3
March, 2026

A News 365Times Venture

3
Tuesday
March, 2026

A News 365Times Venture

ಲಾರಿ ಮಾಲೀಕರ ಮುಷ್ಕರ: 3ನೇ ಸುತ್ತಿನ ಸಭೆಗೆ ಮುಂದಾದ ಸಚಿವ ರಾಮಲಿಂಗರೆಡ್ಡಿ

Date:

ಬೆಂಗಳೂರು,ಏಪ್ರಿಲ್,17,2025 (www.justkannada.in):  ಡೀಸೆಲ್ ಬೆಲೆ ಇಳಿಕೆ ಸೇರಿ ಹಲವು ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಲಾರಿ ಮಾಲೀಕರು ಹೂಡಿರುವ ಮುಷ್ಕರ ಸಂಬಂಧ ಸಾರಿಗೆ ಸಚಿವ ರಾಮಲಿಂಗರೆಡ್ಡಿ 3ನೇ ಸುತ್ತಿನ ಸಭೆಗೆ ಮುಂದಾಗಿದ್ದಾರೆ.

ಇಂದು ಮಧ್ಯಾಹ್ನ 3 ಗಂಟೆಗೆ ಲಾರಿ ಮಾಲೀಕರ ಸಂಘದ ಜೊತೆ ವಿಧಾನಸೌಧದಲ್ಲಿ ಸಚಿವ ರಾಮಲಿಂಗರೆಡ್ಡಿ ಸಭೆ ನಡೆಸಲಿದ್ದಾರೆ.  ಈಗಾಗಲೇ ಸಚಿವ ರಾಮಲಿಂಗರೆಡ್ಡಿ ಲಾರಿ ಮಾಲೀಕರ ಸಂಘದ ಜೊತೆ ಮೊದಲ ಸುತ್ತಿನ ಸಭೆ ನಡೆಸಿದ್ದರು. ಬಳಿಕ ಸಿಎಂ ಸಿದ್ದರಾಮಯ್ಯ 2ನೇ ಸುತ್ತಿನ ಸಭೆ ನಡೆಸಿದ್ದರು. ಈ ಸಭೆಗಳು ವಿಫಲವಾಗಿದ್ದವು.

ನಂತರ ಲಾರಿ ಮಾಲೀಕರ ಸಂಘದ ಮುಷ್ಕರ ಮುಂದುವರೆದಿತ್ತು. ಇದೀಗ ಮತ್ತೆ ಲಾರಿ ಮಾಲೀಕರ ಜೊತೆ ಸಚಿವ ರಾಮಲಿಂಗರೆಡ್ಡಿ ಸಭೆಗೆ ಮುಂದಾಗಿದ್ದಾರೆ.   ಇಂದು ಮಧ್ಯಾಹ್ನ 3 ಗಂಟೆಗೆ ಲಾರಿ ಮಾಲೀಕರ ಸಭೆ ನಿಗದಿಯಾಗಿತ್ತು. ಎಲ್ಲಾ ಜಿಲ್ಲಾಧ್ಯಕ್ಷರನ್ನ ಕರೆದು ಸಭೆ ಮೂಲಕ ಮುಷ್ಕರವನ್ನ ತೀವ್ರಗೊಳಿಸಲು ಪ್ಲಾನ್ ಮಾಡಲಾಗಿತ್ತು. ಅದರೆ ಇದೀಗ ಸಚಿವರೇ ಸಭೆ ನಡೆಸಲು ಮುಂದಾಗಿದ್ದು ಈ ಹಿನ್ನೆಲೆ ಲಾರಿ ಮಾಲೀಕರ ಸಭೆ ರದ್ದಾಗಿದೆ.

Key words: Lorry owners, strike,  Minister, Ramalingareddy, meeting

The post ಲಾರಿ ಮಾಲೀಕರ ಮುಷ್ಕರ: 3ನೇ ಸುತ್ತಿನ ಸಭೆಗೆ ಮುಂದಾದ ಸಚಿವ ರಾಮಲಿಂಗರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಧ್ಯ ಪ್ರಾಚ್ಯ ಕೊಲ್ಲಿ ದೇಶಗಳಲ್ಲಿ ಘರ್ಷಣೆ: ಸಂತ್ರಸ್ತರ ನೆರವಿಗೆ ಸಹಾಯವಾಣಿ ಆರಂಭ

ಬೆಂಗಳೂರು ಗ್ರಾಮಾಂತರ, ಮಾರ್ಚ್,3,2026 (www.justkannada.in):  ಮಧ್ಯಪ್ರಾಚ್ಯ ಮತ್ತು ಕೊಲ್ಲಿ ದೇಶಗಳಲ್ಲಿ ಯುದ್ಧ,ಸಂಘರ್ಷ...

ನಾನು ಕಟ್ಟಿ ಬೆಳೆಸಿದ ಪಕ್ಷ, ಬ್ಲ್ಯಾಕ್ ಮೇಲ್ ಮಾಡಲು ಇಷ್ಟವಿಲ್ಲ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಮಾರ್ಚ್,3,2026 (www.justkannada.in):  ರಾಜ್ಯದಲ್ಲಿ ಅಧಿಕಾರ ಹಂಚಿಕೆ ವಿಚಾರ ಚರ್ಚಿತವಾಗಿದ್ದು,  ಈ ಬಗ್ಗೆ...

ಶಾಂತ ಸ್ವಭಾವ, ಪ್ರೀತಿ, ಸರಳ ಬದುಕನ್ನು ಜಗತ್ತಿಗೆ ಸಾರಿದ ಮಹಾನ್ ಚೇತನ ಕೈವಾರ ತಾತಯ್ಯ- ಎಚ್ಎ ವೆಂಕಟೇಶ್

ಮೈಸೂರು, ಮಾರ್ಚ್,3,2026 (www.justkannada.in): ಕೈವಾರ ತಾತಯ್ಯನವರು ಈ ನಾಡು ಕಂಡ ಅಪರೂಪದ...

ಪೋನ್ ಕದ್ದಾಲಿಕೆ ಆರೋಪ: ಇದೊಂದು ಅತೃಪ್ತ ಆತ್ಮಗಳ ಹತಾಶ ಹೇಳಿಕೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,3,2026 (www.justkannada.in): ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ...