವನದಲ್ಲೂ ವೃತ್ತಿ ಮತ್ತು ಪ್ರವೃತ್ತಿ  ಕೂಡ ಬಹಳ ಮುಖ್ಯ- ಪಂಡಿತ್ ವೆಂಕಟೇಶ್ ಕುಮಾರ್

Date:

ಮೈಸೂರು,ಫೆಬ್ರವರಿ,20,2026 (www.justkannada.in): ಪ್ರತಿಯೊಬ್ಬರ ಜೀವನದಲ್ಲೂ ವೃತ್ತಿ ಮತ್ತು ಪ್ರವೃತ್ತಿ  ಕೂಡ ಬಹಳ ಮುಖ್ಯ ಎಂದು ಪದ್ಮಶ್ರೀ ಪುರಸ್ಕೃತ ಹಿಂದುಸ್ತಾನಿ ಶಾಸ್ತ್ರೀಯ ಗಾಯಕ ಪಂಡಿತ್ ವೆಂಕಟೇಶ್ ಕುಮಾರ್ ಅವರು ಅಭಿಪ್ರಾಯಪಟ್ಟರು.

ಫೆಬ್ರವರಿ 16ರಿಂದ 20ರವರೆಗೆ ಮೈಸೂರು ನಗರದ ಅಂಚೆ ತರಬೇತಿ ಕೇಂದ ಹಾಗೂ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಆವರಣದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ ಸಾಂಸ್ಕೃತಿಕ ಸಮಾವೇಶದಲ್ಲಿ ದೇಶದಾದ್ಯಂತದ 21 ಅಂಚೆ ವಲಯಗಳ ಪ್ರತಿನಿಧಿಗಳಾಗಿ 293 ಸ್ಪರ್ಧಿಗಳು (ಅಂಚೆ ಇಲಾಖೆ ಉದ್ಯೋಗಿಗಳು ಹಾಗೂ ಅವರ ಮಕ್ಕಳು) ಭಾಗವಹಿಸಿದರು.

38ನೇ ಅಖಿಲ ಭಾರತ ಅಂಚೆ ಸಾಂಸ್ಕೃತಿಕ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಪಂಡಿತ್ ವೆಂಕಟೇಶ್ ಕುಮಾರ್ ಅವರು,  ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ  ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ತುಂಬಾ ಅರ್ಥಗರ್ಭಿತ. ಅಂಚೆ ಇಲಾಖೆ ಪ್ರಾಮಾಣಿಕತೆಗೆ ಹೆಸರಾದ ಇಲಾಖೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕರ್ನಾಟಕ ಅಂಚೆ ವೃತ್ತದ ಪೋಸ್ಟ್ ಮಾಸ್ಟರ್ ಜನರಲ್ ಕೆ. ಪ್ರಕಾಶ್, ಡಿಜಿಟಲಿಕರಣದ ಇಂದಿನ ಯುಗದಲ್ಲಿ ಒತ್ತಡಕೊಳ್ಳಗಾದಾಗ ಸಂಗೀತ ನೆಮ್ಮದಿಯನ್ನು ತರುತ್ತದೆ. ಎಂದು ಹೇಳಿದರು.

ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು.

ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳ ಫಲಿತಾಂಶವು ಒಟ್ಟು ಪ್ರದರ್ಶನದ ಆಧಾರದ ಮೇಲೆ ಈ ಕೆಳಗಿನಂತಿದೆ:

ಕೇರಳ ಅಂಚೆ ವಲಯವು 108  ಅಂಕಗಳೊಂದಿಗೆ ಒಟ್ಟು 22 ಬಹುಮಾನಗಳನ್ನು ಗಳಿಸಿ                             ( 17 ಪ್ರಥಮ, 4 ದ್ವಿತೀಯ ಹಾಗೂ 1 ತೃತೀಯ ಬಹುಮಾನಗಳೊಂದಿಗೆ ಚಾಂಪಿಯನ್ ಶಿಪ್ ಸ್ಥಾನವನ್ನು ಪಡೆಯಿತು.

