12
February, 2026

A News 365Times Venture

12
Thursday
February, 2026

A News 365Times Venture

ರಾಜ್ಯ ಸರ್ಕಾರಕ್ಕೆ ಸಾವಿರ ದಿನ: ಫೆ.14 ರಂದು ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ- ಸಚಿವ ಕೃಷ್ಣಭೈರೇಗೌಡ

Date:

ಬೆಂಗಳೂರು,ಫೆಬ್ರವರಿ, 10,2026 (www.justkannada.in):  ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಒಂದು ಸಾವಿರ ದಿನ ಪೂರೈಸುತ್ತಿದ್ದು, ಈ ಹಿನ್ನೆಲೆಯಲ್ಲಿ ಫೆಬ್ರವರಿ 14 ರಂದು ಹಾವೇರಿಯಲ್ಲಿ ಹಕ್ಕುಪತ್ರ ವಿತರಿಸುತ್ತೇವೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೃಷ್ಣಭೈರೇಗೌಡ, ಸಮಾವೇಶದಲ್ಲಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸುತ್ತೇವೆ.  ನಾವೇನು ಸರ್ಕಾರದ ಸಾವಿರ ದಿನದ ಸಂಭ್ರಮ ಮಾಡುತ್ತಿಲ್ಲ. ಬದಲಾಗಿ ಜನರ ಕೆಲಸವನ್ನು ಮಾಡುತ್ತಿದ್ದೇವೆ.  ನಮ್ಮ ಸರ್ಕಾರ ಬಂದ ಮೇಲೆ 2.20 ಲಕ್ಷ ಹಕ್ಕುಪತ್ರ ಕೊಟ್ಟಿದ್ದೇವೆ.  ಹಕ್ಕು ಪತ್ರ ಅಂದರೆ ಕೇವಲ ಪೇಪರ್ ಅಲ್ಲ.  ಇಸ್ವತ್ತು ಕೊಡಬಹುದಾದ ಗಣಕೀಕೃತ ದಾಖಲೆ ಇರಲಿದೆ.  ನಕಲು ಮಾಡಲು ಆಗದ ಹಕ್ಕುಪತ್ರ ನಾವು ಕೊಡಿತ್ತಿದ್ದೇವೆ.  ಹಕ್ಕುಪತ್ರ ಜತೆಗೆ ಉಪನೋಂದಣಿ ಕಚೇರಿಯಲ್ಲಿ ರಿಜಿಸ್ಟರ್ ಮಾಡಲಾಗುತ್ತದೆ ಎಂದರು.

ಸಂಪೂರ್ಣ ಹಕ್ಕನ್ನು ಫಲಾನುಭವಿಗಳಿಗೆ ವರ್ಗಾಯಿಸುತ್ತಿದ್ದೇವೆ. ಗುಡಿಸಲುಗಳಿಗೂ ನಮ್ಮ ಸರ್ಕಾರ ಹಕ್ಕುಪತ್ರ ಕೊಡಲಿದೆ.  ದಾಖಲೆಗಳಿಲ್ಲದ ಹಳ್ಳಿಗಳಲ್ಲಿ ವಾಸಿಸುವವರಿಗೆ ದರಖಾಸ್ತು ಬಗರ್ ಹುಕುಂ ಜಮೀನುಗಳಿಗೆ ದಾಖಲೆ ಇರಲಿಲ್ಲ, ಭೂ ಮಾಲೀಕತ್ವದ ವಿಚಾರವಾಗಿ ನಮ್ಮ ಸರ್ಕಾರ ಸ್ಪಷ್ಟತೆ ನೀಡಿದೆ.  ರಾಜ್ಯದಲ್ಲಿ 49 ಲಕ್ಷ ಜಮೀನುಗಳು ಮೃತರ ಹೆಸರಿನಲ್ಲಿವೆ. ಸಂಬಂಧಪಟ್ಟವರ ಹೆಸರಿಗೆ ಜಮೀನು ಮಾಡಿಕೊಡುವ ಕೆಲಸ ಮಾಡುತ್ತೇವೆ ಎಂದು ಸಚಿವ ಕೃಷ್ಣಭೈರೇಗೌಡ ತಿಳಿಸಿದರು.

Key words:  thousand days, state government, Minister, Krishna Bhairegowda

The post ರಾಜ್ಯ ಸರ್ಕಾರಕ್ಕೆ ಸಾವಿರ ದಿನ: ಫೆ.14 ರಂದು ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ- ಸಚಿವ ಕೃಷ್ಣಭೈರೇಗೌಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಜೆಟ್ ದಿನಾಂಕ ಸದ್ಯದಲ್ಲಿಯೇ ನಿಗದಿ-ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಫೆಬ್ರವರಿ,11,2026 (www.justkannada.in): ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು...

ಭೀಕರ ಅಪಘಾತಕ್ಕೆ ಇಬ್ಬರು ಮಕ್ಕಳು ಬಲಿ

ಬೆಂಗಳೂರು,ಫೆಬ್ರವರಿ,11,2026 (www.justkannada.in):  ತಂದೆಯ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಶಾಲಾ...

25 ಶಾಸಕರು ವಿದೇಶ ಪ್ರವಾಸಕ್ಕೆ ಹೋಗ್ತಿದ್ದೇವೆ- ಶಾಸಕ ಪುಟ್ಟರಂಗಶೆಟ್ಟಿ

ಬೆಂಗಳೂರು,ಫೆಬ್ರವರಿ,11,2026 (www.justkannada.in):  25 ಶಾಸಕರು ವಿದೇಶಿ ಪ್ರವಾಸಕ್ಕೆ ತೆರಳುತ್ತಿದ್ದೇವೆ ಎಂದು ಕಾಂಗ್ರೆಸ್...

ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಸಂಸದ ಯದುವೀರ್‌ ಒತ್ತಡ

ಮೈಸೂರು, ಫೆಬ್ರವರಿ,11,2026 (www.justkannada.in):  ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ...