11
November, 2025

A News 365Times Venture

11
Tuesday
November, 2025

A News 365Times Venture

ಯುವಕನಿಂದ ಚಾಮುಂಡಿ ಬೆಟ್ಟದ ಅರ್ಚಕರ ಮೇಲೆ ಹಲ್ಲೆ

Date:

ಮೈಸೂರು,ಫೆಬ್ರವರಿ,14,2025 (www.justkannada.in): ಮೈಸೂರಿನ ಚಾಮುಂಡಿ ಬೆಟ್ಟ ದೇವಾಲಯದ ಅರ್ಚಕ  ದೇವಪ್ರಸಾದ್ ದೀಕ್ಷಿತ್  ಅವರ  ಮೇಲೆ ಯುವಕನೊಬ್ಬ ಹಲ್ಲೆ ಮಾಡಿ ಹುಚ್ಚಾಟ ನಡೆಸಿರುವ ಘಟನೆ ನಡೆದಿದೆ.

ಸಿದ್ದಾರ್ಥ ಬಡಾವಣೆಯ ಶಾಂತಲಾ ಶಾಲೆ ಮುಖ್ಯಸ್ಥ ಪ್ರೊ. ಸಂತೋಷ್ ಮಗ ಸಿದ್ದಾಂತ್  ಎಂಬಾತ ಅರ್ಚಕ ದೇವಪ್ರಸಾದ್ ದೀಕ್ಷಿತ್ ಅವರ ಮೇಲೆ ಹಲ್ಲೆ ಮಾಡಿದ್ದಾನೆ. ದೇವಪ್ರಸಾದ್ ದೀಕ್ಷಿತ್  ಅವರ ಕುಟುಂಬ ಮೈಸೂರಿನ‌ ಸಿದ್ದಾರ್ಥ ನಗರ ಬಡಾವಣೆಯಲ್ಲಿ ವಾಸಿಸುತ್ತಿದ್ದು,  ಅದೇ ಬಡಾವಣೆಯಲ್ಲಿ ಪ್ರೊ. ಸಂತೋಷ್ ಕುಟುಂಬ ಸಹ ಇದೆ.

ಈ ಮಧ್ಯೆ ಸಿದ್ದಾಂತ್  ಸೋಮವಾರ ರಾತ್ರಿ 9 ಗಂಟೆ ಸಮಯದಲ್ಲಿ ಏಕಾಏಕಿ ದೇವಪ್ರಸಾದ್ ದೀಕ್ಷಿತ್ ಅವರ ಮನೆಗೆ ನುಗ್ಗಿ ಹಣ ಕೊಡುವಂತೆ ಪೀಡಿಸಿದ್ದಾನೆ. ಹಣ ಕೊಡದಿದ್ದಾಗ ದೇವಪ್ರಸಾದ್ ದೀಕ್ಷಿತ್ ಮುಖಕ್ಕೆ ಗುದ್ದಿ, ಗಾಯಗೊಳಿಸಿದ್ದು, ಆ ವೇಳೆಗೆ ಮನೆಗೆ ಬಂದ ದೇವಪ್ರಸಾದ್ ದೀಕ್ಷಿತ್ ಮಗ ಸುದೇವ್ ನೆರೆಹೊರೆಯವರ ಸಹಾಯ ಪಡೆದು ಸಿದ್ದಾಂತ್ ನನ್ನು ಹಿಡಿದು ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ.

ಇನ್ನು ಮಗನ ಹುಚ್ಚಾಟದ ವಿಚಾರ ಗೊತ್ತಾಗಿ ಪ್ರೊ. ಸಂತೋಷ್ ಪತ್ನಿ ಹಾಗೂ ಸಿದ್ದಾಂತ್ ತಾಯಿಯು  ದೀಕ್ಷಿತ್ ರ ಮನೆಗೆ ಬಂದು ಗೋಳಾಡಿದ್ದಾರೆ. ಸಿದ್ದಾಂತ್ ತಾಯಿಯ ಗೋಳಾಟ ಕಂಡು ಮರುಗಿದ ದೇವ ಪ್ರಸಾದ್ ಕುಟುಂಬ ಫೊಲೀಸರಿಗೆ ದೂರು ಕೊಡಲು ಹಿಂದೇಟು ಹಾಕಿದ್ದಾರೆ.

Key words: Drug addict, youth, Attack, priests, Chamundi Hills

The post ಯುವಕನಿಂದ ಚಾಮುಂಡಿ ಬೆಟ್ಟದ ಅರ್ಚಕರ ಮೇಲೆ ಹಲ್ಲೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಕುರಿತು...

ಧರ್ಮಸ್ಥಳ ಕೇಸ್: ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ- MLC ಸಿ.ಟಿ ರವಿ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಯಾಗುತ್ತಿದ್ದು...

ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಆಗಸ್ಟ್,18,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ...

ಮೈಸೂರು: ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಉದ್ಘಾಟಿಸಿದ ಸೆಸ್ಕ್ ಎಂಡಿ

ಮೈಸೂರು, ಆಗಸ್ಟ್‌, 18, 2025 (www.justkannada.in): ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ...