19
April, 2026

A News 365Times Venture

19
Sunday
April, 2026

A News 365Times Venture

ಮೈಸೂರು: ಆ.19 ರಂದು ಛಾಯಾಚಿತ್ರ ಪ್ರದರ್ಶನ ಮತ್ತು ಸ್ಪರ್ಧೆ

Date:

ಮೈಸೂರು,ಆಗಸ್ಟ್,5,2025 (www.justkannada.in): ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಆಗಸ್ಟ್ 19 (ಮಂಗಳವಾರ) ರಂದು ವಿಶ್ವ ಛಾಯಾಗ್ರಹಣ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದ್ದು ಇದರ ಅಂಗವಾಗಿ ಸುದ್ದಿ ಛಾಯಾಚಿತ್ರ ಪ್ರದರ್ಶನ ಮತ್ತು ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಆಗಸ್ಟ್ 19ರಂದು ಪತ್ರಕರ್ತರ ಭವನದಲ್ಲಿ ನಡೆಯುವ ವಿಶ್ವ ಛಾಯಾಗ್ರಹಣ ದಿನಾಚರಣೆ ಸಮಾರಂಭದಲ್ಲಿ ಛಾಯಚಿತ್ರ ಪ್ರದರ್ಶನ ಮತ್ತು ಸ್ಪರ್ಧೆ ನಡೆಯಲಿದ್ದು, ಇದೇ ಸಮಾರಂಭದಲ್ಲಿ ಗಣ್ಯರು ಬಹುಮಾನ ಮತ್ತು ಪ್ರಮಾಣ ಪತ್ರ ವಿತರಣೆ ಮಾಡಲಿದ್ದಾರೆ.

ಛಾಯಾಚಿತ್ರ ಪ್ರದರ್ಶನ ಮತ್ತು ಸ್ಪರ್ಧೆಯಲ್ಲಿ ಭಾಗವಹಿಸುವ ಛಾಯಾಗ್ರಾಹಕರು ಈ ಕೆಳಕಂಡ ನಿಯಮಾವಳಿಗಳನ್ನು ಅನುಸರಿಸಬೇಕು:

  1. ಸುದ್ದಿ ಛಾಯಾಚಿತ್ರವು ದಿನಾಂಕ: 01-01-2023ರಿಂದ 31-07-2025ರ ಅವಧಿಗೆ ಒಳಪಟ್ಟಿರಬೇಕು.
  2. ಛಾಯಾಗ್ರಾಹಕರು 12 *18 ಅಳತೆಯ 3 ಛಾಯಾಚಿತ್ರವನ್ನು ಮುದ್ರಿಸಿ ಪ್ರದರ್ಶನಕ್ಕೆ ನೀಡತಕ್ಕದ್ದು.
  3. ಛಾಯಾಚಿತ್ರದಲ್ಲಿ ಛಾಯಾಗ್ರಾಹಕರ ಹೆಸರು ಮತ್ತು ಚೌಕಟ್ಟು ಇರಬಾರದು.
  4. ವನ್ಯ ಜೀವಿ ಸಂಬಂಧಿಸಿದ ಚಿತ್ರಗಳನ್ನು ಪರಿಗಣಿಸಲಾಗುವುದಿಲ್ಲ.
  5. ಮೊದಲ ಬಹುಮಾನ 10,000 ರೂ, ಎರಡನೇ ಬಹುಮಾನ 5,000 ರೂ. ಮತ್ತು ಮೂರನೇ ಬಹುಮಾನ 3,000 ರೂ. ಗಳ ನಗದು ಪುರಸ್ಕಾರವನ್ನು ನಿಗದಿಪಡಿಸಲಾಗಿದ್ದು, ಎಲ್ಲ ಸ್ಪರ್ಧಾಳುಗಳಿಗೆ ಪ್ರಮಾಣ ಪತ್ರ ವಿತರಿಸಲಾಗುವುದು.
  6. ಹಿರಿಯ ಛಾಯಾಗ್ರಾಹಕರು, ಹಿರಿಯ ಪತ್ರಕರ್ತರು ಹಾಗೂ ಪತ್ರಿಕೋದ್ಯಮ ವಿಭಾಗದ ಸಿಬ್ಬಂದಿಗಳು ತೀರ್ಪುಗಾರರಾಗಿ ಆಗಮಿಸಲಿದ್ದು, ಇವರ ತೀರ್ಮಾನವೇ ಅಂತಿಮವಾಗಿರುತ್ತದೆ.
  7. ಛಾಯಾಚಿತ್ರಗಳನ್ನು ಆಗಸ್ಟ್ 15ರೊಳಗೆ ಜಿಲ್ಲಾ ಪತ್ರಕರ್ತರ ಸಂಘಕ್ಕೆ ತಲುಪಿಸಬೇಕು.

