16
March, 2026

A News 365Times Venture

16
Monday
March, 2026

A News 365Times Venture

ಮೈಸೂರು ಅರಮನೆ ಮುಂಭಾಗ ಟಾಂಗಾ ಸ್ಟ್ಯಾಂಡ್‌ ಗೆ ತೀವ್ರ ವಿರೋಧ.

Date:

ಮೈಸೂರು,ಮಾರ್ಚ್,16,2026 (www.justkannada.in): ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಸಚಿವಾಲಯ ಜಾರಿಗೆ ತಂದಿರುವ ‘ಸ್ವದೇಶ ದರ್ಶನ 2.0’ ಯೋಜನೆಯಡಿ ಮೈಸೂರಿನಲ್ಲಿ ಹೆರಿಟೇಜ್ ಎಕ್ಸ್‌ಪೀರಿಯನ್ಸ್ ಝೋನ್ ಅಭಿವೃದ್ಧಿ ಮಾಡುವ ಪ್ರಸ್ತಾವನೆಗೆ ಸಂಬಂಧಿಸಿ ವಿವಾದ ಎದ್ದಿದೆ.

ಯೋಜನೆ ನೆಪದಲ್ಲಿ ಅರಮನೆ ಮುಂಭಾಗದ ಪಾದಚಾರಿ ಮಾರ್ಗದಲ್ಲೇ ಟಾಂಗಾ ಸ್ಟ್ಯಾಂಡ್ ನಿರ್ಮಿಸಲು ಮುಂದಾಗಿರುವ ಕ್ರಮಕ್ಕೆ ಮೈಸೂರಿನ ನಾಗರಿಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಸ್ವದೇಶ ದರ್ಶನ 2.0 ಯೋಜನೆ ದೇಶದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ, ಪ್ರವಾಸಿಗರಿಗೆ ಉತ್ತಮ ಅನುಭವ ಒದಗಿಸುವುದು ಹಾಗೂ ಸ್ಥಳೀಯ ಪರಂಪರೆ–ಸಂಸ್ಕೃತಿಯನ್ನು ಉತ್ತೇಜಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಆರಂಭಿಸಿದ ಯೋಜನೆಯಾಗಿದೆ. ಈ ಯೋಜನೆಯಡಿ ಮೈಸೂರಿನ ಕೆಲವು ಪ್ರಮುಖ ಪ್ರದೇಶಗಳಲ್ಲಿ ಹೆರಿಟೇಜ್ ಎಕ್ಸ್‌ಪೀರಿಯನ್ಸ್ ಝೋನ್ ಅಭಿವೃದ್ಧಿಪಡಿಸುವ ಪ್ರಸ್ತಾವನೆ ರೂಪಿಸಲಾಗಿದೆ.

ಈ ಹಿನ್ನೆಲೆಯಲ್ಲಿ ವರಾಹ ಗೇಟ್ ಟಾಂಗಾ ಸ್ಟ್ಯಾಂಡ್, ಬಲರಾಮ ಗೇಟ್ ಟಾಂಗಾ ಸ್ಟ್ಯಾಂಡ್, ಮೈಸೂರು ಮೃಗಾಲಯ ಪ್ರವೇಶದ್ವಾರ ಟಾಂಗಾ ಸ್ಟ್ಯಾಂಡ್, ಕುಕ್ಕರಹಳ್ಳಿ ಕೆರೆ ಸ್ಟೇಬಲ್, ನಜರಾಬಾದ್ ಸ್ಟೇಬಲ್, ಕುಕ್ಕರಹಳ್ಳಿ ಕೆರೆ ಸರ್ಕ್ಯೂಟ್, ಶಾ ಪಸಂದ್ ಮಹಾರಾಜ ಸರ್ಕ್ಯೂಟ್ ಹಾಗೂ ಮಹಾರಾಜ ಸರ್ಕ್ಯೂಟ್ ಪ್ರದೇಶಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ನಗರ ಪಾಲಿಕೆ ‘ನೋ ಆಬ್ಜೆಕ್ಷನ್ ಸರ್ಟಿಫಿಕೆಟ್’ (NOC) ನೀಡಿದೆ.

