5
March, 2026

A News 365Times Venture

5
Thursday
March, 2026

A News 365Times Venture

ಮಹಾನಗರ ಪಾಲಿಕೆ ನೌಕರರ ಮುಷ್ಕರ:  MLC ಕೆ.ವಿವೇಕಾನಂದ ಬೆಂಬಲ

Date:

ಮೈಸೂರು,ಜುಲೈ,9,2025 (www.justkannada.in):  ವಿಧಾನ ಪರಿಷತ್ ಸದಸ್ಯ ಕೆ.ವಿವೇಕಾನಂದ ಅವರು ಮೈಸೂರು ಮಹಾನಗರ ಪಾಲಿಕೆ ಕಚೇರಿಗೆ ಬುಧವಾರ ಭೇಟಿ ನೀಡಿ ಮಹಾನಗರ ಪಾಲಿಕೆ ಅಧಿಕಾರಿಗಳು, ಸಿಬ್ಬಂದಿ ನಡೆಸುತ್ತಿರುವ ಮುಷ್ಕರಕ್ಕೆ ಬೆಂಬಲ ಸೂಚಿಸಿದರು.

ರಾಜ್ಯದ ಎಲ್ಲ 10 ಮಹಾನಗರ ಪಾಲಿಕೆಗಳ ಅಧಿಕಾರಿಗಳು, ಸಿಬ್ಬಂದಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮುಷ್ಕರ ನಡೆಸುತ್ತಿದ್ದು, ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ಬುಧವಾರ ಮುಷ್ಕರ ಸ್ಥಳಕ್ಕೆ ಭೇಟಿ ನೀಡಿದ ವಿವೇಕಾನಂದ ಅವರು, ಧರಣಿನಿರತ ಅಧಿಕಾರಿಗಳು ಮತ್ತು ಸಿಬ್ಬಂದಿಯೊಂದಿಗೆ ಮಾತನಾಡಿ ಮನವಿಗಳನ್ನು ಆಲಿಸಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಾನಗರ ಪಾಲಿಕೆಗಳ ಅಧಿಕಾರಿಗಳು ನ್ಯಾಯಯುತವಾಗಿ ತಮಗೆ ಸಿಗಬೇಕಿರುವ ಸೌಲಭ್ಯಗಳನ್ನೇ ಕೇಳುತ್ತಿದ್ದಾರೆ. 7ನೇ ವೇತನ ಆಯೋಗದನ್ವಯ ಸಂಪೂರ್ಣ ಸಂಬಳ, ಕೆಜಿಐಡಿ ಮತ್ತು ಜಿಪಿಎಫ್ ಅಡಿಯಲ್ಲಿ ವಿಮಾ ಸೌಲಭ್ಯ, ಆರೋಗ್ಯ ವಿಮೆಗಳನ್ನು ಕೇಳುತ್ತಿದ್ದಾರೆ. ಈ ಎಲ್ಲ ಬೇಡಿಕೆಗಳೂ ಸರ್ಕಾರದ ಬೇರೆ ಇಲಾಖೆಗಳಿಗೆ ನೀಡುತ್ತಿರುವ ಸೌಲಭ್ಯಗಳೇ ಆಗಿವೆ. ಇವುಗಳನ್ನು ಮಹಾನಗರ ಪಾಲಿಕೆ ಅಧಿಕಾರಿಗಳು, ಸಿಬ್ಬಂದಿಗಳಿಗೆ ವಿಸ್ತರಿಸುವುದು ಸರ್ಕಾರಕ್ಕೆ ಕಠಿಣವಾಗಲಾರದು.

ನಮ್ಮ ವ್ಯವಸ್ಥೆಯಲ್ಲಿ ಪೌರಕಾರ್ಮಿಕರೇ ಅತ್ಯಂತ ಮಹತ್ವದ ಕಾರ್ಯ ನಿರ್ವಹಿಸುವುದರಿಂದ ಪ್ರತಿಭಟನಾಕಾರರ ಬೇಡಿಕೆಗಳಿಗೆ ಸರ್ಕಾರ ಕೂಡಲೇ ಈಡೇರಿಸಬೇಕೆಂದು ಆಗ್ರಹಿಸಿದರು. ಈ ಬಗ್ಗೆ ನಾನು ವಿಧಾನ ಪರಿಷತ್ತಿನಲ್ಲೂ ಚರ್ಚೆ ಮಾಡುವುದಾಗಿ ವಿವೇಕಾನಂದ ಅವರು ಮಾಹಿತಿ ನೀಡಿದರು.vtu

Key words: Mysore, City Corporation, employees, strike, MLC, K. Vivekananda

The post ಮಹಾನಗರ ಪಾಲಿಕೆ ನೌಕರರ ಮುಷ್ಕರ:  MLC ಕೆ.ವಿವೇಕಾನಂದ ಬೆಂಬಲ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಫೋನ್ ಕದ್ದಾಲಿಕೆ ಅವಶ್ಯಕತೆ ಏನಿದೆ? ಸಚಿವ ರಾಮಲಿಂಗರೆಡ್ಡಿ

ರಾಮನಗರ,ಮಾರ್ಚ್,4,2026 (www.justkannada.in): ಕಾಂಗ್ರೆಸ್ ಸರ್ಕಾರದಲ್ಲಿ ಫೋನ್ ಕದ್ದಾಲಿಕೆ ಇದೆ ಎಂದು ಕೇಂದ್ರ...

ಕೆಪಿಸಿಸಿಗೆ ಹೊಸ ನಾಯಕತ್ವ: ಡಿಕೆಶಿ ಹೇಳಿರೋದು ಸರಿಯಾಗಿದೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು, ಮಾರ್ಚ್,4,2026 (www.justkannada.in): ಕೆಪಿಸಿಸಿಗೆ ಹೊಸ ನಾಯಕತ್ವ ಬೇಕು ಎಂಬ ಡಿಸಿಎಂ...

ಒಳಮೀಸಲಾತಿ: ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು ಖರ್ಗೆ ಹೇಳಿದ್ದಾರೆ- ಸಚಿವ ಮುನಿಯಪ್ಪ

ಬೆಂಗಳೂರು,ಮಾರ್ಚ್,4,2026 (www.justkannada.in): ಒಳಮೀಸಲಾತಿ ವಿಚಾರವನ್ನು ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು...

ಕೆಪಿಎಸ್ ಸಿ ಅಕ್ರಮ ಆರೋಪ: ವರದಿ ಕೇಳಿದ ಸಿಎಸ್ ಶಾಲಿನಿ ರಜನೀಶ್

ಬೆಂಗಳೂರು,ಮಾರ್ಚ್,4,2026 (www.justkannada.in):  ಕೆಎಎಸ್ ಮುಖ್ಯ ಪರೀಕ್ಷೆ ಫಲಿತಾಂಶದಲ್ಲಿ ಅಕ್ರಮ ನಡೆದಿದೆ ಎಂದು...