ಕರ್ನಾಟಕ ಅಂಚೆ ವಲಯವು 105 ಅಂಕಗಳೊಂದಿಗೆ ಒಟ್ಟು 34 ಬಹುಮಾನಗಳನ್ನ (16 ಪ್ರಥಮ, 14 ದ್ವಿತೀಯ ಹಾಗೂ 4 ತೃತೀಯ ಬಹುಮಾನಗಳು) ಪಡೆದು ರನ್ನರ್‌ ಅಪ್ ಸ್ಥಾನವನ್ನು ಪಡೆಯಿತು. ಒಡಿಶಾ ಅಂಚೆ ವಲಯವು 38 ಅಂಕಗಳೊಂದಿಗೆ ಒಟ್ಟು 11 ಬಹುಮಾನಗಳನ್ನು  ಗೆದ್ದು ತೃತೀಯ ಸ್ಥಾನವನ್ನು ಪಡೆದಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ಅಂಚೆ ವೃತ್ತದ ಸ್ಥಾನಿಕ ನಿರ್ದೇಶಕ ಸಂದೇಶ್ ಮಹದೇವಪ್ಪ. ಬೆಂಗಳೂರು ಕೇಂದ್ರ ಅಂಚೆ ವಲಯದ ನಿರ್ದೇಶಕರಾದ  ವಿ. ತಾರ, ಉತ್ತರ ಕರ್ನಾಟಕ ಅಂಚೆ ವಲಯದ ನಿರ್ದೇಶಕರಾದ ಹರ್ಷ ಮತ್ತು ಮೈಸೂರು ಅಂಚೆ ತರಬೇತಿ ಕೇಂದ್ರದ ನಿರ್ದೇಶಕ ಡಾ. ಆಶಿಶ್ ಸಿಂಗ್ ಠಾಕೂರ್ ಹಾಜರಿದ್ದರು.

Key words: 38th, All India, Postal, Cultural Conference, Pandit Venkatesh Kumar

The post ಪ್ರತಿಯೊಬ್ಬರ ಜೀವನದಲ್ಲೂ ವೃತ್ತಿ ಮತ್ತು ಪ್ರವೃತ್ತಿ  ಕೂಡ ಬಹಳ ಮುಖ್ಯ- ಪಂಡಿತ್ ವೆಂಕಟೇಶ್ ಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಬಿಜೆಪಿ ಶಾಸಕ

ಗದಗ,ಫೆಬ್ರವರಿ,21,2026 (www.justkannadda.in):  ಸಣ್ಣನೀರಾವರಿ ಇಲಾಖೆ ಕಾಮಗಾರಿ ಗುತ್ತಿಗೆ ನೀಡಲು 5 ಲಕ್ಷ...

ಖರ್ಗೆ ಅವರಿಂದ ಆದಷ್ಟು ಬೇಗ ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸುವ ಭರವಸೆ- ಸಚಿವ ಸತೀಶ್ ಜಾರಕಿಹೊಳಿ

ನವದೆಹಲಿ,ಫೆಬ್ರವರಿ,21,2026 (www.justkannada.in): ರಾಜ್ಯದಲ್ಲಿ ಉಂಟಾಗಿರುವ ನಾಯಕತ್ವ ಬದಲಾವಣೆ ಗೊಂದಲ ವಿಚಾರವನ್ನು ಆದಷ್ಟು...

ಜಾತಿಧರ್ಮಗಳನ್ನು ಮೀರಿ ಮಾನವೀಯತೆಯಿಂದ ಸೇವೆ ಸಲ್ಲಿಸಿ- ಸಿಎಂ ಸಿದ್ದರಾಮಯ್ಯ ಕಿವಿಮಾತು

ಬೆಂಗಳೂರು, ಫೆಬ್ರವರಿ ,21,2026 (www.justkannada.in):  ವೈದ್ಯಕೇತರ ಸಿಬ್ಬಂದಿಗಳೂ ವೈದ್ಯರಷ್ಟೇ ಪ್ರಮುಖರು. ಆರೋಗ್ಯ...

ತುರಗನೂರು ವಿಸ್ತರಣೆ ಶಾಖಾ ನಾಲೆಗಳ ಅಭಿವೃದ್ಧಿಯಿಂದ 1800 ಎಕರೆಗೆ ನೀರು: ಸಚಿವ ಡಾ: ಹೆಚ್.ಸಿ ಮಹದೇವಪ್ಪ

ಮೈಸೂರು,ಫೆಬ್ರವರಿ,21,2026 (www.justkannada.in):  ತುರಗನೂರು ಶಾಖಾ ನಾಲೆಯು ವಿಶ್ವೇಶ್ವರಯ್ಯ ನಾಲೆಯ ಅಂತಿಮ‌ ನೆಲೆಯಾಗಿದ್ದು,...