14
May, 2026

A News 365Times Venture

14
Thursday
May, 2026

A News 365Times Venture

ಬೀರೇಶ್ವರ ದೇವಾಲಯದ ಬಸವ ವಿಧಿವಶ: ಭಕ್ತರ ಸಮ್ಮುಖದಲ್ಲಿ ಅಂತ್ಯಸಂಸ್ಕಾರ

Date:

ಮೈಸೂರು,ಮೇ.12,2026 (www.justkannada.in):  ವಯೋಸಹಜ ಸಮಸ್ಯೆಯಿಂದ ಮೃತಪಟ್ಟ ಮೈಸೂರು ತಾಲೂಕಿನ ವರಕೋಡು ಬೀರೇಶ್ವರಸ್ವಾಮಿ ದೇವಾಲಯದ ಬಸವನ ಅಂತ್ಯಕ್ರಿಯೆ ಶಾಸ್ತ್ರೋಕ್ತವಾಗಿ ಸಾಂಪ್ರದಾಯಿಕ ಪೂಜೆಯೊಂದಿಗೆ ಬೀರೇಶ್ವರಸ್ವಾಮಿ ದೇವಾಲಯ ಬಳಿ ಅಪಾರ ಭಕ್ತರ ಸಮ್ಮುಖದಲ್ಲಿ ನೆರವೇರಿತು.

ವರಕೋಡು ಬೀರೇಶ್ವರ ದೇವಾಲಯದ ಆವರಣದಲ್ಲಿಯೇ ಸೋಮವಾರ ಸಂಜೆ ಕುಸಿದು ಬಿದ್ದು ಅಸುನೀಗಿದ ಬಸವನ ಮೃತದೇಹವನ್ನು ತೆರೆದ ವಾಹನದಲ್ಲಿ ವರಕೋಡು, ಬಡಗಲಹುಂಡಿ, ಕೆಂಪೇಗೌಡನಹುಂಡಿ, ಹೊಸಹುಂಡಿ ಹಾಗೂ ಮೂಡಲಹುಂಡಿ ಗ್ರಾಮದಲ್ಲಿ ಮೆರವಣಿಗೆ ಮೂಲಕ ಸಾಗಿತು.  ಗ್ರಾಮದ ನಿವಾಸಿಗಳು ಪೂಜೆ ಸಲ್ಲಿಸಿ ನೆಚ್ಚಿನ ಬಸವನಿಗೆ ವಿದಾಯ ಹೇಳಿದರು.

ಬಳಿಕ ಮತ್ತೆ ವರಕೋಡು ಗ್ರಾಮದ ಮೂಲಕ ಬೀರೇಶ್ವರಸ್ವಾಮಿ ದೇವಾಲಯಕ್ಕೆ ತಂದು ಸಾಂಪ್ರದಾಯಿಕ ಪೂಜೆ ಸಲ್ಲಿಸಲಾಯಿತು. ಅರ್ಚಕ ಗಣೇಶ್ ದೀಕ್ಷಿತ್, ಗುರುಮಠದ ಗುರುಸ್ವಾಮಿ ನೇತೃತ್ವದಲ್ಲಿ  ಬಸವನ ಅಂತ್ಯಕ್ರಿಯೆ ನೆರವೇರಿತು. ಅಂತ್ಯಕ್ರಿಯೆಯಲ್ಲಿ ಐದು ಗ್ರಾಮಗಳ ಗ್ರಾಮಸ್ಥರು ಸೇರಿದಂತೆ ವಿವಿಧೆಡೆ ಭಕ್ತರು ಆಗಮಿಸಿ ಪೂಜೆ ಸಲ್ಲಿಸಿ ಅಂತಿಮ ನಮನ ಸಲ್ಲಿಸಿದರು.

ಬೀರೇಶ್ವರ ದೇವಾಲಯದ ಕಳಸ ಪ್ರತಿಷ್ಠಾಪನಾ ಜಾತ್ರಾ ಮಹೋತ್ಸವ ಹಾಗೂ 48 ದಿನಗಳ ಮಂಡಲ ಪೂಜಾ ಕೈಂಕರ್ಯದಲ್ಲಿ ಬಸವ ಪಾಲ್ಗೊಂಡು ಎಲ್ಲರ ಗಮನ ಸೆಳೆದಿತ್ತು.

Key words: Beereshwar temple, Basava,  passes away, funaral

The post ಬೀರೇಶ್ವರ ದೇವಾಲಯದ ಬಸವ ವಿಧಿವಶ: ಭಕ್ತರ ಸಮ್ಮುಖದಲ್ಲಿ ಅಂತ್ಯಸಂಸ್ಕಾರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶಿಕ್ಷಣವೇ ಸಮಾಜದ ಪ್ರಗತಿಯ ಅಡಿಪಾಯ, ಪ್ರತಿಭೆಯೇ ರಾಷ್ಟ್ರದ ಭವಿಷ್ಯದ ಶಕ್ತಿ : ಡಾ.ಈ.ಸಿ.ನಿಂಗರಾಜ್ ಗೌಡ.

ಮೈಸೂರು,ಮೇ,13,2026 (www.justkannada.in): ಶಿಕ್ಷಣವೇ ಸಮಾಜದ ಪ್ರಗತಿಯ ಅಡಿಪಾಯ, ಈಗಿನ ವಿದ್ಯಾರ್ಥಿಗಳ ಪ್ರತಿಭೆಯೇ...

ದೇಶದ ಮಕ್ಕಳ ಭವಿಷ್ಯಕ್ಕೆ ಸೆಕ್ಯೂರಿಟಿ ಬೇಡವಾ? ಕೇಂದ್ರದ ವಿರುದ್ದ ಸಚಿವ ಮಧು ಬಂಗಾರಪ್ಪ ಗುಡುಗು

ಬೆಂಗಳೂರು,ಮೇ,13,2026 (www.justkannada.in):  ಪ್ರಶ್ನೆಪತ್ರಿಕೆ ಸೋರಿಕೆಯಿಂದಾಗಿ  ಮೇ 3 ರಂದು ನಡೆದಿದ್ದ ನೀಟ್...

ನೀಟ್ ಜವಾಬ್ದಾರಿ ರಾಜ್ಯಗಳಿಗೆ ನೀಡಿ, ನಾವೇ ಪರೀಕ್ಷೆ ಮಾಡ್ತೇವೆ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು,ಮೇ,13,2026 (www.justkannada.in): ರಾಜಸ್ತಾನದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ...

ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ; ರಕ್ಷಕರೇ ಭಕ್ಷಕರಾದರೇ ಸಿದ್ದರಾಮಯ್ಯನವರೇ? ಆರ್.ಅಶೋಕ್ ಕಿಡಿ

ಬೆಂಗಳೂರು,ಮೇ,13,2026 (www.justkannada.in): ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಕರ್ನಾಟಕದಲ್ಲಿ ಇಂದು...