ಆದರೆ ಅರಮನೆ ಮುಂಭಾಗದ ಪಾದಚಾರಿ ಮಾರ್ಗದಲ್ಲೇ ಟಾಂಗಾ ನಿಲ್ದಾಣ ಸ್ಥಾಪಿಸುವ ಯೋಚನೆಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪಾದಚಾರಿಗಳಿಗೆ ನಿರ್ಮಿಸಲಾದ ಮಾರ್ಗವನ್ನು ಯೋಜನೆ ಹೆಸರಿನಲ್ಲಿ ಒತ್ತುವರಿ ಮಾಡುವುದು ಅವೈಜ್ಞಾನಿಕ ಕ್ರಮ ಎಂದು ನಾಗರಿಕರು ಟೀಕಿಸಿದ್ದಾರೆ.

ಸಂಚಾರ ವ್ಯವಸ್ಥೆ, ಪಾದಚಾರಿಗಳ ಸುರಕ್ಷತೆ ಹಾಗೂ ಪ್ರವಾಸಿಗರ ಸಂಚಾರದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ನಗರ ಪಾಲಿಕೆ ಈ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಮೈಸೂರಿನ ಜನತೆ ಒತ್ತಾಯಿಸಿದ್ದಾರೆ. ಹಲವರು ಇದನ್ನು ನಗರ ಪಾಲಿಕೆಯ ಬೇಜವಾಬ್ದಾರಿ ಕ್ರಮ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Key words: strong opposition, Tonga stand, in front, Mysore Palace.

The post ಮೈಸೂರು ಅರಮನೆ ಮುಂಭಾಗ ಟಾಂಗಾ ಸ್ಟ್ಯಾಂಡ್‌ ಗೆ ತೀವ್ರ ವಿರೋಧ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಅಧಿವೇಶನದಲ್ಲಿ ಕರ್ತವ್ಯ ನಿರ್ಲಕ್ಷ್ಯ ಆರೋಪ: ಮೂವರ ಅಧಿಕಾರಿಗಳ ಅಮಾನತಿಗೆ ಸಿಎಂ ಸೂಚನೆ

ಬೆಂಗಳೂರು,ಮಾರ್ಚ್,16,2026 (www.justkannada.in):  ಬಜೆಟ್ ಅಧಿವೇಶನದ ವೇಳೆ ಕರ್ತವ್ಯ ನಿರ್ಲಕ್ಷ್ಯ ತೋರಿದ ಆರೋಪದ...

ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡೆಗೂ ಪ್ರಾಶಸ್ತ್ಯ ನೀಡಿ – ಡಾ.ಈ.ಸಿ.ನಿಂಗರಾಜ್ ಗೌಡ.

ಮೈಸೂರು, ಮಾರ್ಚ್ 16,2026 (www.justkannada.in): ಈಗಿನ ವಿದ್ಯಾರ್ಥಿಗಳು ಓದುವುದರ ಜೊತೆಗೆ ಕ್ರೀಡಾ...

4,824 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆಗೆ ಸಮ್ಮತಿ: ಸಚಿವ ಎಂ. ಬಿ. ಪಾಟೀಲ್

ಬೆಂಗಳೂರು,ಮಾರ್ಚ್,14,2026 (www.justkannada.in): ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ಕೋಲಾರ, ರಾಮನಗರ ಸೇರಿದಂತೆ  13...

ಯುದ್ದದ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು ಹೇಳಿಕೆ, ಜನರಲ್ಲಿ ಆತಂಕ ಉಂಟು ಮಾಡಿದೆ- ಪ್ರಧಾನಿ ಮೋದಿ

ಅಸ್ಸಾಂ, ಮಾರ್ಚ್, 14,2026 (www.justkannada.in):  ಯುದ್ದದ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು ಹೇಳಿಕೆಗಳನ್ನ...