11
March, 2026

A News 365Times Venture

11
Wednesday
March, 2026

A News 365Times Venture

ಬಿಜೆಪಿ, ಜೆಡಿಎಸ್ ಶಾಸಕರು ಸಂಪರ್ಕದಲ್ಲಿದ್ದಾರೆಂದ ಸಚಿವ ಜಮೀರ್ ಗೆ ಶಾಸಕ ಅಶ್ವತ್ ನಾರಾಯಣ್ ತಿರುಗೇಟು

Date:

ಮಂಡ್ಯ,ಮಾರ್ಚ್,1,2025 (www.justkannada.in): ಬಿಜೆಪಿ, ಜೆಡಿಎಸ್ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಹೇಳಿಕೆ ನೀಡಿದ್ದ  ಸಚಿವ ಜಮೀರ್ ಅಹ್ಮದ್ ಖಾನ್ ಗೆ  ಶಾಸಕ ಅಶ್ವತ್ ನಾರಾಯಣ್ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿದ ಅಶ‍್ವತ್ ನಾರಾಯಣ್, ‘ಬಿಜೆಪಿ ಮತ್ತು ಜೆಡಿಎಸ್ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ’ ಎಂದು ಸಚಿವ ಜಮೀರ್ ಹೇಳಿಕೆ ನೀಡುತ್ತಾರೆ. ನಿಮ್ಮ ಸಂಪರ್ಕದಲ್ಲಿದ್ದರೇ ಏನು ಬೇಕಾದರೂ ಮಾಡಪ್ಪ. ನಿಮಗೆ ಅಡ್ಡ ಬಂದವರೂ ಯಾರಪ್ಪ ಜಮೀರ್?’ ಎಂದು ಲೇವಡಿ ಮಾಡಿದರು.

ನಮ್ಮ ಪಕ್ಷ ಸಧೃಢವಾಗಿದ್ದು, ಯಾರ ಅವಶ್ಯಕತೆಯೂ ಇಲ್ಲ. ರಾಜಕೀಯದಲ್ಲಿ ಯಾರಾದರೂ ಬರಬಹುದು, ಯಾರಾರೂ ಹೋಗಬಹುದು.  ನಾನು ಯಾರ ಮೇಲೂ ದ್ವೇಷ ಮಾಡಲ್ಲ. ಆದರೆ ಕಾಂಗ್ರೆಸ್ ರೀತಿ ಕೀಳುಮಟ್ಟದ ರಾಜಕಾರಣ ಮಾಡಲ್ಲ. ಕಾಂಗ್ರೆಸ್ ನಾಯಕರು ಬ್ಲಾಕ್ ಮೇಲ್ ತಂತ್ರ ಮಾಡುತ್ತಿದ್ದಾರೆ. ಮುಂದೆ ಚುನಾವಣೆಗೆ ಹೋಗಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ತರುತ್ತೇವೆ ಎಂದು ಅಶ್ವಥ್ ನಾರಾಯಣ್ ತಿಳಿಸಿದರು.

Key words: MLA, Ashwath Narayan, Minister, Jameer

The post ಬಿಜೆಪಿ, ಜೆಡಿಎಸ್ ಶಾಸಕರು ಸಂಪರ್ಕದಲ್ಲಿದ್ದಾರೆಂದ ಸಚಿವ ಜಮೀರ್ ಗೆ ಶಾಸಕ ಅಶ್ವತ್ ನಾರಾಯಣ್ ತಿರುಗೇಟು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರು ಅಭಿವೃದ್ಧಿ ಪ್ರಾಧಿಕಾರದ (MDA) ವ್ಯವಸ್ಥಾಪಕಿ ಶೃತಿ.ಬಿ ಪ್ರತಿನಿಯೋಜನೆ ರದ್ದು

  ಮೈಸೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರದ (MDA) ವ್ಯವಸ್ಥಾಪಕರಾಗಿ ಪ್ರತಿನಿಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿದ್ದ...

ಶೇ 80ರಿಂದ 90 ರಷ್ಟು ಇಂಧನ ಮಧ್ಯಪ್ರಾಚ್ಯದಿಂದ ಬರಬೇಕಿದೆ: ಗ್ಯಾಸ್ ಪೂರೈಕೆ ನಮ್ಮ ಆದ್ಯತೆ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ನವದೆಹಲಿ,ಮಾರ್ಚ್,10,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಶೇ 80ರಿಂದ...

MUDA ಪ್ರಕರಣ: ದಿನೇಶ್ ಕುಮಾರ್ ವಿರುದ್ದ ವಿಚಾರಣೆಗೆ ತಡೆ ನೀಡಿದ ಹೈಕೋರ್ಟ್

ಬೆಂಗಳೂರು,ಮಾರ್ಚ್,10,2026 (www.justkannada.in):  ಮುಡಾ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ  ಹಗರಣಕ್ಕೆ ಸಂಬಂಧಿಸಿದಂತೆ  ಮಾಜಿ...

ಎಪಿಎಂಸಿಗಳಲ್ಲಿ 70 ಲಕ್ಷ ಕೋಟಿ ರೂ. ವಹಿವಾಟು ನಡೆದಿದೆ: ಸಚಿವ ಶಿವಾನಂದ ಪಾಟೀಲ್

ಬೆಂಗಳೂರು,ಮಾರ್ಚ್,10,2026 (www.justkannada.in):  ಪ್ರಸಕ್ತ ಹಣಕಾಸು ವರ್ಷದ ಜನವರಿ ಅಂತ್ಯಕ್ಕೆ ರಾಜ್ಯದ ಎಪಿಎಂಸಿಗಳಲ್ಲಿ...