25
June, 2026

A News 365Times Venture

25
Thursday
June, 2026

A News 365Times Venture

ಬಿಜೆಪಿಯಿಂದ ಸುಳ್ಳು: ನಾವು ಯಾವಾಗಲೂ ಮಹಿಳಾ ಮೀಸಲಾತಿ ಪರ- ಸಿಎಂ ಸಿದ್ದರಾಮಯ್ಯ

Date:

ಚಾಮರಾಜನಗರ,ಏಪ್ರಿಲ್,21,2026 (www.justkannada.in):  ಮಹಿಳಾ ಮೀಸಲಾತಿ ಬಿಲ್ ವಿರೋಧಿಸಿದೆವು ಎಂದು ಬಿಜೆಪಿಯುವರು ಸುಳ್ಳೂ ಹೇಳಿದ್ದಾರೆ . ಆದರೆ ನಾವು ಯಾವಾಗಲೂ ಮಹಿಳಾ ಮೀಸಲಾತಿ ವಿಧೇಯಕ ಪರವಾಗಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಇಂದು ಗುಂಡ್ಲುಪೇಟೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ಮಹಿಳೆಯರು ಕಾಂಗ್ರೆಸ್ ಅನ್ನು ಕ್ಷಮಿಸಲ್ಲ ಎಂದು  ಪ್ರಧಾನಿ ಮೋದಿ ಅವರು ಹೇಳಿದ್ದಾರೆ.  2023ರಲ್ಲೇ ಮಹಿಳಾ ಮೀಸಲಾತಿ ಅಂಗೀಕಾರವಾಗಿದೆ. ಆದರೆ 2028ರವರೆಗೂ ಜಾರಿಯಾಗಲ್ಲ ಎಂದು ನಿರ್ಧರಿಸಿದ್ದು ಬಿಜೆಪಿ.  ಮಹಿಳಾ ಮೀಸಲಾತಿ ಪರ ಇರುವ ಪಕ್ಷ ಅಂದ್ರೆ ಅದು ಕಾಂಗ್ರೆಸ್.  ಗ್ರಾಮ ಪಂಚಾಯಿತಿ ಸೇರಿ ಸ್ಥಳೀಯ ಸಂಸ್ಥೆಗಳಲ್ಲಿ ಶೇ50ರಷು ಮೀಸಲಾತಿ ಇರಲು ಕಾರಣ ಕಾಂಗ್ರೆಸ್.  ನಾವು ಯಾವಾಗಲೂ ಮಹಿಳಾ ಮೀಸಲಾತಿ ವಿಧೇಯಕ ಪರವಾಗಿದ್ದೇವೆ. ಸಂವಿಧಾನ ತಿದ್ದುಪಡಿ ಮಾಡುವುದಕ್ಕೆ ಮಾತ್ರ ನಮ್ಮ ವಿರೋಧ. ರೈತರು ಮಹಿಳೆಯರ, ದಲಿತರನ್ನ ಬಿಜೆಪಿ ವಿರೋಧಿಸುತ್ತಿದೆ ಎಂದು ಕಿಡಿಕಾರಿದರು.

ನಮ್ಮ ಗ್ಯಾರಂಟಿ ಯೋಜನೆ ಕಾಪಿ ಮಾಡಿದ್ದಾರ.  ಮೋದಿ ಗ್ಯಾರಂಟಿ ಯೋಜನೆ ಜಾರಿ ಮಾಡಲು ಸಾಧ್ಯವಿಲ್ಲ ಎಂದಿದ್ದರು. ಗ್ಯಾರಂಟಿ ಜಾರಿ ಮಾಡಿದರೆ ಖಜಾನೆ ಖಾಲಿ ಎಂದಿದ್ದರು.  ಗ್ಯಾರಂಟಿ ಜೊತೆ ಅಭಿವೃದ್ದಿ ನಡೆಯುತ್ತಿದೆ ಸಮಾಜದಲ್ಲಿ ಬಡವರು ಹಿಂದುಳಿದವರ ಪರ ಕಾಂಗ್ರೆಸ್ ಕೆಲಸ ಮಾಡುತ್ತಿದೆ . ಬಿಜೆಪಿಯವರು ಜಾತಿ ಧರ್ಮದ ಹೆಸರಿನಲ್ಲಿ ಸಮಾಜ ಒಡೆಯುತ್ತಿದ್ದಾರೆ  ಎಂದರು.

Key words: We, favor, women’s reservation, CM Siddaramaiah

The post ಬಿಜೆಪಿಯಿಂದ ಸುಳ್ಳು: ನಾವು ಯಾವಾಗಲೂ ಮಹಿಳಾ ಮೀಸಲಾತಿ ಪರ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವಾರ್ತಾ ಇಲಾಖೆ ಆಯುಕ್ತರಾಗಿ ಡಿಐಜಿ ಎಂ.ಎನ್.ಅನುಚೇತ್ ಅಧಿಕಾರ ಸ್ವೀಕಾರ

ಬೆಂಗಳೂರು,ಜೂನ್,25,2026 (www.justkannada.in): ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ  ಇಲಾಖೆಯ  ನೂತನ ಆಯುಕ್ತರಾಗಿ...

ಗೃಹ ಸಚಿವರ ಕಾರಿಗೆ ಟ್ರಾಫಿಕ್ ಫೈನ್: 50% ಆಫರ್ ಬಳಸಿ ಬೇಗ ಕಟ್ಟಿ ಎಂದು ಲೇವಡಿ ಮಾಡಿದ BJP

ಬೆಂಗಳೂರು, ಜೂನ್,25,2026 (www.justkannada.in): ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಕಾರು...

ತುಂಗಭದ್ರಾ ಡ್ಯಾಂನ ನೂತನ ಕ್ರಸ್ಟ್ ಗೇಟ್‌ ಗಳು ಲೋಕಾರ್ಪಣೆ

ಕೊಪ್ಪಳ, ಜೂನ್,25,2026 (www.justkannada.in): ಕರ್ನಾಟಕ, ತೆಲಂಗಾಣ, ಆಂಧ್ರ ಪ್ರದೇಶಕ್ಕೆ ನೀರಾವರಿಗೆ ಆಧಾರವಾಗಿರುವ...

NCERT 6ನೇ ಕ್ಲಾಸ್‌ ಕನ್ನಡ ಪುಸ್ತಕಕ್ಕೆ ಕೃಷ್ಣ ಹೆಸರು: ಕೇಂದ್ರದ ವಿರುದ್ದ ಮಧು ಬಂಗಾರಪ್ಪ ಆಕ್ರೋಶ

ಬೆಂಗಳೂರು,ಜೂನ್,25,2026 (www.justkannada.in): ಎನ್ ಸಿಇಆರ್ ಟಿಯ ಆರನೇ ತರಗತಿ ಕನ್ನಡ ಪುಸ್ತಕಕ್ಕೆ...