28
July, 2026

A News 365Times Venture

28
Tuesday
July, 2026

A News 365Times Venture

ಸಾರಿಗೆ ನೌಕರರ ಮುಷ್ಕರ: ಸಿಎಂ ತಕ್ಷಣವೇ ಸಭೆ ಕರೆದು ಸೂಕ್ತ ತೀರ್ಮಾನ ತೆಗೆದುಕೊಳ್ಳಿ- ಬಿ.ವೈ.ವಿಜಯೇಂದ್ರ

Date:

ಬೆಂಗಳೂರು, ಆಗಸ್ಟ್‌ 05,2025 (www.justkannada.in): ಸರ್ಕಾರಿ ಸಾರಿಗೆ ನೌಕರರ ಮುಷ್ಕರಕ್ಕೆ ಕೂಡಲೇ ಪರಿಹಾರ ನೀಡಬೇಕು ಸಿಎಂ  ಸಿದ್ದರಾಮಯ್ಯ ಅವರು ತಕ್ಷಣವೇ ಸಭೆ ಕರೆದು ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ  ಆಗ್ರಹಿಸಿದರು.

ಈ ಕುರಿತು ಇಂದು ಮಾಧ್ಯಮಗಳ ಜೊತೆಗೆ  ಮಾತನಾಡಿದ ಬಿ ವೈ ವಿಜಯೇಂದ್ರ, ಮುಷ್ಕರದಿಂದ ಬಸ್ ಸಿಗದೇ ಗ್ರಾಮೀಣ ಭಾಗದಲ್ಲಿ ಶಾಲಾ ಮಕ್ಕಳಿಗೆ ತೀವ್ರ ಸಮಸ್ಯೆ ಆಗಿದೆ. ಜನರಿಗೆ ತೊಂದರೆಯಾಗುತ್ತಿದೆ. ಗ್ಯಾರಂಟಿ ಯೋಜನೆಯಿಂದ ಹಳ್ಳಿಗಳಲ್ಲಿ ಬಸ್ ಗಳನ್ನ ಕಡಿತ ಮಾಡಿದ್ದೀರಿ ಇದರಿಂದ ಬಸ್ ಗಳಿಲ್ಲದೆ ಈಗ ತೊಂದರೆಗೊಳಗಾಗಿದ್ದಾರೆ.  ಸರಕಾರಿ ಬಸ್ಸಿಲ್ಲದೆ ಕಾಲೇಜು, ಶಾಲಾ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ ಎಂದರು.

ಕೆಎಸ್‍ ಆರ್‍ಟಿಸಿ ಮತ್ತಿತರ ಸಾರಿಗೆ ಸಂಸ್ಥೆಗಳ ನೌಕರರಿಗೆ ವೇತನ ಕೊಡಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಬಹಳ ತಿಂಗಳುಗಳಿಂದ ಆರ್ಥಿಕ ಮುಗ್ಗಟ್ಟು ಇದ್ದು, ಸಮಸ್ಯೆ ಉಲ್ಬಣವಾಗಿದೆ. ಹಾಗಾಗಿ ಅವರ ಬೇಡಿಕೆ ಈಡೇರಿಸಲು ಮುಖ್ಯಮಂತ್ರಿಗಳಿಗೆ ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಡ ಮಾಡದೇ, ತಕ್ಷಣವೇ ಕಾರ್ಮಿಕರ ಮತ್ತು ಅಧಿಕಾರಿಗಳ ಸಭೆ ಕರೆಯಬೇಕು. ತಕ್ಷಣವೇ ಸಭೆ ಕರೆದು ಸೂಕ್ತತೀರ್ಮಾನ ತೆಗೆದಕೊಳ್ಳಬೇಕು ಇವತ್ತೇ ಸಭೆ ಕರೆದು ಸಾರಿಗೆ ನೌಕರರ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದರು.

Key words: Transport employees, strike,  CM, meeting, B.Y. Vijayendra

 

The post ಸಾರಿಗೆ ನೌಕರರ ಮುಷ್ಕರ: ಸಿಎಂ ತಕ್ಷಣವೇ ಸಭೆ ಕರೆದು ಸೂಕ್ತ ತೀರ್ಮಾನ ತೆಗೆದುಕೊಳ್ಳಿ- ಬಿ.ವೈ.ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೆಪಿಎಸ್ ಸಿಯಲ್ಲಿ ಅಕ್ರಮ: ಮೂರ್ನಾಲ್ಕು ದಿನಗಳಲ್ಲಿ ರಾಜ್ಯದಲ್ಲಿ ಹೋರಾಟ- ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು,ಜುಲೈ,27,2026 (www.justkannada.in):  ಕೆಪಿಎಸ್ ಸಿ ನಡೆಸಿದ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಆಗಿರುವ ಅಕ್ರಮವನ್ನ...

ಹೊಸರಿಗೂ ಅವಕಾಶ, ಹಿರಿಯರಿಗೂ ಬ್ಯಾಲೆನ್ಸ್ ಮಾಡ್ತಾರೆ- ಶಾಸಕ ಸಂತೋಷ್ ಲಾಡ್

ಬೆಂಗಳೂರು,ಜುಲೈ,27,2026 (www.justkannada.in):  ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕಾಲ ಕೂಡಿಬಂದಿದ್ದು ಸಿಎಂ...

ಮೇಕೆದಾಟು ಯೋಜನೆಗೆ ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ: ಕೇಂದ್ರ ಜಲಶಕ್ತಿ ಸಚಿವಾಲಯ ಸ್ಪಷ್ಟನೆ

ನವದೆಹಲಿ, ಜುಲೈ, 27,2026 (www.justkannada.in):  ಮೇಕೆದಾಟು ಬಹು ಉದ್ದೇಶದ ಜಲಾಶಯ ಯೋಜನೆಗೆ...

ಕ್ರೀಡಾ ಪಟುಗಳು ಸಾಧನೆ ಮಾಡಿ ಸಾವಿರಾರು ಯುವಜನರಿಗೆ ಮಾದರಿಯಾಗಬೇಕು- ಎಂ.ಎನ್ ಅನುಚೇತ್

ಮೈಸೂರು, ಜುಲೈ, 27,2026 (www.justkannada.in): ಕ್ರೀಡಾ ವಸತಿ ನಿಲಯಗಳಲ್ಲಿರುವ ವಿದ್ಯಾರ್ಥಿನಿಯರು ಕ್ರೀಡೆ...