19
September, 2026

A News 365Times Venture

19
Saturday
September, 2026

A News 365Times Venture

ಸೆಮಿಕಾನ್ ಇಂಡಿಯಾ-2026 ಸಮಾವೇಶ: ರಾಜ್ಯಕ್ಕೆ 15 ಸಾವಿರ ಕೋಟಿ ರೂ. ಬಂಡವಾಳ ಹರಿವು ನಿಚ್ಚಳ- ಸಚಿವ ಎಂ.ಬಿ ಪಾಟೀಲ್

Date:

ಬೆಂಗಳೂರು,ಸೆಪ್ಟಂಬರ್‌,19,2026 (www.justkannada.in): ದೆಹಲಿಯಲ್ಲಿ ನಡೆದ ಸೆಮಿಕಾನ್ ಇಂಡಿಯಾ-2026 ಸಮಾವೇಶದಲ್ಲಿ 20ಕ್ಕೂ ಹೆಚ್ಚು ಕಂಪನಿಗಳ ಜತೆ ಮಾತುಕತೆ ನಡೆಸಿದ್ದು, ರಾಜ್ಯಕ್ಕೆ ₹15 ಸಾವಿರ ಕೋಟಿಗೂ ಹೆಚ್ಚಿನ ಬಂಡವಾಳ ಹರಿದು ಬರುವ ಸಾಧ್ಯತೆ ನಿಚ್ಚಳವಾಗಿದೆ. ಈ ಅವಕಾಶವನ್ನು ನಮ್ಮದಾಗಿಸಿಕೊಳ್ಳಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನೂ ತ್ವರಿತವಾಗಿ ಕೈಗೊಳ್ಳಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.

ಎರಡು ದಿನಗಳ ಸೆಮಿಕಾನ್ ಇಂಡಿಯಾ ಸಮಾವೇಶಕ್ಕೆ ಉನ್ನತ ಮಟ್ಟದ ನಿಯೋಗದೊಂದಿಗೆ ತೆರಳಿದ್ದ ಅವರು, ದೆಹಲಿಯಿಂದ ವಾಪಸ್ ಆದ ಬಳಿಕ ಶನಿವಾರ‌ ಸಚಿವ ಎಂ.ಬಿ ಪಾಟೀಲ್ ಈ ವಿವರ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, ಸೆಮಿಕಾನ್ ಇಂಡಿಯಾ ಸಮಾವೇಶದಲ್ಲಿ ಲ್ಯಾಮ್ ರೀಸರ್ಚ್ ಕಂಪನಿಯು ರಾಜ್ಯದಲ್ಲಿ ₹9,298 ಕೋಟಿ ಮತ್ತು ಅಪ್ಲೈಡ್ ಮೆಟೀರಿಯಲ್ಸ್ ಮುಂದಿನ 10 ವರ್ಷಗಳಲ್ಲಿ ಮೊದಲ ಹಂತದಲ್ಲಿ ₹3,600 ಕೋಟಿ ಬಂಡವಾಳ ಹೂಡುವುದಾಗಿ ಘೋಷಿಸಿವೆ. ಈ ಎರಡೂ ಯೋಜನೆಗಳಿಂದ ರಾಜ್ಯದ ಸೆಮಿಕಂಡಕ್ಟರ್ ಪೂರೈಕೆ ಸರಪಳಿ, ಚಿಪ್ ವಿನ್ಯಾಸ ಮತ್ತು ಈ ಕ್ಷೇತ್ರದ ಸಾಧನಗಳ ತಯಾರಿಕೆ, ಪ್ರಿಸಿಷನ್ ಎಂಜಿನಿಯರಿಂಗ್, ಸಂಶೋಧನೆ ಮತ್ತು ಅಭಿವೃದ್ಧಿ ಇವುಗಳ ಚಿತ್ರಣವೇ ಬದಲಾಗಲಿದೆ ಎಂದಿದ್ದಾರೆ.

