27
August, 2026

A News 365Times Venture

27
Thursday
August, 2026

A News 365Times Venture

ವಿಶೇಷ ಸಚಿವ ಸಂಪುಟ ಸಭೆ: ಬೆಂ.ಗ್ರಾಮಾಂತರ ಜಿಲ್ಲೆ ಹೆಸರು ಬದಲಾವಣೆ ಸೇರಿ ಹಲವು ನಿರ್ಣಯ

Date:

ಚಿಕ್ಕಬಳ್ಳಾಪುರ,ಜುಲೈ 2,2025 (www.justkannada.in): ಇಂದು ಚಿಕ್ಕಬಳ್ಳಾಪುರ ಜಿಲ್ಲೆ ನಂದಿಬೆಟ್ಟದಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆದಿದ್ದು ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೆಸರು ಬದಲಾವಣೆ ಸೇರಿ ಹಲವು ನಿರ್ಣಯ ಕೈಗೊಳ್ಳಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಂದಿಗಿರಿಧಾಮದ ಮಯೂರ ಸಭಾಂಗಣದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಎಲ್ಲಾ ಸಚಿವರೂ ಭಾಗವಹಿಸಿದ್ದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನ  ಬೆಂಗಳೂರು ಉತ್ತರ ಜಿಲ್ಲೆ ಎಂದು, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಹೆಸರನ್ನು ಭಾಗ್ಯನಗರ ಎಂದು ಮರುನಾಮಕರಣ ಮಾಡುವುದಕ್ಕೆ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

ಸಭೆಯಲ್ಲಿ ಹಲವು ಮಹತ್ವದ ವಿಚಾರಗಳನ್ನು  ಚರ್ಚಿಸಲಾಗಿದೆ. ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳ ಜೊತೆಗೆ ಚಿತ್ರದುರ್ಗ, ಶಿವಮೊಗ್ಗ, ವಿಜಯನಗರ, ಕೊಪ್ಪಳ, ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆ ನಡೆಸಲಾಗಿದೆ. ಈಗಾಗಲೇ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲಾಗಿದೆ. ಮುಂದುವರೆದ ಭಾಗವಾಗಿ ನೆಲಮಂಗಲ, ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ ತಾಲ್ಲೂಕುಗಳನ್ನೊಳಗೊಂಡ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಮರು ನಾಮಕರಣ ಮಾಡಲು ಸಮ್ಮತಿಸಲಾಗಿದೆ.vtu

Key words: Cabinet meeting, Chikkaballapur,  name Change, Bengalore Rural, District

The post ವಿಶೇಷ ಸಚಿವ ಸಂಪುಟ ಸಭೆ: ಬೆಂ.ಗ್ರಾಮಾಂತರ ಜಿಲ್ಲೆ ಹೆಸರು ಬದಲಾವಣೆ ಸೇರಿ ಹಲವು ನಿರ್ಣಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ್ರತಿಪಕ್ಷಗಳು ತಮ್ಮ ಜವಾಬ್ದಾರಿ ಅರಿತುಕೊಂಡಿಲ್ಲ-BJP ವಿರುದ್ದ ಸಚಿವ ಲಕ್ಷ್ಮಣ್ ಸವದಿ ಕಿಡಿ

ಬೆಂಗಳೂರು,ಆಗಸ್ಟ್,25,2026 (www.justkannada.in): ಈ ಬಾರಿ ಅಧಿವೇಶನದಿಂದ ಯಾವ ಅನುಕೂಲ ಆಗಿಲ್ಲ ಎಂಬ...

ಅನಧಿಕೃತ ನಿಲುಗಡೆ: 382 ವಾಹನಗಳಿಗೆ ನೋಟಿಸ್ ಜಾರಿ

ಮೈಸೂರು,ಆಗಸ್ಟ್,25,2026 (www.justkannada.in): ಮೈಸೂರು ನಗರದ ಸಾರ್ವಜನಿಕ ರಸ್ತೆಗಳು, ಪಾದಚಾರಿ ಮಾರ್ಗಗಳು ಹಾಗೂ...

ನಾನೀಗ ಸರ್ಕಾರದ ಮುಖ್ಯಸ್ಥನಲ್ಲ: ಆದರೂ ನಾನು ಒಳ ಮೀಸಲಾತಿ, ಸಾಮಾಜಿಕ ನ್ಯಾಯದ ಪರ- ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಆಗಸ್ಟ್‌, 25,2026 (www.justkannada.in): ನಾನೀಗ ಸರ್ಕಾರದ ಮುಖ್ಯಸ್ಥನಲ್ಲ. ಅಧಿಕಾರ ಇರಲಿ, ಇಲ್ಲದಿರಲಿ...

ಸದನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಕಾಂಗ್ರೆಸ್ ಪಲಾಯಾನ-ಆರ್.ಅಶೋಕ್

ಬೆಂಗಳೂರು,ಆಗಸ್ಟ್,25,2026 (www.justkannada.in):  ಅಧಿವೇಶನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಸದನವನ್ನ ಬಂದ್ ಮಾಡಿ...