14
March, 2026

A News 365Times Venture

14
Saturday
March, 2026

A News 365Times Venture

ಸಾಫ್ಟ್ ವೇರ್ ವೃತ್ತಿಯೊಂದಿಗೆ ಸೇವಾಕಾರ್ಯ: ಪುನೀತ್ ಜಿ ಕೂಡ್ಲೂರುಗೆ ಒಲಿದ ಪ್ರಶಸ್ತಿ

Date:

ಬೆಂಗಳೂರು,ಜುಲೈ,12,2025 (www.justkannada.in): ಸಾಫ್ಟ್ ವೇರ್ ವೃತ್ತಿಯೊಂದಿಗೆ ವಿವಿಧ ಸೇವಾಕಾರ್ಯದಲ್ಲಿ ತೊಡಗಿರುವ ಪುನೀತ್ ಜಿ ಕೂಡ್ಲೂರು ಅವರಿಗೆ ‘ಎಕ್ಸೆಲೆನ್ಸ್ ಇನ್ ಕಮ್ಯೂನಿಟಿ ಡೆವೆಲಪ್ ಮೆಂಟ್ ಅಂಡ್ ಸೋಷಿಯಲ್ ಸರ್ವಿಸ್’ ಪ್ರಶಸ್ತಿ ಲಭಿಸಿದೆ.

ಬೆಂಗಳೂರಿನ ಸದಾಶಿವನಗರದ ಹೈಡೆ ಪಾರ್ಕ್ ಹೋಟೆಲ್ ನಲ್ಲಿ ನಡೆದ ಕರ್ನಾಟಕ ಐಕಾನ್ ಎಕ್ಸೆಲೆಂಟ್ ಅವಾರ್ಡ್ -2025 ರಲ್ಲಿ ಪುನೀತ್ ಜಿ ಕೂಡ್ಲೂರು ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.  ಪುನೀತ್ ಜಿ ಕೂಡ್ಲೂರು ತಮ್ಮ ಸಾಫ್ಟ್ ವೇರ್ ವೃತ್ತಿಯೊಂದಿಗೆ ವಿದ್ಯಾಸ್ಪಂದನ  ಎಂಬ ಸ್ವಯಂ ಸೇವಾ ಸಂಸ್ಥೆ ಸ್ಥಾಪಿಸಿ ಪ್ರತಿ ವರ್ಷ 500 ಕ್ಕೂ ಹೆಚ್ಚು ಸರ್ಕಾರಿ ಶಾಲೆಯ ಮಕ್ಕಳಿಗೆ ಶೈಕ್ಷಣಿಕ ಸಹಾಯ ಮಾಡುತ್ತಿದ್ದಾರೆ. ಸರಸ್ವತಿ ಭಾರತೀಯ ಸಂಸ್ಕಾರ ಕೇಂದ್ರ ಸ್ಥಾಪಿಸಿ ಅದರಲ್ಲಿ ಹಲವು ವಿದ್ಯಾರ್ಥಿಗಳಿಗೆ ಶ್ಲೋಕ, ಸಂಸ್ಕಾರ ತರಗತಿಗಳನ್ನು ನಡೆಸುತ್ತಿದ್ದಾರೆ.

ಇದರ ಜೊತೆಗೆ ಪರಿಸರ, ರಕ್ತದಾನ ಸೇರಿದಂತೆ ಹಲವು ಸೇವಾ ಕಾರ್ಯಕ್ರಮ ಮಾಡುತ್ತಾ ಹಲವಾರು ಸಂಘ ಸಂಸ್ಥೆಗಳಲ್ಲಿ ತೊಡಗಿರುವ ಇವರ ಸೇವೆಯನ್ನು ಗುರುತಿಸಿ  ರಾಜ್ಯ ಮಟ್ಟದ ಸಮಾಜ ಸೇವೆ ಪ್ರಶಸ್ತಿ ಕರ್ನಾಟಕ ಎಕ್ಸಲೆನ್ಸ್ ಇನ್ ಕಮ್ಯೂನಿಟಿ ಡೆವೆಲಪ್ ಮೆಂಟ್ ಆಂಡ್ ಸೋಷಿಯಲ್ ಸರ್ವಿಸ್ ಪ್ರಶಸ್ತಿ  ನೀಡಲಾಗಿದೆ.

ಪ್ರಶಸ್ತಿ ಪ್ರದಾನ ಸಂದರ್ಭದಲ್ಲಿ ಡಾ. ಅಂಜನಪ್ಪ, ಪ್ರಕೃತಿ ಪ್ರಸನ್ನ , ಪೂಜಾ ಎನ್ , ಡಾ. ಪೃಥು ಪಿ ಅದ್ವೈತ್, ಶೃತಿ ರಾಕೇಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.‌vtu

Key words: Social work, Puneet G Kudlur, Award

The post ಸಾಫ್ಟ್ ವೇರ್ ವೃತ್ತಿಯೊಂದಿಗೆ ಸೇವಾಕಾರ್ಯ: ಪುನೀತ್ ಜಿ ಕೂಡ್ಲೂರುಗೆ ಒಲಿದ ಪ್ರಶಸ್ತಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗೂಡ್ಸ್ ರೈಲು ಡಿಕ್ಕಿ : ಮೂವರು ಯುವಕರು ಸಾವು.

ಮುಂಬೈ,ಮಾರ್ಚ್,14,2026 (www.justkannada.in):  ಗೂಡ್ಸ್ ರೈಲು ರೈಲು ಡಿಕ್ಕಿಯಾಗಿ ಮೂವರು ಯುವಕರು ಪ್ರಾಣ...

ಕೆಂಪೇಗೌಡ ವೃತ್ತ (ಮಣಿಪಾಲ್ ಜಂಕ್ಷನ್) ಕಾಮಗಾರಿಗಳ ಪರಿಶೀಲಿಸಿದ ಸಂಸದ ಯದುವೀರ್

 ಮೈಸೂರು,ಮಾರ್ಚ್,14,2026 (www.justkannada.in): ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದ  ಯದುವೀರ್ ಕೃಷ್ಣದತ್ತ ಚಾಮರಾಜ...

ಸಮಗ್ರ ಆರೋಗ್ಯಕ್ಕೆ ಯೋಗ-ವಿಜ್ಞಾನದ ಸಮನ್ವಯ ಅಗತ್ಯ: ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ಮೈಸೂರು,ಮಾರ್ಚ್,14,2026 (www.justkannada.in):  ಭಾರತ ದೇಶ ಜಗತ್ತಿಗೆ ಕೊಟ್ಟತಂಹ ಕೊಡಗೆಗಳಲ್ಲಿ ಯೋಗವೂ ಒಂದು....

ಕೃಷ್ಣ ಮೇಲ್ದಂಡೆ ಯೋಜನೆ: ಸರ್ವಪಕ್ಷ ಸಭೆ ಕರೆದಿದ್ದೇವೆ- ಡಿಸಿಎಂ ಡಿಕೆ ಶಿವಕುಮಾರ್

ಬಾಗಲಕೋಟೆ,ಮಾರ್ಚ್,14,2026 (www.justkannada.in) : ಕೃಷ್ಣ ಮೇಲ್ದಂಡೆ ಯೋಜನೆ ಸಂಬಂಧ ನವದೆಹಲಿಯಲ್ಲಿ ಸರ್ವಪಕ್ಷ...