11
March, 2026

A News 365Times Venture

11
Wednesday
March, 2026

A News 365Times Venture

ಮೈಸೂರು ಮಹಾನಗರ ಪಾಲಿಕೆ ಚುನಾವಣೆಗೆ ಆಗ್ರಹಿಸಿ ಮಾ.5 ರಂದು ಪ್ರತಿಭಟನೆ

Date:

ಮೈಸೂರು,ಮಾರ್ಚ್,3,2025 (www.justkannada.in): ಮೈಸೂರು ಮಹಾನಗರ ಪಾಲಿಕೆ ಚುನಾವಣೆ ಹೋರಾಟ ಸಮಿತಿ ವತಿಯಿಂದ  ಮೈಸೂರು ಮಹಾನಗರ ಪಾಲಿಕೆ ಚುನಾವಣೆ ನಡೆಸುವಂತೆ ಆಗ್ರಹಿಸಿ ಮಾ.5 ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಸ್ಥಳೀಯ ಸಂಸ್ಥೆ ಚುನಾವಣೆ ಮುಂದೂಡುತ್ತಿರುವ ವಿಷಯವಾಗಿ ಕೂಡಲೇ ಮೈ‌.ನ‌.ಪಾ ಚುನಾವಣೆ ಮಾಡಬೇಕೆಂದು ಆಗ್ರಹಿಸಿ  ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ನಗರದ ದೇವರಾಜ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಜಲದರ್ಶಿನಿ ಸಭಾಂಗಣದಲ್ಲಿ ಸಭೆಯನ್ನು ನಡೆಸಲಾಯಿತು.

05/03/2025 ರಂದು ಬೆಳಿಗ್ಗೆ 11 ಗಂಟೆಯಿಂದ ಮಹಾನಗರಪಾಲಿಕೆ ಮುಂಭಾಗದಲ್ಲಿ ಪ್ರತಿಭಟನೆ ಮಾಡುವುದು.ಮೊಹಲ್ಲಾಗಳಲ್ಲಿ ಕರಪತ್ರಗಳನ್ನು ಮಾಡಿಸಿ  ಹಂಚುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ & ಉಸ್ತುವಾರಿ ಸಚಿವರ ಭೇಟಿಯನ್ನು ಮಾಡುವುದಕ್ಕೆ ಸಭೆಯಲ್ಲಿ ತೀರ್ಮಾನಿಸಲಾಯುತು.

ಈ ಸಭೆಯಲ್ಲಿ ಇತಿಹಾಸ ತಜ್ಞರು ಫ್ರೊ.ನಂಜರಾಜ ಅರಸ್ , ಸೋಸಲೆ ಸಿದ್ದರಾಜು , ಅರವಿಂದ್ ಶರ್ಮ ,ಸೋಮರಾಜ ಅರಸು, ಪುಟ್ಟನಂಜಯ್ಯ ದೇವನೂರು , ಆಮ್ ಆದ್ಮಿ ಪಕ್ಷದ ರಾಮಯ್ಯ ರವರು, ಮಾ.ಸ ಪ್ರವೀಣ್, ನಾಗೇಂದ್ರ , ಎಂ.ಎಫ್.ಕಲೀಂ ರವರು, ಆದರ್ಶ ಅರಸ್ ರವರು, ಯಮುನಾ , ಶ್ರೀವಾರಿ ನಾಗರಾಜ್ , ಸುರೇಶ್ ಬಾಬು , ಕೆ ಆರ್ ಎಸ್ ಪಕ್ಷದ ಮುಖಂಡರು , ಬಿ ಎಸ್ ಪಿ ಪಕ್ಷದ ಮುಖಂಡರು ಆಮ್ ಆದ್ಮಿ ಪಕ್ಷದ ಮುಖಂಡರು , ಎಸ್ ಡಿ ಪಿ ಐ ಪಕ್ಷದ ಮುಖಂಡರು ಸಿ ಪಿ ಐ ಹಾಗು ಕಾರ್ಮಿಕ ಸಂಘಟನೆಯ ಮುಖಂಡರು ಪ್ರಮುಖವಾಗಿ ಭಾಗವಹಿಸಿದ್ದರು.

Key words: Protest, demanding Mysore City Corporation, elections

The post ಮೈಸೂರು ಮಹಾನಗರ ಪಾಲಿಕೆ ಚುನಾವಣೆಗೆ ಆಗ್ರಹಿಸಿ ಮಾ.5 ರಂದು ಪ್ರತಿಭಟನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಅಂತರಾಷ್ಟ್ರೀಯ ವಿಮಾನ ನಿಲ್ದಾಣ: ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ- ಎಂ.ಬಿ ಪಾಟೀಲ್ ಅಸಮಾಧಾನ

ಬೆಂಗಳೂರು,ಮಾರ್ಚ್,11,2026 (www.justkannada.in):  ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ...

ಆ್ಯಸಿಡ್ ಸಂತ್ರಸ್ತರಿಗೆ 50 ಸಾವಿರ ರೂ. ಭತ್ಯೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ

ಬೆಂಗಳೂರು,ಮಾರ್ಚ್,11,2026 (www.justkannada.in): ಆ್ಯಸಿಡ್ ದಾಳಿಗೊಳಗಾದ ಮಹಿಳೆಯರಿಗೆ ಜೀವನ ನಿರ್ವಹಣೆಗಾಗಿ 50 ಸಾವಿರ...

LPG ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ರಾಜಕೀಯ ಹೊರತುಪಡಿಸಿ ಕೆಲಸ ಮಾಡಬೇಕಿದೆ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮಾರ್ಚ್,11,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ ಭಾರತದ ಮೇಲೂ ಪರಿಣಾಮ ಬೀರಿದ್ದು ಗ್ಯಾಸ್...

ಮೈಸೂರು ಅಭಿವೃದ್ಧಿ ಪ್ರಾಧಿಕಾರದ (MDA) ವ್ಯವಸ್ಥಾಪಕಿ ಶೃತಿ.ಬಿ ಪ್ರತಿನಿಯೋಜನೆ ರದ್ದು

  ಮೈಸೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರದ (MDA) ವ್ಯವಸ್ಥಾಪಕರಾಗಿ ಪ್ರತಿನಿಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿದ್ದ...