9
March, 2026

A News 365Times Venture

9
Monday
March, 2026

A News 365Times Venture

ಸಿಎಂ ಸಿದ್ದರಾಮಯ್ಯಗೆ ಶಕ್ತಿ ಪ್ರದರ್ಶನ ಮಾಡುವ ಅವಶ್ಯಕತೆ ಇಲ್ಲ- ಸಚಿವ ದಿನೇಶ್ ಗುಂಡೂರಾವ್‍

Date:

ಕಾರವಾರ,ಜುಲೈ,30,2025 (www.justkannada.in): ಸಿಎಂ ಸಿದ್ದರಾಮಯ್ಯಗೆ ಶಕ್ತಿ ಪ್ರದರ್ಶನ ಮಾಡುವ ಅವಶ್ಯಕತೆ ಇಲ್ಲ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್‍ ಹೇಳಿದರು.

ಡಿಸಿಎಂ ಡಿಕೆ ಶಿವಕುಮಾರ್ ಬಿಟ್ಟು ಶಾಸಕರ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ಬಗ್ಗೆ ಟೀಕೆ ಹಿನ್ನೆಲೆಯಲ್ಲಿ ಈ ಕುರಿತು ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಶಾಸಕರ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸುತ್ತಿದ್ದಾರೆ.  ಡಿಕೆ ಶಿವಕುಮಾರ್ ಸಿಎಂ ಅನ್ನೋ ವಿಚಾರ ಮುಗಿದ ಅಧ್ಯಾಯ  ಸಿದ್ದರಾಮಯ್ಯ ಶಕ್ತಿಪ್ರದರ್ಶನ ಮಾಡುವ ಅವಶ್ಯಕತೆ ಇಲ್ಲ ಕಳೆದ ವರ್ಷದಂತೆ ಈಗಲೂ ಶಾಸಕರ ಜೊತೆ ಸಭೆ ನಡೆಸುತ್ತಿದ್ದಾರೆ ಅಷ್ಟೆ ಎಂದರು.

ಅಪರೇಷನ್ ಸಿಂಧೂರ ಕುರಿತು ನಿನ್ನೆ ಲೋಕಸಭೆಯಲ್ಲಿ ಪ್ರಧಾನಿ ಮೋದಿ ಉತ್ತರ ಕುರಿತು ಪ್ರತಿಕ್ರಿಯಿಸಿದ ಸಚಿವ ದಿನೇಶ್ ಗುಂಡೂರಾವ್,  ಪ್ರಧಾನಿ ಮೋದಿ ಯಾರಿಗಾದರೂ ಉತ್ತರ ಕೊಡುತ್ತಾರಾ ? ಅವರಿಗೆ ಪ್ರಶ್ನೆ ಕೇಳುವುದಕ್ಕೆ ಅವಕಾಶ ಇಲ್ಲ. ನಾನು ಯಾರಿಗೂ ಉತ್ತರ ಕೊಡಬೇಕಾಗಿಲ್ಲ ಎನ್ನುವ ಸರ್ವಾಧಿಕಾರಿ ಧೋರಣೆ ಇದು. ಪುಲ್ವಾಮಾ ಘಟನೆ ಆಗಲು ವೈಫಲ್ಯ ಏನು ಅನ್ನೋದನ್ನ ಹೇಳುವುದೇ ಇಲ್ಲ. ನಮ್ಮ 40 ಸೈನಿಕರು ಹುತಾತ್ಮರಾಗಿದ್ದಕ್ಕೆ ವೈಫಲ್ಯವೇನು ಎನ್ನುವುದನ್ನೇ ಬಹಿರಂಗಪಡಿಸಿಲ್ಲ. ಪಹಲ್ಗಾಮ್‌ ದಾಳಿಯಲ್ಲೂ ಯಾವುದೇ ಸ್ಪಷ್ಟ ಉತ್ತರ ಬಂದಿಲ್ಲ. ಅಮೆರಿಕಾ ಅಧ್ಯಕ್ಷ ಟ್ರಂಪ್ ನಾನೇ ಯುದ್ಧ ನಿಲ್ಲಿಸಿದ್ದೆಂದು ಹೇಳಿದ್ದರು. ಪಾಕಿಸ್ತಾನದವರು ಭಾರತದ 5 ಜೆಟ್‌ ಗಳನ್ನು ಹೊಡೆದಿದ್ದೇವೆ ಎಂದರು. ಆದರೆ ಕೇಂದ್ರ ಸರ್ಕಾರ ಇದುವರೆಗೂ ಈ ಬಗ್ಗೆ ಎಂದೂ ಸ್ಪಷ್ಟಪಡಿಸಿಲ್ಲ ಎಂದು ಕಿಡಿಕಾರಿದರು.vtu

Key words: CM Siddaramaiah, DCM, DK Shivakumar, Minister, Dinesh Gundu Rao

The post ಸಿಎಂ ಸಿದ್ದರಾಮಯ್ಯಗೆ ಶಕ್ತಿ ಪ್ರದರ್ಶನ ಮಾಡುವ ಅವಶ್ಯಕತೆ ಇಲ್ಲ- ಸಚಿವ ದಿನೇಶ್ ಗುಂಡೂರಾವ್‍ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಎರಡು ತಿಂಗಳಲ್ಲಿ ಹಲವು ಪ್ರಕರಣ ಭೇದಿಸಿದ ಮೈಸೂರು ಪೊಲೀಸರು: ನಗದು ಚಿನ್ನಾಭರಣ ವಶಕ್ಕೆ

ಮೈಸೂರು,ಮಾರ್ಚ್,9,2026 (www.justkannada.in):  ಮೈಸೂರು ಜಿಲ್ಲಾ ಪೊಲೀಸರು ಎರಡು ತಿಂಗಳಲ್ಲಿ ಕಾರ್ಯಾಚರಣೆ ನಡೆಸಿ...

ಎರಡು ಹಂತದಲ್ಲಿ ಜನಗಣತಿ-2027:  ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

ಬೆಂಗಳೂರು ಗ್ರಾಮಾಂತರ, ಮಾರ್ಚ್,9,2026 (www.justkannada.in): ಜನಗಣತಿ-2027 ಭಾರತದ 16ನೇ ಜನಗಣತಿ ಮತ್ತು...

799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ: MDA ಬಜೆಟ್‌ ನಲ್ಲಿ ಅಭಿವೃದ್ಧಿಗೆ ಒತ್ತು

ಮೈಸೂರು,ಮಾರ್ಚ್,9,2026 (www.justkannada.in): ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಪ್ರಸಕ್ತ ಆರ್ಥಿಕ ವರ್ಷದ...

ವೃದ್ದೆ ಮಾಂಗಲ್ಯ ದೋಚಿದ ಮಹಿಳೆಯರು:  FIR ದಾಖಲು.

ಮೈಸೂರು,ಮಾರ್ಚ್,9,2026 (www.justkannada.in): ಇಬ್ಬರು ಮಹಿಳೆಯರು  ವೃದ್ದೆಯ ಗಮನ ಬೇರೆಡೆ ಸೆಳೆದು 40...