ಬೆಂಗಳೂರು,ಮೇ,30,2026 (www.justkannada.in): ರಾಜ್ಯದಲ್ಲಿ 5 ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡುವ ಮೂಲಕ ನುಡಿದಂತೆ ನಡೆದಿದ್ದೇನೆ. ಉತ್ತಮ ಆಡಳಿತ ನೀಡಲು ಪ್ರಯತ್ನ ಮಾಡಿದ್ದೇನೆ ಎಂದು ಉಸ್ತುವಾರಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆದಿದ್ದು ಸಭೆಯಲ್ಲಿ ಡಿಕೆ ಶಿವಕುಮಾರ್ ಅವರನ್ನ ಅಧಿಕೃತವಾಗಿ ಸಿಎಲ್ ಪಿ ನಾಯಕರಾಗಿ ಆಯ್ಕೆ ಮಾಡಲಾಯಿತು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ತಮ್ಮ ಅವಧಿಯ ಆಡಳಿತದ ಬಗ್ಗೆ ವಿವರಣೆ ನೀಡಿದರು.
ರಾಜ್ಯದಲ್ಲಿ ನುಡಿದಂತೆ ನಡೆದಿದ್ದೇವೆ. ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ. 5 ಗ್ಯಾರಂಟಿ ಯೋಜನೆ ಅನುಷ್ಟಾನ ಮಾಡಿದ್ದೇವೆ . ಅತ್ಯುತ್ತಮ ಆಡಳಿತ ನೀಡುವ ಪ್ರಯತ್ನ ಮಾಡಿದ್ದೇನೆ ಕೇಂದ್ರದ ತಾರತಮ್ಯ ನೀತಿ ಹೊರತಾಗಿಯೂ ಉತ್ತಮ ಆರ್ಥಿಕ ನಿರ್ವಹಣೆ ಮಾಡಿದ್ದೇನೆ. ಈ ಪರಿಣಾಮ ಉಪಚುನಾವಣೆಯಲ್ಲಿ ಗೆದ್ದಿದ್ದೇವೆ ಎಂದರು.
ಆಡಳಿತಕ್ಕೆ ಸಹಕಾರ ನೀಡಿದ ಸಚಿವರು ಶಾಸಕರಿಗೆ ಸಿದ್ದರಾಮಯ್ಯ ಧನ್ಯವಾದ ಸಮರ್ಪಣೆ ಮಾಡಿದರು.
Key words: Siddaramaiah, CLP, meeting, good governance
The post ರಾಜ್ಯದಲ್ಲಿ 5 ಗ್ಯಾರಂಟಿ ಜಾರಿ : ಉತ್ತಮ ಆಡಳಿತ ನೀಡಲು ಪ್ರಯತ್ನ ಮಾಡಿದ್ದೇನೆ- CLP ಸಭೆಯಲ್ಲಿ ಸಿದ್ದರಾಮಯ್ಯ ನುಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




