ಬೆಂಗಳೂರು,ಜೂನ್,3,2026 (www.justkannada.in): ರಾಜ್ಯದ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ ನಂತರ 13 ಮಂದಿ ಸಚಿವರಾಗಿ ಪದಗ್ರಹಣ ಮಾಡಿದ್ದು ಮೊದಲ ಬಾರಿಗೆ ಸಚಿವರಾಗಿ ಯತೀಂದ್ರ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸಿದರು.
ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ಯತೀಂದ್ರ ಸಿದ್ದರಾಮಯ್ಯ ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಈಶ್ವರ್ ಖಂಡ್ರೆ, ಭೈರತಿ ಸುರೇಶ್, ಎಂ.ಬಿ ಪಾಟೀಲ್, ರಾಮಲಿಂಗರೆಡ್ಡಿ, ಸತೀಶ್ ಜಾರಕಿಹೊಳಿ, ಕೃಷ್ಣಭೈರೇಗೌಡ, ಪ್ರಿಯಾಂಕ್ ಖರ್ಗೆ , ಯು ಟಿ ಖಾದರ್ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು. 
ಯತೀಂದ್ರ ಸಿದ್ದರಾಮಯ್ಯ ಮತ್ತು ಯು.ಟಿ ಖಾದರ್ ಅವರನ್ನ ಹೊರತುಪಡಿಸಿ ಉಳಿದವರು ಸಿದ್ದರಾಮಯ್ಯ ಸಂಪುಟದಲ್ಲೂ ಸಚಿವರಾಗಿ ಕೆಲಸ ನಿರ್ವಹಿಸಿದ್ದರು. ಯು.ಟಿ ಖಾದರ್ ವಿಧಾನಸಭೆ ಸ್ಪೀಕರ್ ಆಗಿದ್ದರು. ಉಳಿದ ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ನಲ್ಲಿ ತೀವ್ರ ಪೈಪೋಟಿ ಇದ್ದು ಶಾಸಕರು ಲಾಬಿ ಹೆಚ್ಚಾಗಿದೆ.
ಇನ್ನು ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ, ಮಾಜಿ ಸಿಎಂ ಸಿದ್ದರಾಮಯ್ಯ, ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಕೇರಳ ಸಿಎಂ ಸತೀಶನ್, ಇನ್ಫೋಸಿಸ್ ನಾರಾಯಣಮೂರ್ತಿ, ಸುಧಾಮೂರ್ತಿ ಅವರು ಸೇರಿ ಹಲವು ಉದ್ಯಮಿಗಳು ನಾಡಿನ ವಿವಿಧ ಮಠಾಧೀಶರು ಸೇರಿ ಹಲವರು ಪಾಲ್ಗೊಂಡಿದ್ದರು.
Key words: Yathindra Siddaramaiah, oath, minister, first time
The post ಮೊದಲ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಯತೀಂದ್ರ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