ಲ್ಯಾಮ್ ರೀಸರ್ಚ್ ಕಂಪನಿಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ಆದಿನಾರಾಯಣ ಹೊಸಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ 73 ಎಕರೆ ಭೂಮಿ ನೀಡಲಾಗಿದೆ. ಇಲ್ಲಿ ದೇಶದ ಪ್ರಪ್ರಥಮ ಸಿಲಿಕಾನ್ ಬಿಡಿಭಾಗಗಳ ತಯಾರಿಕಾ ಸ್ಥಾವರ ಬರಲಿದ್ದು, 1,000ಕ್ಕೂ ಹೆಚ್ಚು ನೇರ ಹೈಟೆಕ್ ಉದ್ಯೋಗಗಳು ಸೃಷ್ಟಿಯಾಗಲಿವೆ. ಜತೆಗೆ ರಾಜ್ಯದಲ್ಲಿ ಇದರಿಂದ ಉನ್ನತ ಮಟ್ಟದ ಸೆಮಿಕಂಡಕ್ಟರ್ ಮೆಟೀರಿಯಲ್ಸ್ ಮತ್ತು ಬಿಡಿಭಾಗಗಳ ತಯಾರಿಕೆ ಕೂಡ ಆರಂಭವಾಗಲಿದೆ. ಈ ಘಟಕ ನಿರ್ಮಾಣಕ್ಕೆ ಸದ್ಯದಲ್ಲೇ ಶಂಕುಸ್ಥಾಪನೆ ನೆರವೇರಿಸಲಾಗುವುದು. ಒಂದೂವರೆ ವರ್ಷದಲ್ಲಿ ಅದು ಕಾರ್ಯಾರಂಭ ಮಾಡುವ ವಿಶ್ವಾಸ ಕೂಡ ಇದೆ ಎಂದು ಅವರು ತಿಳಿಸಿದ್ದಾರೆ.

ಇದೇ ರೀತಿಯಲ್ಲಿ ಸೆಮಿಕಂಡಕ್ಟರ್ ಮೆಟೀರಿಯಲ್ಸ್ ಎಂಜಿನಿಯರಿಂಗ್ ಮತ್ತು ಈ ಕ್ಷೇತಕ್ಕೆ ಅಗತ್ಯವಿರುವ ಸಾಧನಗಳ ತಯಾರಿಕೆಗೆ ಹೆಸರಾಗಿರುವ ಅಮೆರಿಕದ ಅಪ್ಲೈಡ್ ಮೆಟೀರಿಯಲ್ಸ್ ಕಂಪನಿಯು 2035ರ ವೇಳೆಗೆ ಭಾರತದಲ್ಲಿ 5 ಬಿಲಿಯನ್ ಡಾಲರ್ ಹೂಡಿಕೆ ಮಾಡಲಿದೆ. ಕಂಪನಿಯು ತನ್ನ ದೀರ್ಘಾವಧಿ ಚಟುವಟಿಕೆಗಳ ವಿಸ್ತರಣೆಗೆ ಬೆಂಗಳೂರನ್ನು ಆಯ್ಕೆ ಮಾಡಿಕೊಂಡಿದೆ. ಇದರಂತೆ, ಇನ್ನು 10 ವರ್ಷಗಳಲ್ಲಿ ಅದು ರಾಜ್ಯದಲ್ಲಿ 3,600 ಕೋಟಿ ರೂ. ಬಂಡವಾಳ ಹೂಡಲಿದೆ. ಇದಕ್ಕಾಗಿ ಬೆಂಗಳೂರು ಸಿಗ್ನೇಚರ್ ಬಿಝಿನೆಸ್ ಪಾರ್ಕ್ ಪ್ರದೇಶದಲ್ಲಿ ಕಂಪನಿಗೆ 140 ಎಕರೆ ಭೂಮಿ ನೀಡಲಾಗುತ್ತಿದೆ. ಇದರಿಂದಲೂ 1,000ಕ್ಕೂ ಹೆಚ್ಚು ಗುಣಮಟ್ಟದ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಎಂ.ಬಿ ಪಾಟೀಲ್ ನುಡಿದಿದ್ದಾರೆ.

