12
July, 2026

A News 365Times Venture

12
Sunday
July, 2026

A News 365Times Venture

ಮೈಸೂರು ದಸರಾದಲ್ಲಿ ಕಂಬಳ: ಕೇಂದ್ರ ಸಚಿವ HDK  ಆಕ್ಷೇಪ

Date:

ಬೆಂಗಳೂರು,ಜುಲೈ,11,2026 (www.justkannada.in): ಕರಾವಳಿ ಭಾಗದ ಕ್ರೀಡೆ ಕಂಬಳವನ್ನು ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಆಯೋಜಿಸುವುದಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಸಹ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಸಚಿವ ಹೆಚ್ ಡಿಕೆ, ‘ಪರಂಪರಾಗತವಾಗಿ ತನ್ನದೇ ಆದ ವೈಶಿಷ್ಟ್ಯದಿಂದ ಕಂಗೊಳಿಸುತ್ತಿರುವ ಮೈಸೂರು ದಸರಾ ಉತ್ಸವದಲ್ಲಿ ಕಂಬಳವನ್ನು ಸೇರಿಸುವ ಅಗತ್ಯವಿಲ್ಲ. ಈವರೆಗೂ ನಡೆದುಕೊಂಡು ಬಂದಿರುವ ದಸರಾಕ್ಕೆ ಧಕ್ಕೆ ತರುವ ಪ್ರಯತ್ನ ಖಂಡಿತ ಬೇಡ’ ಎಂದಿದ್ದಾರೆ.

ಕಂಬಳವು ಕರಾವಳಿ  ಭಾಗದ ಸಾಂಸ್ಕೃತಿಕ ಶ್ರೇಷ್ಠತೆ ಮತ್ತು ನಂಬಿಕೆಗಳ ಸಂಕೇತವಾಗಿದೆ. ಕಂಬಳ ಭೌಗೋಳಿಕವಾಗಿ ಆ ಭಾಗಕ್ಕೆ ಮಾತ್ರ ಸರಿಹೊಂದುವ ಆಚರಣೆಯೂ ಹೌದು. ಅದನ್ನು ಮೈಸೂರಿಗೆ ತಂದು ದೈವಿಕ ಹಿನ್ನೆಲೆಯ ಆ ಪರಂಪರೆ, ಪಾವಿತ್ರ್ಯತೆಗೆ ಧಕ್ಕೆ ತರುವುದನ್ನು ಒಪ್ಪಲಾಗದು ಎಂದು ಕಿಡಿಕಾರಿದ್ದಾರೆ.

‘ಕರಾವಳಿ ಪ್ರದೇಶ ಹಸಿರು ಮತ್ತು ನೀರಿನ ಸಂಗಮ. ಇಂಥ ಪ್ರಾಕೃತಿಕ ಹಿನ್ನೆಲೆಯಲ್ಲಿ ಕಂಬಳವನ್ನು ಕಣ್ತುಂಬಿಕೊಳ್ಳುವುದೇ ಧನ್ಯತೆಯ ಅನುಭವ ಎನ್ನುವುದು ನನ್ನ ಭಾವನೆ. ಹೀಗಾಗಿ ಮೈಸೂರು ಮತ್ತು ಕರಾವಳಿ ಜನರ ಭಾವನೆಗಳಿಗೆ ನೋವುಂಟು ಮಾಡುವುದು ಬೇಕಿಲ್ಲ ಎಂದು  ಹೆಚ್ ಡಿಕೆ ತಿಳಿಸಿದ್ದಾರೆ.

Key words: Kambala, Mysore Dasara,  Union Minister, HDK, objects

The post ಮೈಸೂರು ದಸರಾದಲ್ಲಿ ಕಂಬಳ: ಕೇಂದ್ರ ಸಚಿವ HDK  ಆಕ್ಷೇಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿಎಂ ಡಿಕೆಶಿ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದ್ದಾರೆ- ಶಾಸಕ ಅರವಿಂದ ಬೆಲ್ಲದ್

ಹುಬ್ಬಳ್ಳಿ,ಜುಲೈ,11,2026 (www.justkannada.in): ಸಿಎಂ ಡಿಕೆ ಶಿವಕುಮಾರ್ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದ್ದಾರೆ...

ರಾಜ್ಯದಲ್ಲಿ ಇರೋದು ಟೆಂಡರ್ ಸರ್ಕಾರ, ಡಿಕೆಶಿ ಟೆಂಡರ್ ಸಿಎಂ- ಆರ್.ಅಶೋಕ್ ವ್ಯಂಗ್ಯ

ಮೈಸೂರು,ಜುಲೈ,11,2026 (www.justkannada.in): ರಾಜ್ಯದಲ್ಲಿ ಇರೋದು ಟೆಂಡರ್ ಸರ್ಕಾರ. ಡಿಕೆ ಶಿವಕುಮಾರ್ ಟೆಂಡರ್...

ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಬಿಜೆಪಿಗೆ ಡಿಸಿಎಂ ಪರಮೇಶ್ವರ್ ತಿರುಗೇಟು

ಬೆಂಗಳೂರು, ಜುಲೈ 11,2026 (www.justkannada.in): ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದಕ್ಕೆ ಮುಂದಾಗಿರುವ...

ಪೊಲೀಸರು ಡೀಲ್ ಹಾಗೂ ಅಪರಾಧಗಳಲ್ಲಿ ಭಾಗಿಯಾದರೆ ನಿರ್ದಾಕ್ಷಣ್ಯ ಕ್ರಮ -ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, ಜುಲೈ,11,2026 (www.justkannada.in): “ಯಾವುದೇ ಪೊಲೀಸ್ ಅಧಿಕಾರಿಗಳು ಡೀಲ್ ಗಳು ಹಾಗೂ...