13
February, 2026

A News 365Times Venture

13
Friday
February, 2026

A News 365Times Venture

ಪ್ರಶ್ನಿಸಲು ಪ್ರೇರೇಪಿಸುವ ರಂಗಭೂಮಿಯನ್ನು ಉಳಿಸೋಣ: ಜಿ ಎನ್ ಮೋಹನ್

Date:

 

ಬೆಂಗಳೂರು, ಫೆ.೦೨,೨೦೨೬: ರಂಗಭೂಮಿ ಹಾಗೂ ಸಾಹಿತ್ಯ ಸದಾ ಪ್ರಶ್ನೆ ಮಾಡಲು ಪ್ರೇರೇಪಿಸುತ್ತದೆ. ಸ್ಥಗಿತಗೊಂಡ ಸಮಾಜವನ್ನು ಎಚ್ಚರಗೊಳಿಸುವ ಕೆಲಸ ನಿರಂತರವಾಗಿರಲಿ ಎಂದು ಸಾಹಿತಿ, ಪತ್ರಕರ್ತ ಜಿ ಎನ್ ಮೋಹನ್ ಅಭಿಪ್ರಾಯಪಟ್ಟರು.

ಕರ್ನಾಟಕ ನಾಟಕ ಅಕಾಡೆಮಿ, ಕರ್ನಾಟಕ ಸಾಹಿತ್ಯ ಅಕಾಡೆಮಿ, ರಾಷ್ಟ್ರೀಯ ರಂಗಶಾಲೆ ಹಮ್ಮಿಕೊಂಡಿದ್ದ ರಂಗ ಪರಿಷೆಯಲ್ಲಿ ಅವರು ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪುಸ್ತಕಗಳನ್ನು ದ್ವೇಷಿಸುವ ನಾಜಿ ಕಾಲವಿತ್ತು. ಈಗ ದೇಶದೆಲ್ಲೆಡೆ ಅಂತಹದೇ ವಾತಾವರಣವನ್ನು ಸೃಷ್ಟಿಸಿ, ಪುಸ್ತಕ ದ್ವೇಷವನ್ನು ಹರಡಲಾಗುತ್ತಿದೆ. ಪ್ರಶ್ನೆ ಮಾಡುವ ಮನಸ್ಸನ್ನು ಮುರುಟಿ ಹಾಕುವ ಯತ್ನ ನಡೆಯುತ್ತಿದೆ. ಇದರ ವಿರುದ್ಧ ಜಾಗೃತಿ ಸದಾ ಅಗತ್ಯ ಎಂದರು.

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಎಲ್ ಎನ್ ಮುಕುಂದರಾಜ್ ಅವರು ಮಾತನಾಡಿ ರಂಗಭೂಮಿ ಹಾಗೂ ಸಾಹಿತ್ಯವನ್ನು ಬೇರ್ಪಡಿಸಿ ನೋಡಲು ಸಾಧ್ಯವಿಲ್ಲ. ಎರಡೂ ಸಹಾ ಗಂಡಬೇರುಂಡದಂತೆ ಎಂದರು.

ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷರಾದ ನಾಗರಾಜ ಮೂರ್ತಿ ಅವರು ಮಾತನಾಡಿ ಮಾನವೀಯ ಸಮಾಜವನ್ನು ಸೃಷ್ಟಿಸುವುದು ಇಂದಿನ ಅಗತ್ಯ. ಮನಸ್ಸನ್ನು ಕಲುಷಿತಗೊಳಿಸುತ್ತಿರುವ ಕಾಲದ ಬಗ್ಗೆ ಎಚ್ಚರ ಇರಲಿ ಎಂದರು.

ಕಾವ್ಯ ಪರಿಷೆ ಮುಖ್ಯಸ್ಥರಾದ ಮಲ್ಲಿಕಾರ್ಜುನ ಮಹಾಮನೆ, ಕವಿ ಅಂಕಣಕಾರ ಬಿ ಎನ್ ಮಲ್ಲೇಶ್, ಅಕಾಡೆಮಿ ಸದಸ್ಯರುಗಳಾದ ಮಮತಾ ಅರಸೀಕೆರೆ, ರವಿಕುಮಾರ್ ಭಾಗಿ ಉಪಸ್ತಿತರಿದ್ದರು.

key words: Let’s save the, theatre, that inspires questioning, G N Mohan, bangalore

The post ಪ್ರಶ್ನಿಸಲು ಪ್ರೇರೇಪಿಸುವ ರಂಗಭೂಮಿಯನ್ನು ಉಳಿಸೋಣ: ಜಿ ಎನ್ ಮೋಹನ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸರ್ಕಾರ ಹೋದ್ರೂ ತೊಂದರೆ ಇಲ್ಲ: ಡಿಕೆಶಿ ಶತಾಯಗತಾಯ ಸಿಎಂ ಆಗಲು ಹೊರಟಿದ್ದಾರೆ- ಶಾಸಕ ಯತ್ನಾಳ್

ಉಡುಪಿ.ಫೆಬ್ರವರಿ,13,2026 (www.justkannada.in): ಸರ್ಕಾರ ಹೋದರೂ ತೊಂದರೆ ಇಲ್ಲ ಡಿಕೆ ಶಿವಕುಮಾರ್  ಶತಾಯಗತಾಯ...

ಸಿಎಂ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ, ನಾನು ಮಾತನಾಡಲ್ಲ- ಸಚಿವ ರಾಮಲಿಂಗರೆಡ್ಡಿ

ಬೀದರ್,ಫೆಬ್ರವರಿ,13,2026 (www.justkannada.in): ಸಿಎಂ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ. ಈ ಬಗ್ಗೆ...

ಹೃದಯಾಘಾತದಿಂದ ಹಿರಿಯ ನಿರ್ದೇಶಕ ಜೋ ಸೈಮನ್ ನಿಧನ

ಬೆಂಗಳೂರು,ಫೆಬ್ರವರಿ,13,2026 (www.justkannada.in): ಹಿರಿಯ ನಿರ್ದೇಶ ಜೋ ಸೈಮನ್ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂಬ...

ಸರ್ಕಾರಕ್ಕೆ 1 ಸಾವಿರ ದಿನ: ನಾಳೆ ಸಾರ್ಥಕ ಕೆಲಸದ ಸಮರ್ಪಣಾ ಕಾರ್ಯಕ್ರಮ- ಸಚಿವ ಕೃಷ್ಣಭೈರೇಗೌಡ

ಗದಗ,ಫೆಬ್ರವರಿ,13,2026 (www.justkannada.in):  ‘ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ 1 ಸಾವಿರ...