ಹೆಚ್ಚಿನ ಮಾಹಿತಿಗೆ ಮೊ. ನಂ. 9741511340, 9845653548, 7019329722 ಇಲ್ಲಿಗೆ ಸಂಪರ್ಕಿಸಬಹುದಾಗಿದೆ.

Key words: Photography, exhibition, competition, Mysore District Journalists Association

The post ಮೈಸೂರು: ಆ.19 ರಂದು ಛಾಯಾಚಿತ್ರ ಪ್ರದರ್ಶನ ಮತ್ತು ಸ್ಪರ್ಧೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಹಿಳಾ ಮೀಸಲಾತಿ ಮಸೂದೆಗೆ ಸೋಲು: 30 ವರ್ಷಗಳ ಹಿಂದಿನ ಕರಾಳ ಇತಿಹಾಸ ಮತ್ತೆ ಮರುಕಳಿಸಿದೆ- ಹೆಚ್ ಡಿಕೆ

ನವದೆಹಲಿ,ಏಪ್ರಿಲ್,9,2026 (www.justkannada.in):  ಲೋಕಸಭೆಯಲ್ಲಿ ಮಹಿಳಾ ಮೀಸಲಾತಿge ಮಸೂದೆಗೆ ಸೋಲುಂಟಾಗಿದ್ದು, ಈ ಕುರಿತು...

ಮುಸ್ಲೀಮರು ಪಕ್ಷದ ಬೆನ್ನಿಗೆ ನಿಂತಿದ್ದಾರೆ: ಅವರನ್ನ ನಿರ್ಲಕ್ಷಿಸಿಲ್ಲ-ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಏಪ್ರಿಲ್,18,2026 (www.justkannada.in): ಮುಸ್ಲೀಮರು ಕಾಂಗ್ರೆಸ್ ಪಕ್ಷದ ಬೆನ್ನಿಗೆ ನಿಂತಿದ್ದಾರೆ. ಕಾಂಗ್ರೆಸ್ ಅಲ್ಪಸಂಖ್ಯಾತರನ್ನ...

ಕೃತಕ ಬುದ್ದಿಮತ್ತೆಗಾಗಿ ನಿಯಂತ್ರಕ ಚೌಕಟ್ಟು ರೂಪಿಸುವಲ್ಲಿ ನ್ಯಾಯಾಂಗ ನಿರ್ಣಾಯಕ ಪಾತ್ರ ವಹಿಸುತ್ತದೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಏಪ್ರಿಲ್,18,2026 (www.justkannada.in): ಭಾರತದಲ್ಲಿ ಕೃತಕ ಬುದ್ಧಿಮತ್ತೆಗಾಗಿ ನಿಯಂತ್ರಕ ಚೌಕಟ್ಟನ್ನು ರೂಪಿಸುವಲ್ಲಿ ನ್ಯಾಯಾಂಗವು...

ಏ.20 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು,ಏಪ್ರಿಲ್,18,2026 (www.justkannada.in):  ಸಿಎಂ ಸಿದ್ದರಾಮಯ್ಯ ಏಪ್ರಿಲ್ 20 ರಂದು ಮೈಸೂರು ಜಿಲ್ಲಾ...