10
March, 2026

A News 365Times Venture

10
Tuesday
March, 2026

A News 365Times Venture

ಪ್ರೀತಿಸಿ ಮನೆ ಬಿಟ್ಟು ಓಡಿ ಹೋದ ಮಗಳು: ಮನನೊಂದು ಒಂದೇ ಕುಟುಂಬದ ಮೂವರು ಆತ್ಮಹತ್ಯೆ

Date:

ಮೈಸೂರು, ಮೇ, 24,2025 (www.justkannada.in): ಹಿರಿಯ ಮಗಳು ಪ್ರೀತಿಸಿ ಪ್ರಿಯಕರನ ಜೊತೆ ಮನೆಬಿಟ್ಟು ಓಡಿ ಹೋದ ಹಿನ್ನೆಲೆಯಲ್ಲಿ ಮನನೊಂದು ಒಂದೇ ಕುಟುಂಬದ ಮೂವರು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

ಹೆಚ್​.ಡಿ.ಕೋಟೆ ತಾಲೂಕಿನ ಬೂದನೂರು ಕೆರೆಗೆ ಹಾರಿ ಒಂದೇ ಕುಟಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹದೇವಸ್ವಾಮಿ, ಪತ್ನಿ ಮಂಜುಳಾ, ಪುತ್ರಿ ಹರ್ಷಿತಾ ಆತ್ಮಹತ್ಯೆಗೆ ಶರಣಾದವರು. ಮಹದೇವಸ್ವಾಮಿ ಹಿರಿಯ ಪುತ್ರಿ ಅರ್ಪಿತಾ ಯುವಕನೊಂದಿಗೆ  ಮನೆ ಬಿಟ್ಟು ಹೋಗಿದ್ದಳು. ಇದರಿಂದ ತಂದೆ ಮಹದೇವಸ್ವಾಮಿ, ತಾಯಿ ಮಂಜುಳಾ ಮತ್ತು ಸಹೋದರಿ ಹರ್ಷಿತಾ ಮನನೊಂದಿದ್ದರು.

ಈ ಮಧ್ಯೆ ಕೆರೆಗೆ ಹಗ್ಗ ಕಟ್ಟಿ ಕೆರೆಗೆ ಹಾರಿ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.  ಮೂವರ ಚಪ್ಪಲಿಗಳು ಮತ್ತು ಬೈಕ್​​ ಬೂದನೂರು ಕೆರೆ ಏರಿ ಮೇಲೆ ಪತ್ತೆಯಾಗಿದೆ. ಮೂವರೂ ಕೆರೆಗೆ ಹಾರಿ ಮೃತಪಟ್ಟಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ಶೋಧಕಾರ್ಯ ನಡೆಸಿದಾಗ, ಮೂವರ ಶವ ಕೆರೆಯಲ್ಲಿ ಪತ್ತೆಯಾಗಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಶವಗಳನ್ನ ಹೊರ ತೆಗೆದಿದ್ದು, ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ಹೆಚ್​ ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words:  daughter, love, same family, three, suicides

The post ಪ್ರೀತಿಸಿ ಮನೆ ಬಿಟ್ಟು ಓಡಿ ಹೋದ ಮಗಳು: ಮನನೊಂದು ಒಂದೇ ಕುಟುಂಬದ ಮೂವರು ಆತ್ಮಹತ್ಯೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೃಷಿ ಕ್ಷೇತ್ರದಲ್ಲಿ AI ಬಳಕೆ ಅಗತ್ಯ : ವಿಟಿಯು ಕುಲಪತಿ ಎಸ್. ವಿದ್ಯಾಶಂಕರ್

  ಮೈಸೂರು, ಮಾ.೧೦,೨೦೨೬ : ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕೃತಕ ಬುದ್ಧಿಮತ್ತೆ...

KPCC ಅಧ್ಯಕ್ಷರಾಗಿ 6 ವರ್ಷ ಯಶಸ್ವಿ: ಡಿಕೆ ಶಿವಕುಮಾರ್ ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು,ಮಾರ್ಚ್,10,2026 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ ಯಶಸ್ವಿಯಾಗಿ 6 ವರ್ಷಗಳನ್ನು ಪೂರೈಸಿದ ಡಿಸಿಎಂ...

ಡಿಕೆಶಿ ಅತ್ಯಂತ ಯಶಸ್ವಿ ಅಧ್ಯಕ್ಷರು: ಪಕ್ಷ ಅಧಿಕಾರಕ್ಕೆ ತರುವುದೇ ಅವರ ಕನಸಾಗಿತ್ತು- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು,ಮಾರ್ಚ್,10,2026 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ 6 ವರ್ಷ ಪೂರೈಸಿದ್ದು...

ಕಲ್ಯಾಣ ಕರ್ನಾಟಕ ಭಾಗದಲ್ಲಿ ವಿಮಾನ ನಿಲ್ದಾಣ: ಸಭೆ ಮಾಡಿ ಅಂತಿಮ ನಿರ್ಧಾರ- ಎಂ.ಬಿ ಪಾಟೀಲ್

ಬೆಂಗಳೂರು,ಮಾರ್ಚ್,10,2026 (www.justkannada.in): ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಳ್ಳಾರಿ, ವಿಜಯನಗರ ಮತ್ತು ಕೊಪ್ಪಳ...