8
July, 2025

A News 365Times Venture

8
Tuesday
July, 2025

A News 365Times Venture

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಮುಂದುವರಿಕೆ, ಯಾವುದೇ ಅನುಮಾನವೇ ಬೇಡ- ಎಂ.ಪಿ ರೇಣುಕಾಚಾರ್ಯ

Date:

ಶಿವಮೊಗ್ಗ,ಜುಲೈ,8,2025 (www.justkannada.in): ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅವರೇ ಮುಂದುವರೆಯುತ್ತಾರೆ. ಯಾವುದೇ ಅನುಮಾನವೇ ಬೇಡ ಎಂದು ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ತಿಳಿಸಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ, ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ಅವರೇ ಮುಂದುವರೆಯುತ್ತಾರೆ. ಬಿ.ವೈ ವಿಜಯೇಂದ್ರ ಅವರನ್ನು ಆಯ್ಕೆ ಮಾಡಿದ್ದು ಹೈಕಮಾಂಡ್ ಹಲವು ಹೋರಾಟ ಯಶಸ್ವಿಯಾಗಿ ರೂಪಿಸಿಕೊಂಡು ಬರುತ್ತಿದ್ದಾರೆ ವಿಜಯೇಂದ್ರ ಸಮರ್ಥ ನಾಯಕ ಕಿರಿಯವಯಸ್ಸಿನಲ್ಲಿ ಎಲ್ಲಾ ಜವಾಬ್ದಾರಿಗಳನ್ನು ನಿಭಾಯಿಸುತ್ತಿದ್ದಾರೆ. ಹೀಗಾಗಿ ಅವರೇ ರಾಜ್ಯಾಧ್ಯಕ್ಷರಾಗಿ ಮುಂದುವರೆಯುತ್ತಾರೆ. ಇದರಲ್ಲಿ ಯಾವುದೇ ರೀತಿಯ ಅನುಮಾನವೇ ಇಲ್ಲ ಎಂದರು.

ಇದೇ ವೇಳೆ ಕಾಂಗ್ರೆಸ್ ಗೆ ಕುಟುಕಿದ ಎಂ.ಪಿ ರೇಣುಕಾಚಾರ್ಯ, ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ನಡುವೆ ಫೈಟ್ ನಡೆಯುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಹಲವು ಗೊಂದಲಗಳಿವೆ ರಾಜ್ಯಕ್ಕೆ ರಣದೀಪ ಸಿಂಗ್ ಸುರ್ಜೆವಾಲಾ ಪದೇ ಪದೇ ಬಂದು ಸಭೆ ನಡೆಸುತ್ತಿದ್ದಾರೆ. ಸೂರ್ಯ ಚಂದ್ರ ಇರೋದು ಎಷ್ಟು ಸತ್ಯವೋ, ಈ ಕಾಂಗ್ರೆಸ್ ಸರ್ಕಾರ ಪತನ ಅಷ್ಟೇ ಸತ್ಯ ಎಂದು ಹೇಳಿದರು.vtu

Key words: Vijayendra, continue, BJP, state president, MP Renukacharya

The post ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಮುಂದುವರಿಕೆ, ಯಾವುದೇ ಅನುಮಾನವೇ ಬೇಡ- ಎಂ.ಪಿ ರೇಣುಕಾಚಾರ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಠದ ಅನುದಾನದಲ್ಲೂ ಸಚಿವರಿಂದ ಕಮಿಷನ್ ಬೇಡಿಕೆ: ಶಾಸಕ ಶ್ರೀವತ್ಸ ಕಿಡಿ

ಮೈಸೂರು,ಜುಲೈ,8,2025 (www.justkannada.in):  ಸಚಿವ ಶಿವರಾಜ ತಂಗಡಗಿ ಅವರು ಗಾಣಿಗ ಸ್ವಾಮೀಜಿಯ ಮಠದ...

ಜನೌಷಧ ಕೇಂದ್ರಗಳ ಸ್ಥಗಿತ ಆದೇಶಕ್ಕೆ ತಡೆ ನೀಡಿದ ಹೈಕೋರ್ಟ್

ಬೆಂಗಳೂರು, ಜುಲೈ, 8,2025 (www.justkannada.in):  ರಾಜ್ಯದಲ್ಲಿ  ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧ...

ರಾಜ್ಯದಲ್ಲಿ ಸಿಎಂ ಸ್ಥಾನ ಖಾಲಿ ಇಲ್ಲ, ಚರ್ಚಿಸಲು ಇದು ಸಮಯವಲ್ಲ – ಡಿಸಿಎಂ ಡಿಕೆ ಶಿವಕುಮಾರ್

ನವದೆಹಲಿ,ಜುಲೈ,8,2025 (www.justkannada.in): ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಡಿಸಿಎಂ...

ಬಿಜೆಪಿ ಬಿಟ್ಟೋಗಿದ್ದ ಬಿಎಸ್ ವೈ ಮತ್ತೆ ಯಾಕೆ ಬಂದ್ರು ಗೊತ್ತಿಲ್ಲ : ಅರವಿಂದ ಲಿಂಬಾವಳಿ ವಾಗ್ದಾಳಿ

ದಾವಣಗೆರೆ,ಜುಲೈ,8,2025 (www.justkannada.in): ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಬಿಜೆಪಿ ಬಿಟ್ಟು...