ಈ ಹೂಡಿಕೆಯಿಂದ ಭಾರತೀಯ ಪೂರೈಕೆದಾರರು, ಎಂಜಿನಿಯರಿಂಗ್ ಕಂಪನಿಗಳು, ತಾಂತ್ರಿಕ ಸಹಭಾಗಿಗಳು, ಸಂಶೋಧನಾ ಸಂಸ್ಥೆಗಳು ಮತ್ತು ಸೆಮಿಕಂಡಕ್ಟರ್ ಪ್ರತಿಭೆಗಳಿಗೆ ಅನುಕೂಲವಾಗಲಿದೆ. ಅಪ್ಲೈಡ್ ಮೆಟೀರಿಯಲ್ಸ್ ತಯಾರಿಕಾ ಘಟಕಕ್ಕೂ ಇನ್ನು ಕೆಲವೇ ತಿಂಗಳುಗಳಲ್ಲಿ ಭೂಮಿಪೂಜೆ ನೆರವೇರಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಎರಡು ದಿನಗಳ ಸೆಮಿಕಾನ್ ಇಂಡಿಯಾ ಸಮಾವೇಶದಲ್ಲಿ ತಾವು ನೆದರ್ಲೆಂಡ್ಸ್ ದೇಶದ ನೆಕ್ಸ್ಪೀರಿಯಾ, ಜಪಾನಿನ ಟೋಕಿಯೋ ಎಲೆಕ್ಟ್ರಾನಿಕ್ಸ್ ಮತ್ತು ಫ್ಯೂಜಿ ಫಿಲಂ, ಸಿಮ್ರಾ ಎಸ್.ಜಿ.ಎಸ್, ಎಟಿ ಅಂಡ್ ಎಸ್, ಸಿ.ಜಿ.ಸೆಮಿ, ಎರಿಕ್ಸನ್ ಮುಂತಾದ ಕಂಪನಿಗಳೊಂದಿಗೂ ರಾಜ್ಯದಲ್ಲಿ ಬಂಡವಾಳ ಹೂಡುವಂತೆ ಮತ್ತು ತಯಾರಿಕಾ ಚಟುವಟಿಕೆ ಆರಂಭಿಸುವಂತೆ ಕೋರಿರುವುದಾಗಿ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.‌

 

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕಸ್ತೂರಿ ರಂಗನ್‌ ವರದಿಯ ಆತಂಕಕ್ಕೆ ಕೇಂದ್ರ ಸರ್ಕಾರವೇ ಕಾರಣ: ಸಚಿವ ಮಧು ಬಂಗಾರಪ್ಪ ವಾಗ್ದಾಳಿ

ಶಿವಮೊಗ್ಗ,ಸೆಪ್ಟೆಂಬರ್ 19,2026 (www.justkannada.in) ರಾಜ್ಯ ಸರ್ಕಾರ  ಸ್ಪರ್ಷವಾಗಿ ಕಸ್ತೂರಿ ರಂಗನ್ ವರದಿಯನ್ನು...

ಮೈಸೂರು ಜಿಲ್ಲಾ ಪತ್ರಕರ್ತರ ಅಭ್ಯುದಯ ಸಹಕಾರ ಸಂಘಕ್ಕೆ ಲಾಭ- ಅಧ್ಯಕ್ಷ ಕೆ.ದೀಪಕ್ ಘೋಷಣೆ.

ಮೈಸೂರು,ಸೆಪ್ಟಂಬರ್‌,19,2026 (www.justkannada.in):  ಮೈಸೂರು ಜಿಲ್ಲಾ ಪತ್ರಕರ್ತರ ಅಭ್ಯುದಯ ಸಹಕಾರ ಸಂಘವು 2025-26...

ಪ್ರೊ. ಎಸ್. ರಂಗಪ್ಪ ಅವರಿಗೆ ಕ್ಯೋಟೋ ವಿಶ್ವವಿದ್ಯಾಲಯದಿಂದ ಸಂಶೋಧನಾ ಸಹಯೋಗದ ಆಹ್ವಾನ

ಮೈಸೂರು,ಸೆಪ್ಟಂಬರ್‌,19,2026 (www.justkannada.in) : ಮೈಸೂರು ವಿಶ್ವವಿದ್ಯಾಲಯದ ಮಾಜಿ ಕುಲಪತಿ, NASI Distinguished...

ಮೈಸೂರಿನಲ್ಲಿ 68ನೇ ವಾರ್ಷಿಕ ಈಜುಕೂಟ: ವಿವಿಧ ಪ್ರದರ್ಶನ ನೀಡಿ ಕಣ್ಮನ ಸೆಳೆದ ವಿದ್ಯಾರ್ಥಿಗಳು

ಮೈಸೂರು,ಸೆಪ್ಟಂಬರ್‌,19,2026 (www.justkannada.in)  ಮೈಸೂರಿನ ಶ್ರೀರಾಮಕೃಷ್ಣ ವಿದ್ಯಾಶಾಲೆಯಲ್ಲಿ ಆಯೋಜಿಸಿದ್ದ 68 ನೇ ವಾರ್ಷಿಕ ...