29
June, 2026

A News 365Times Venture

29
Monday
June, 2026

A News 365Times Venture

ಸಚಿವ ಜಮೀರ್ ಜೆಡಿಎಸ್ ಸೇರ್ತಾರಾ ಅನ್ನೋ ವಿಚಾರ: ಪಕ್ಷ ಯಾರನ್ನೂ ನೆಚ್ಚಿಕೊಂಡಿಲ್ಲ ಎಂದ ನಿಖಿಲ್

Date:

ಬೆಂಗಳೂರು,ಏಪ್ರಿಲ್,22,2026 (www.justkannada.in): ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಜೆಡಿಎಸ್ ಸೇರುತ್ತಾರೆಯೇ ಎಂಬ ವಿಷಯ ಮಾಧ್ಯಮಗಳಲ್ಲಿ ಚರ್ಚೆಯಾದ ಹಿನ್ನೆಲೆಯಲ್ಲಿ ಈ ಕುರಿತು ಪ್ರತಿಕ್ರಿಯಿಸಿದ  ಜೆಡಿಎಸ್ ಯುವಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಜೆಡಿಎಸ್ ಪಕ್ಷ ಯಾರನ್ನೂ ನೆಚ್ಚಿಕೊಂಡಿಲ್ಲ ಎಂದಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಈ ವಿಚಾರಕ್ಕೆ ಈಗಾಗಲೇ ಸಚಿವ ಜಮೀರ್ ಅಹ್ಮದ್ ಖಾನ್ ಅವರು  ಸ್ಪಷ್ಟೀಕರಣ ನೀಡಿದ್ದಾರೆ. ಜಮೀರ್ ಗೆ ಕಾಂಗ್ರೆಸ್ ಸ್ಥಾನಮಾನ ಕೊಟ್ಟಿದೆ. ಆ ಬಗ್ಗೆ ಚರ್ಚೆ ಬೇಡ. ಪಕ್ಷವನ್ನು ಕಟ್ಟಲು ಕಾರ್ಯಕರ್ತರಿದ್ದಾರೆ ಹೋರಾಟಕ್ಕೆ ಸಿದ್ದರಿದ್ದಾರೆ ಜೆಡಿಎಸ್ ಯಾರನ್ನೂ ನೆಚ್ಚಿಕೊಂಡಿಲ್ಲ ಎಂದರು.

ಸಿಎಂ ಯಾವಾಗಲೂ ಅಹಿಂದ ರಾಜಕಾರಣಿ ಎಂದು ಹೇಳುತ್ತಾರೆ. ಅಹಿಂದದಲ್ಲಿ ದ ಅನ್ನೋದು ಉರುಳಿ ಹೋಗಿದೆ. ರಾಜಣ್ಣ ನಾಗೇಂದ್ರರನ್ನ ಸಂಫುಟದಿಂದ ಕೈಬಿಡಲಾಗಿದೆ ಅಲ್ಪಸಂಖ್ಯಾತರಾದ ಜಬ್ಬಾರ್ ನಸೀರ್ ತಲೆತಂಡವಾಗಿದೆ.   ದಾವಣಗೆರೆ ದಕ್ಷಿಣದಲ್ಲಿ ಮುಸ್ಲೀಮರು ಹೆಚ್ಚಿದ್ದಾರೆ.  ಆ ಕ್ಷೇತ್ರದಲ್ಲಿ ಮುಸ್ಲೀಂ ಬಾಂಧವರಿಗೆ ಟಿಕೆಟ್ ಕೊಡಬೇಕಿತ್ತು. ಅಹಿಂದದಲ್ಲಿ ಅ ಅಲ್ಪಸಂಖ್ಯಾತ ದ ದಲಿತ ಹೋಗಿದೆ. ಉಳಿದಿರುವ ಹಿಂದುಳಿದ ಪದ ಯಾವಾಗ ಹೋಗುತ್ತೆ ಗೊತ್ತಿಲ್ಲ. ಸಂಫೂರ್ಣ ಅಹಿಂದ ಛಿಧ್ರವಾಗುತ್ತದೆಯೋ ಗೊತ್ತಿಲ್ಲ ಎಂದರು.

Key words:  Minister, Jameer, joining, JDS, Nikhil Kumaraswamy

The post ಸಚಿವ ಜಮೀರ್ ಜೆಡಿಎಸ್ ಸೇರ್ತಾರಾ ಅನ್ನೋ ವಿಚಾರ: ಪಕ್ಷ ಯಾರನ್ನೂ ನೆಚ್ಚಿಕೊಂಡಿಲ್ಲ ಎಂದ ನಿಖಿಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವಿದ್ಯುತ್ ನಿಗಮಗಳ ಖಾಸಗೀಕರಣ ಬೇಡ ಎನ್ನುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು, ಜೂನ್,29,2026 (www.justkannada.in): “ವಿದ್ಯುತ್ ನಿಗಮಗಳನ್ನು ಖಾಸಗೀಕರಣ ಮಾಡದಿರುವ ವಿಚಾರವಾಗಿ ನಾನೊಬ್ಬನೇ...

ಬೆಂಗಳೂರಿನಿಂದ 100 ಕಿ.ಮೀ. ದೂರದ ಸ್ಥಳಗಳಿಗೆ ಚತುಷ್ಪಥ ರೈಲ್ವೆ-ಕೇಂದ್ರ ಸಚಿವ ವಿ. ಸೋಮಣ್ಣ

ಬೆಂಗಳೂರು,ಜೂನ್,29,2026 (www.justkannada.in):  ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ ಚತುಷ್ಪಥ...

ಬಿಡದಿ ಟೌನ್ ಶಿಪ್ ವಿರುದ್ದ ಹೋರಾಟ: ಸರ್ಕಾರಕ್ಕೆ ಯಾವುದೇ ಪರಿಣಾಮವಾಗಲ್ಲ- ಸಚಿವ ಎಂ.ಬಿ ಪಾಟೀಲ್

ರಾಮನಗರ,ಜೂನ್,29,2026 (www.justkannada.in):  ಬಿಡದಿ ಟೌನ್ ಶಿಪ್ ನಿರ್ಮಾಣ ವಿರುದ್ದ ರೈತರ ಜೆಡಿಎಸ್...

ಶಾಸಕ ಪ್ರದೀಪ್ ಈಶ್ವರ್ ಗೆ ಚಪ್ಪಲಿ ಎಸೆತ ಕೇಸ್:  ಮತ್ತೆ ಐವರು ಆರೋಪಿಗಳ ಬಂಧನ

ಚಿಕ್ಕಬಳ್ಳಾಪುರ,ಜೂನ್,29,2026 (www.justkannada.in): ಚಿಕ್ಕಬಳ್ಳಾಪುರದಲ್ಲಿ ಕೆಂಪೇಗೌಡ ಜಯಂತಿ ಮೆರವಣಿಗೆ ವೇಳೆ ಕಾಂಗ್ರೆಸ್ ಶಾಸಕ...